ETV Bharat / bharat

ಸುಶಾಂತ್​ ಸಿಂಗ್ ಪ್ರಕರಣ ಸಿಬಿಐಗೆ: ಶರದ್​ ಪವಾರ್​, ನರೇಂದ್ರ ದಾಭೋಲ್ಕರ್​ ಪುತ್ರನ ಪ್ರತಿಕ್ರಿಯೆ ಹೀಗಿದೆ

author img

By

Published : Aug 20, 2020, 12:38 PM IST

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಸುಪ್ರೀಂ ಕೋರ್ಟ್ ಆದೇಶದ ಕುರಿತು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಹಾಗೂ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ​ ಪುತ್ರ ಪ್ರತಿಕ್ರಿಯಿಸಿದ್ದಾರೆ.

NCP chief Sharad Pawar tweet
ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​ ಟ್ವೀಟ್​

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತು ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರದ್​ ಪವಾರ್​ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ನ್ಯಾಯಾಲಯದ ಆದೇಶವನ್ನು ಗೌರವಿಸುತ್ತದೆ ಮತ್ತು ತನಿಖೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಪವಾರ್​ ಟ್ವೀಟ್​ ಮಾಡಿದ್ದಾರೆ. 2014 ರಲ್ಲಿ ಸಿಬಿಐ ಡಾ. ನರೇಂದ್ರ ದಾಭೋಲ್ಕರ್​ ಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಿತ್ತು. ಆದ್ರೆ ಅದು ಇದುವರೆಗೆ ಪೂರ್ಣಗೊಂಡಿಲ್ಲ. ಈ ಪ್ರಕರಣ ಕೂಡ ಅದೇ ರೀತಿ ಆಗಲ್ಲ ಎಂಬ ಭರವಸೆ ನನಗಿದೆ ಎಂದು ಪವಾರ್ ಹೇಳಿದ್ದಾರೆ.

  • I hope the investigation will not be carried on, as was done with Dr Narendra Dabholkar’s murder case also under investigation by the #CBI which commenced in 2014 and remains unresolved.

    — Sharad Pawar (@PawarSpeaks) August 20, 2020 " class="align-text-top noRightClick twitterSection" data=" ">

ಸುಪ್ರೀಂ ಕೋರ್ಟ್​ ತೀರ್ಪಿನ ಬಗ್ಗೆ ಡಾ. ನರೇಂದ್ರ ದಾಭೋಲ್ಕರ್ ಅವರ ಮಗ ಡಾ. ಹಮೀದ್​ ದಾಭೋಲ್ಕರ್ ಪ್ರತಿಕ್ರಿಯಿಸಿದ್ದು, ​ಸಿಬಿಐ ಇನ್ನೂ ಕೂಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ ವಿಚಾರವಾದಿ ನರೇಂದ್ರ ದಾಬೋಲ್ಕರ್​ ಹತ್ಯೆಯ ಮಾಸ್ಟರ್​ ಮೈಂಡ್​ ಪತ್ತೆಯಾಗಿಲ್ಲ. ಈ ಬಗ್ಗೆ ಬೇಸರವಿದೆ ಎಂದಿದ್ದಾರೆ.

ಅಂಧಶ್ರದ್ಧ ನಿರ್ಮೂಲನ್​ ಸಮಿತಿಯ ಮುಖ್ಯಸ್ಥರಾಗಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್​ ಅವರನ್ನು 2013 ಆಗಸ್ಟ್ 20 ರಂದು ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದರ ಜೊತೆ ವಿಚಾರವಾದಿಗಳಾದ ಗೋವಿಂದ್​ ಪನ್ಸಾರೆ, ಕರ್ನಾಟಕದ ಎಂ ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆ ಕೂಡ ಇನ್ನೂ ಪೂರ್ಣಗೊಂಡಿಲ್ಲ.

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತು ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರದ್​ ಪವಾರ್​ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ನ್ಯಾಯಾಲಯದ ಆದೇಶವನ್ನು ಗೌರವಿಸುತ್ತದೆ ಮತ್ತು ತನಿಖೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಪವಾರ್​ ಟ್ವೀಟ್​ ಮಾಡಿದ್ದಾರೆ. 2014 ರಲ್ಲಿ ಸಿಬಿಐ ಡಾ. ನರೇಂದ್ರ ದಾಭೋಲ್ಕರ್​ ಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಿತ್ತು. ಆದ್ರೆ ಅದು ಇದುವರೆಗೆ ಪೂರ್ಣಗೊಂಡಿಲ್ಲ. ಈ ಪ್ರಕರಣ ಕೂಡ ಅದೇ ರೀತಿ ಆಗಲ್ಲ ಎಂಬ ಭರವಸೆ ನನಗಿದೆ ಎಂದು ಪವಾರ್ ಹೇಳಿದ್ದಾರೆ.

  • I hope the investigation will not be carried on, as was done with Dr Narendra Dabholkar’s murder case also under investigation by the #CBI which commenced in 2014 and remains unresolved.

    — Sharad Pawar (@PawarSpeaks) August 20, 2020 " class="align-text-top noRightClick twitterSection" data=" ">

ಸುಪ್ರೀಂ ಕೋರ್ಟ್​ ತೀರ್ಪಿನ ಬಗ್ಗೆ ಡಾ. ನರೇಂದ್ರ ದಾಭೋಲ್ಕರ್ ಅವರ ಮಗ ಡಾ. ಹಮೀದ್​ ದಾಭೋಲ್ಕರ್ ಪ್ರತಿಕ್ರಿಯಿಸಿದ್ದು, ​ಸಿಬಿಐ ಇನ್ನೂ ಕೂಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ ವಿಚಾರವಾದಿ ನರೇಂದ್ರ ದಾಬೋಲ್ಕರ್​ ಹತ್ಯೆಯ ಮಾಸ್ಟರ್​ ಮೈಂಡ್​ ಪತ್ತೆಯಾಗಿಲ್ಲ. ಈ ಬಗ್ಗೆ ಬೇಸರವಿದೆ ಎಂದಿದ್ದಾರೆ.

ಅಂಧಶ್ರದ್ಧ ನಿರ್ಮೂಲನ್​ ಸಮಿತಿಯ ಮುಖ್ಯಸ್ಥರಾಗಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್​ ಅವರನ್ನು 2013 ಆಗಸ್ಟ್ 20 ರಂದು ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದರ ಜೊತೆ ವಿಚಾರವಾದಿಗಳಾದ ಗೋವಿಂದ್​ ಪನ್ಸಾರೆ, ಕರ್ನಾಟಕದ ಎಂ ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆ ಕೂಡ ಇನ್ನೂ ಪೂರ್ಣಗೊಂಡಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.