ETV Bharat / bharat

'ಗಲ್ಲು ಬೇಡ, ಜೀವಾವಧಿ ಶಿಕ್ಷೆ ವಿಧಿಸಿ'... ನಿರ್ಭಯಾ ಅಪರಾಧಿಯಿಂದ ಮತ್ತೆ ಅರ್ಜಿ

author img

By

Published : Mar 9, 2020, 8:42 PM IST

ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ನಿರ್ಭಯಾ ಪ್ರಕರಣದ ಆರೋಪಿ ವಿನಯ್ ಶರ್ಮಾ, ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್​ಗೆ ಅರ್ಜಿ ಸಲ್ಲಿಸಿದ್ದಾನೆ.

Nirbhaya convict
ವಿನಯ್ ಶರ್ಮಾ

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ಕನೇ ಅಪರಾಧಿಯಾದ ವಿನಯ್ ಶರ್ಮಾ, ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್​ ಮೊರೆ ಹೋಗಿದ್ದಾನೆ.

ಅಪರಾಧಿಗಳ ಪರ ವಕೀಲ ಎಪಿ ಸಿಂಗ್​ ಮೂಲಕ ಅನಿಲ್ ಬೈಜಾಲ್​ಗೆ ಅರ್ಜಿ ಸಲ್ಲಿಸಿರುವ ವಿನಯ್​, ಅಪರೂಪದಲ್ಲಿ ಅಪರೂಪದ ಪ್ರಕರಣಗಳಿಗೆ ಮೀಸಲಾಗಿರುವ ಮರಣದಂಡನೆಯಂತಹ ಶಿಕ್ಷೆಗೆ ನಾನು ಅರ್ಹನಲ್ಲ. ನನ್ನ ವಯಸ್ಸು, ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಇದಕ್ಕೆ ಪರ್ಯಾಯವಾಗಿ ಜೀವಾವಧಿ ಶಿಕ್ಷೆ ನೀಡಿ ಎಂದು ಉಲ್ಲೇಖಿಸಿದ್ದಾನೆ.

ಈ ಹಿಂದೆ ಪ್ರಕರಣದ ಅಪರಾಧಿಗಳಲ್ಲೊಬ್ಬನಾದ ಪವನ್​ ಕುಮಾರ್​ ಗುಪ್ತಾ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿತ್ತು.

ಇನ್ನು ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್, ಪವನ್, ವಿನಯ್ ಮತ್ತು ಅಕ್ಷಯ್​​ರನ್ನು ಮಾರ್ಚ್ 20 ರಂದು ಗಲ್ಲಿಗೇರಿಸುವಂತೆ ನ್ಯಾಯಾಲಯ ಹೊಸ ಡೆತ್ ವಾರೆಂಟ್​ ನೀಡಿದೆ.

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ಕನೇ ಅಪರಾಧಿಯಾದ ವಿನಯ್ ಶರ್ಮಾ, ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್​ ಮೊರೆ ಹೋಗಿದ್ದಾನೆ.

ಅಪರಾಧಿಗಳ ಪರ ವಕೀಲ ಎಪಿ ಸಿಂಗ್​ ಮೂಲಕ ಅನಿಲ್ ಬೈಜಾಲ್​ಗೆ ಅರ್ಜಿ ಸಲ್ಲಿಸಿರುವ ವಿನಯ್​, ಅಪರೂಪದಲ್ಲಿ ಅಪರೂಪದ ಪ್ರಕರಣಗಳಿಗೆ ಮೀಸಲಾಗಿರುವ ಮರಣದಂಡನೆಯಂತಹ ಶಿಕ್ಷೆಗೆ ನಾನು ಅರ್ಹನಲ್ಲ. ನನ್ನ ವಯಸ್ಸು, ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಂಡು ಇದಕ್ಕೆ ಪರ್ಯಾಯವಾಗಿ ಜೀವಾವಧಿ ಶಿಕ್ಷೆ ನೀಡಿ ಎಂದು ಉಲ್ಲೇಖಿಸಿದ್ದಾನೆ.

ಈ ಹಿಂದೆ ಪ್ರಕರಣದ ಅಪರಾಧಿಗಳಲ್ಲೊಬ್ಬನಾದ ಪವನ್​ ಕುಮಾರ್​ ಗುಪ್ತಾ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿತ್ತು.

ಇನ್ನು ಪ್ರಕರಣದ ನಾಲ್ವರು ಅಪರಾಧಿಗಳಾದ ಮುಖೇಶ್, ಪವನ್, ವಿನಯ್ ಮತ್ತು ಅಕ್ಷಯ್​​ರನ್ನು ಮಾರ್ಚ್ 20 ರಂದು ಗಲ್ಲಿಗೇರಿಸುವಂತೆ ನ್ಯಾಯಾಲಯ ಹೊಸ ಡೆತ್ ವಾರೆಂಟ್​ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.