ETV Bharat / bharat

ಚಿಂತೆ ಬೇಡ; ದೇಶದಲ್ಲಿ ಅಗತ್ಯ ವಸ್ತುಗಳ ಸಾಕಷ್ಟು ಸಂಗ್ರಹವಿದೆ..

author img

By

Published : Apr 14, 2020, 3:35 PM IST

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಗೃಹ ಸಚಿವರು, ತಮ್ಮ ನರೆಹೊರೆಯ ಬಡವರು ಹಾಗೂ ನಿರ್ಗತಿಕರಿಗೆ ಶ್ರೀಮಂತ ಜನರು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

Shah
ಅಮಿತ್​ ಶಾ

ನವದೆಹಲಿ : ದೀರ್ಘಾವಧಿಯ ಲಾಕ್‌ಡೌನ್ ಬಗ್ಗೆ ಯಾರೂ ಚಿಂತಿಸಬೇಕಾಗಿಲ್ಲ. ದೇಶದಲ್ಲಿ ಸಾಕಷ್ಟು ಆಹಾರ, ಔಷಧಿಗಳು ಹಾಗೂ ಇತರ ಅಗತ್ಯ ವಸ್ತುಗಳ ಬೇಕಾದಷ್ಟು ಸಂಗ್ರಹವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಗೃಹ ಸಚಿವರು, ತಮ್ಮ ನರೆಹೊರೆಯ ಬಡವರು ಹಾಗೂ ನಿರ್ಗತಿಕರಿಗೆ ಶ್ರೀಮಂತ ಜನರು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

  • देश के गृह मंत्री के नाते मैं जनता को पुनः आश्वस्त करता हूँ कि देश में अन्न, दवाई व अन्य रोजमर्रा की चीज़ों का प्रयाप्त भण्डार है, इसलिए किसी भी नागरिक को परेशान होने की आवश्यकता नहीं है। साथ ही संपन्न लोगों से निवेदन करता हूँ कि आप आगे आकर आसपास रहने वाले गरीबों की सहायता करें।

    — Amit Shah (@AmitShah) April 14, 2020 " class="align-text-top noRightClick twitterSection" data=" ">

"ದೇಶದ ಗೃಹ ಸಚಿವನಾಗಿ, ದೇಶದಲ್ಲಿ ಸಾಕಷ್ಟು ಆಹಾರ, ಔಷಧಿಗಳು ಮತ್ತು ಇತರ ಸರಕುಗಳ ಸಂಗ್ರಹವಿದೆ ಎಂದು ನಾನು ಮತ್ತೆ ಸಾರ್ವಜನಿಕರಿಗೆ ಭರವಸೆ ನೀಡುತ್ತೇನೆ. ಯಾರೂ ಅದರ ಬಗ್ಗೆ ಚಿಂತಿಸಬಾರದು" ಎಂದು ಹೇಳಿದ್ದಾರೆ.

ಇದೇ ವೇಳೆ ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರಗಳ ಪಾತ್ರವನ್ನು ಶ್ಲಾಘಿಸಿದ ಶಾ, ಎಲ್ಲಾ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡುತ್ತಿರುವ ರೀತಿ ನಿಜಕ್ಕೂ ಪ್ರಶಂಸನೀಯ ಎಂದು ರಾಜ್ಯಗಳ ಬೆನ್ನುತಟ್ಟಿದ್ದಾರೆ.

  • इस लड़ाई में महत्वपूर्ण भूमिका निभा रहे हमारे डॉक्टर, स्वास्थ्यकर्मी, सफाई कर्मचारी, पुलिसबल व सभी सुरक्षाकर्मियों का योगदान दिल को छू लेने वाला है। इस विषम परिस्थिति में आपका यह साहस और समझदारी हर भारतवासी को प्रेरित करती है। सभी लोग दिशानिर्देशों का पालन कर इनका सहयोग करें।

    — Amit Shah (@AmitShah) April 14, 2020 " class="align-text-top noRightClick twitterSection" data=" ">

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು, ಪೊಲೀಸರು ಮತ್ತು ಎಲ್ಲಾ ಭದ್ರತಾ ಸಿಬ್ಬಂದಿ ಕೊಡುಗೆ ಅಮೂಲ್ಯ. ಇಂತಹ ಸಂದಿಗ್ಧ ಸನ್ನಿವೇಶದಲ್ಲೂ ನಿಮ್ಮ ಧೈರ್ಯ ಹಾಗೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡ ರೀತಿ ಎಲ್ಲಾ ಭಾರತೀಯರಿಗೂ ಸ್ಫೂರ್ತಿ. ಹೀಗಾಗಿ ಎಲ್ಲಾ ನಾಗರಿಕರು ಅವರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ನವದೆಹಲಿ : ದೀರ್ಘಾವಧಿಯ ಲಾಕ್‌ಡೌನ್ ಬಗ್ಗೆ ಯಾರೂ ಚಿಂತಿಸಬೇಕಾಗಿಲ್ಲ. ದೇಶದಲ್ಲಿ ಸಾಕಷ್ಟು ಆಹಾರ, ಔಷಧಿಗಳು ಹಾಗೂ ಇತರ ಅಗತ್ಯ ವಸ್ತುಗಳ ಬೇಕಾದಷ್ಟು ಸಂಗ್ರಹವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿರುವ ಗೃಹ ಸಚಿವರು, ತಮ್ಮ ನರೆಹೊರೆಯ ಬಡವರು ಹಾಗೂ ನಿರ್ಗತಿಕರಿಗೆ ಶ್ರೀಮಂತ ಜನರು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

  • देश के गृह मंत्री के नाते मैं जनता को पुनः आश्वस्त करता हूँ कि देश में अन्न, दवाई व अन्य रोजमर्रा की चीज़ों का प्रयाप्त भण्डार है, इसलिए किसी भी नागरिक को परेशान होने की आवश्यकता नहीं है। साथ ही संपन्न लोगों से निवेदन करता हूँ कि आप आगे आकर आसपास रहने वाले गरीबों की सहायता करें।

    — Amit Shah (@AmitShah) April 14, 2020 " class="align-text-top noRightClick twitterSection" data=" ">

"ದೇಶದ ಗೃಹ ಸಚಿವನಾಗಿ, ದೇಶದಲ್ಲಿ ಸಾಕಷ್ಟು ಆಹಾರ, ಔಷಧಿಗಳು ಮತ್ತು ಇತರ ಸರಕುಗಳ ಸಂಗ್ರಹವಿದೆ ಎಂದು ನಾನು ಮತ್ತೆ ಸಾರ್ವಜನಿಕರಿಗೆ ಭರವಸೆ ನೀಡುತ್ತೇನೆ. ಯಾರೂ ಅದರ ಬಗ್ಗೆ ಚಿಂತಿಸಬಾರದು" ಎಂದು ಹೇಳಿದ್ದಾರೆ.

ಇದೇ ವೇಳೆ ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರಗಳ ಪಾತ್ರವನ್ನು ಶ್ಲಾಘಿಸಿದ ಶಾ, ಎಲ್ಲಾ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡುತ್ತಿರುವ ರೀತಿ ನಿಜಕ್ಕೂ ಪ್ರಶಂಸನೀಯ ಎಂದು ರಾಜ್ಯಗಳ ಬೆನ್ನುತಟ್ಟಿದ್ದಾರೆ.

  • इस लड़ाई में महत्वपूर्ण भूमिका निभा रहे हमारे डॉक्टर, स्वास्थ्यकर्मी, सफाई कर्मचारी, पुलिसबल व सभी सुरक्षाकर्मियों का योगदान दिल को छू लेने वाला है। इस विषम परिस्थिति में आपका यह साहस और समझदारी हर भारतवासी को प्रेरित करती है। सभी लोग दिशानिर्देशों का पालन कर इनका सहयोग करें।

    — Amit Shah (@AmitShah) April 14, 2020 " class="align-text-top noRightClick twitterSection" data=" ">

ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು, ಪೊಲೀಸರು ಮತ್ತು ಎಲ್ಲಾ ಭದ್ರತಾ ಸಿಬ್ಬಂದಿ ಕೊಡುಗೆ ಅಮೂಲ್ಯ. ಇಂತಹ ಸಂದಿಗ್ಧ ಸನ್ನಿವೇಶದಲ್ಲೂ ನಿಮ್ಮ ಧೈರ್ಯ ಹಾಗೂ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡ ರೀತಿ ಎಲ್ಲಾ ಭಾರತೀಯರಿಗೂ ಸ್ಫೂರ್ತಿ. ಹೀಗಾಗಿ ಎಲ್ಲಾ ನಾಗರಿಕರು ಅವರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.