ನವದೆಹಲಿ: ಈಗಾಗಲೇ ಬಡವರು, ವಲಸೆ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಕೆಲವು ಕೊಡುಗೆಗಳನ್ನು ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಮತ್ತೊಂದು ಪ್ಯಾಕೇಜ್ ಘೋಷಿಸಲಿದ್ದಾರೆ.
ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಯಾವ ವಲಯಕ್ಕೆ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಲಾಕ್ಡೌನ್ನಿಂದ ಪ್ರವಾಸೋದ್ಯಮ, ಸೇವಾ ವಲಯ, ಸಾರಿಗೆ ಮತ್ತು ಮೀನುಗಾರಿಕೆ ಉದ್ಯಮವೂ ಸಂಕಷ್ಟಕ್ಕೆ ಸಿಲುಕಿದೆ. ಈ ವಲಯದಲ್ಲಿರುವ ಉದ್ಯಮಿಗಳು ಮತ್ತು ಕಾರ್ಮಿಕರ ಕೈಹಿಡಿದು ಎತ್ತುವ ಸಾಧ್ಯತೆ ಇದೆ.
ಅಲ್ಲದೆ, ಎಲ್ಟಿಸಿಜಿ, ಡಿಡಿಟಿ ತೆರಿಗೆ ಕಡಿತ ಮತ್ತು ಕೃಷಿ ಮತ್ತು ಮೂಲ ಸೌಕರ್ಯದ ಮೇಲೆ ಬೆಳಕು ಚೆಲ್ಲುವ ಸಾಧ್ಯತೆಯಿದೆ.