ಬಂದೋಹಿ (ಉತ್ತರ ಪ್ರದೇಶ): ಉತ್ತರಪ್ರದೇಶದ ಬಂದೋಹಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮಹಿಳೆ ತನ್ನೈದು ಮಕ್ಕಳನ್ನು ಗಂಗಾ ನದಿಗೆ ಎಸೆದು ತಾನೂ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಇಂದು ಬೆಳಗ್ಗೆ ಬಂದೋಹಿ ಜಿಲ್ಲೆಯ ಜಹಗೀರ್ಬಾದ್ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಲ್ಲಿ ತಾಯಿ ಮಾತ್ರ ಬದುಕುಳಿದಿದ್ದು, ಉಳಿದ ಎಲ್ಲಾ ಮಕ್ಕಳು ಸಾವನ್ನಪ್ಪಿವೆ. ಸಾವಿನ ಮನೆ ಸೇರಿದ ಮಕ್ಕಳು 11 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.
ಶಂಕರ್(6), ಕೇಶವ್ (3) , ಆರತಿ (11) ಸರಸ್ವತಿ (7) ಹಾಗೂ ಮಾತೋಶ್ರೀ(5) ಸಾವನ್ನಪ್ಪಿದ್ದಾರೆ.
ಪೊಲೀಸರು ಮಕ್ಕಳ ಮೃತದೇಹಗಳನ್ನೂ ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಗ್ರಾಮಸ್ಥರು ತಿಳಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.