ETV Bharat / bharat

ಅತ್ಯಾಚಾರಿಗಳು ಕ್ಷಮಾದಾನಕ್ಕೆ ಅರ್ಹರೇ ಅಲ್ಲ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ - ರಾಷ್ಟ್ರಪತಿ ರಾಮನಾಥ್​ ಕೋವಿಂದ್​​

ಫೋಕ್ಸೋ ಕಾಯ್ದೆಯಡಿ ಶಿಕ್ಷೆಗೊಳಗಾಗುವ ಆರೋಪಿಗಳು ಯಾವುದೇ ಕಾರಣಕ್ಕೂ ಕ್ಷಮಾದಾನಕ್ಕೆ ಅರ್ಹರೇ ಅಲ್ಲ ಎಂದು ರಾಷ್ಟ್ರಪತಿ ರಾಮನಾಥ್​​ ಕೋವಿಂದ್​ ಅಭಿಪ್ರಾಯಪಟ್ಟರು.

President Ram Nath Kovind
ರಾಷ್ಟ್ರಪತಿ ರಾಮನಾಥ್​ ಕೋವಿಂದ್​​
author img

By

Published : Dec 6, 2019, 5:54 PM IST

ಸಿರೋಹಿ(ರಾಜಸ್ಥಾನ): ಅತ್ಯಾಚಾರಿಗಳು ಯಾವುದೇ ಕಾರಣಕ್ಕೂ ಕ್ಷಮೆಗೆ ಅರ್ಹರೇ ಅಲ್ಲ ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಹೇಳಿದ್ರು. ರಾಜಸ್ಥಾನದ ಸಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ರು.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ ಭಾಷಣ
ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೊಳಗಾಗುವ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು. ಇಂತಹ ಘಟನೆಗಳು ದೇಶಕ್ಕೆ ಮಾರಕ. ಅತ್ಯಾಚಾರಿ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ರಾಷ್ಟ್ರಪತಿ ರಾಮನಾಥ್​​ ಕೋವಿಂದ್​​ರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು ಮಾಡಿದೆ ಎಂದವರು ತಿಳಿಸಿದರು.

ಕ್ಷಮಾದಾನ ಅರ್ಜಿಗಳ ಕುರಿತು ಸಂವಿಧಾನಕ್ಕೆ ಕೆಲವು ಅಗತ್ಯ ತಿದ್ದುಪಡಿಯಾಗಬೇಕಿದೆ. ಈ ಸಂಬಂಧ ಸಂಸತ್​​ ಪುನರ್​​ ಪರೀಶೀಲನೆ ನಡೆಸಬೇಕೆಂದು ಹೇಳಿದರು.

ಈಗಾಗಲೇ ದೇಶದ ಗಮನ ಸೆಳೆದಿರುವ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ, ತೆಲಂಗಾಣ ಪಶುವೈದ್ಯೆ ಕೇಸ್​ ಹಾಗೂ ಉನ್ನಾವೋ ಪ್ರಕರಣದ ಬಗ್ಗೆ ರಾಷ್ಟ್ರಪತಿಗಳು ಕಳವಳ ವ್ಯಕ್ತಪಡಿಸಿದರು.

ಸಿರೋಹಿ(ರಾಜಸ್ಥಾನ): ಅತ್ಯಾಚಾರಿಗಳು ಯಾವುದೇ ಕಾರಣಕ್ಕೂ ಕ್ಷಮೆಗೆ ಅರ್ಹರೇ ಅಲ್ಲ ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಹೇಳಿದ್ರು. ರಾಜಸ್ಥಾನದ ಸಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ರು.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​​ ಭಾಷಣ
ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೊಳಗಾಗುವ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು. ಇಂತಹ ಘಟನೆಗಳು ದೇಶಕ್ಕೆ ಮಾರಕ. ಅತ್ಯಾಚಾರಿ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ರಾಷ್ಟ್ರಪತಿ ರಾಮನಾಥ್​​ ಕೋವಿಂದ್​​ರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು ಮಾಡಿದೆ ಎಂದವರು ತಿಳಿಸಿದರು.

ಕ್ಷಮಾದಾನ ಅರ್ಜಿಗಳ ಕುರಿತು ಸಂವಿಧಾನಕ್ಕೆ ಕೆಲವು ಅಗತ್ಯ ತಿದ್ದುಪಡಿಯಾಗಬೇಕಿದೆ. ಈ ಸಂಬಂಧ ಸಂಸತ್​​ ಪುನರ್​​ ಪರೀಶೀಲನೆ ನಡೆಸಬೇಕೆಂದು ಹೇಳಿದರು.

ಈಗಾಗಲೇ ದೇಶದ ಗಮನ ಸೆಳೆದಿರುವ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ, ತೆಲಂಗಾಣ ಪಶುವೈದ್ಯೆ ಕೇಸ್​ ಹಾಗೂ ಉನ್ನಾವೋ ಪ್ರಕರಣದ ಬಗ್ಗೆ ರಾಷ್ಟ್ರಪತಿಗಳು ಕಳವಳ ವ್ಯಕ್ತಪಡಿಸಿದರು.

Intro:Body:

 ಅತ್ಯಾಚಾರಿಗಳು ಕ್ಷಮದಾನಕ್ಕೆ ಅರ್ಹರೇ ಅಲ್ಲ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​​



ಸಿರೋಹಿ(ರಾಜಸ್ಥಾನ): ಅತ್ಯಾಚಾರಿಗಳು ಯಾವುದೇ ಕಾರಣಕ್ಕೂ ಕ್ಷಮದಾನಕ್ಕೆ ಅರ್ಹರೇ ಅಲ್ಲ ಎಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದ ಸಿರೋಹಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. 





ಅತ್ಯಾಚಾರ ಪ್ರಕರಣಗಲ್ಲಿ ಭಾಗಿಯಾಗಿ ಫೋಕ್ಸೋ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಒಳಗಾಗುವ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಕ್ಷಮಾದಾನಕ್ಕೆ ಅವಕಾಶವೇ ಕೊಡಬಾರದು ಎಂದಿರುವ ಅವರು, ಇಂತಹ ಘಟನೆಗಳು ದೇಶಕ್ಕೆ ಮಾರಕ ಎಂದು ತಿಳಿಸಿದರು. ಅತ್ಯಾಚಾರಿ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್​​ರಿಗೆ ಕೇಂದ್ರ ಗೃಹ ಇಲಾಖೆ ಶಿಫಾರಸು ಮಾಡಿದೆ ಎಂದು ತಿಳಿಸಿದರು. 



ಇದೇ ವೇಳೆ ಮಾತನಾಡಿದ ಅವರು,  ಕ್ಷಮಾದಾನ ಅರ್ಜಿಗಳ ಕುರಿತು ಸಂವಿದಾನದಲ್ಲಿ ಕೆಲವೊಂದು ತಿದ್ದುಪಡಿಯಾಗುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಸಂಸತ್​​ ಪುನರ್​​ ಪರೀಶಿಲನೆ ನಡೆಸಬೇಕೆಂದು ಹೇಳಿದರು.



ಈಗಾಗಲೇ ದೇಶದಲ್ಲಿ ಗಮನ ಸೆಳೆದಿರುವ ನಿರ್ಭಯಾ ಅತ್ಯಾಚಾರ ಪ್ರಕರಣ, ತೆಲಂಗಾಣ ಪಶುವೈದ್ಯೆ ಕೇಸ್​ ಹಾಗೂ ಉನ್ನಾವೋ ಪ್ರಕರಣದ ಬಗ್ಗೆ ರಾಷ್ಟ್ರಪತಿಗಳು ಕಳವಳ ವ್ಯಕ್ತಪಡಿಸಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.