ETV Bharat / bharat

ಪ್ರಜಾಪ್ರಭುತ್ವದಲ್ಲಿ ಅರಾಜಕತೆಗೆ ಸ್ಥಾನವಿಲ್ಲ: ರೈತ ಪರೇಡ್​ ಹಿಂಸಾಚಾರಕ್ಕೆ RSS ಖಂಡನೆ

ಕೆಂಪು ಕೋಟೆಯಲ್ಲಿ ನಡೆದದ್ದು ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರದ ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನವಾಗಿದೆ ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿದ್ದಾರೆ.

author img

By

Published : Jan 27, 2021, 3:39 AM IST

Updated : Jan 27, 2021, 4:56 AM IST

no-place-for-anarchy-in-democracy-says-rss
ರೈತ ಪರೇಡ್​ ಹಿಂಸಾಚಾರಕ್ಕೆ RSS ಖಂಡನೆ

ನಾಗ್ಪುರ: ಗಣರಾಜ್ಯೋತ್ಸವದ ದಿನ ರೈತರ ಟ್ರ್ಯಾಕ್ಟರ್​ ಪರೇಡ್​ ವೇಳೆ ಕೆಂಪು ಕೋಟೆಯಲ್ಲಿ ನಡೆದ ಘಟನೆಯನ್ನು ಆರ್​ಎಸ್​ಎಸ್​ ಖಂಡಿಸಿದೆ.

ದೆಹಲಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯು ದುಃಖಕರ ಮತ್ತು ಖಂಡನೀಯವಾಗಿದೆ. ಕೆಂಪು ಕೋಟೆಯಲ್ಲಿ ನಡೆದದ್ದು ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರದ ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನವಾಗಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಅರಾಜಕತೆಗೆ ಅವಕಾಶವಿಲ್ಲ ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ: ಸಿಎಂ ಭೇಟಿಯಾಗಲಿರುವ ಬಸವರಾಜ ಹೊರಟ್ಟಿ

ಶಾಂತಿಗಾಗಿ ಶ್ರಮಿಸಲು ದೇಶದ ಜನರು ತಮ್ಮ ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನತೆಗಳಿಗಿಂತ ಮೇಲೇರಬೇಕು ಎಂದು ಜೋಶಿ ಮನವಿ ಮಾಡಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ನಡೆದ ಟ್ರ್ಯಾಕ್ಟರ್ ಪರೇಡ್​ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆ 86 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಇಂಟರ್​ನೆಟ್​ ಸೇವೆ ಬಂದ್​ ಮಾಡುವ ಅನಿವಾರ್ಯತೆ ಎದುರಾಗಿತ್ತು.

ನಾಗ್ಪುರ: ಗಣರಾಜ್ಯೋತ್ಸವದ ದಿನ ರೈತರ ಟ್ರ್ಯಾಕ್ಟರ್​ ಪರೇಡ್​ ವೇಳೆ ಕೆಂಪು ಕೋಟೆಯಲ್ಲಿ ನಡೆದ ಘಟನೆಯನ್ನು ಆರ್​ಎಸ್​ಎಸ್​ ಖಂಡಿಸಿದೆ.

ದೆಹಲಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯು ದುಃಖಕರ ಮತ್ತು ಖಂಡನೀಯವಾಗಿದೆ. ಕೆಂಪು ಕೋಟೆಯಲ್ಲಿ ನಡೆದದ್ದು ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರದ ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನವಾಗಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಅರಾಜಕತೆಗೆ ಅವಕಾಶವಿಲ್ಲ ಎಂದು ಆರ್​ಎಸ್​ಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಬೇಡಿಕೆ: ಸಿಎಂ ಭೇಟಿಯಾಗಲಿರುವ ಬಸವರಾಜ ಹೊರಟ್ಟಿ

ಶಾಂತಿಗಾಗಿ ಶ್ರಮಿಸಲು ದೇಶದ ಜನರು ತಮ್ಮ ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನತೆಗಳಿಗಿಂತ ಮೇಲೇರಬೇಕು ಎಂದು ಜೋಶಿ ಮನವಿ ಮಾಡಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ನಡೆದ ಟ್ರ್ಯಾಕ್ಟರ್ ಪರೇಡ್​ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆ 86 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಇಂಟರ್​ನೆಟ್​ ಸೇವೆ ಬಂದ್​ ಮಾಡುವ ಅನಿವಾರ್ಯತೆ ಎದುರಾಗಿತ್ತು.

Last Updated : Jan 27, 2021, 4:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.