ETV Bharat / bharat

ಈಶಾನ್ಯ ದೆಹಲಿ ಗಲಭೆ ಪ್ರಕರಣ : ರಾಹುಲ್ ರಾಯ್, ಸಬಾ ದಿವಾನ್​ಗೆ ಪೊಲೀಸ್​ ಸಮನ್ಸ್

author img

By

Published : Sep 14, 2020, 6:23 PM IST

ಸಿಎಎ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಚಿತ್ರ ನಿರ್ಮಾಪಕರಿಗೆ ವಿಚಾರಣೆಗೆ ಹಾಜಾರಾಗುವಂತೆ ಪೊಲೀಸರು ಸಮನ್ಸ್ ನೀಡಿದ್ದಾರೆ.

Delhi Police summons Rahul Roy, Saba Dewan
ದೆಹಲಿ ಗಲಭೆ ಪ್ರಕರಣ

ನವದೆಹಲಿ : ಸಿಎಎ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕಿರು ಚಿತ್ರ ನಿರ್ಮಾಪಕ ರಾಹುಲ್ ರಾಯ್ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ಸಬಾ ದಿವಾನ್​ಗೆ ದೆಹಲಿ ಪೊಲೀಸರ ವಿಶೇಷ ವಿಭಾಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್​ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪೊಲೀಸರು ಬಂಧಿಸಿದ ಒಂದು ದಿನದ ಬಳಿಕ ರಾಹುಲ್ ರಾಯ್ ಮತ್ತು ಸಬಾ ದಿವಾನ್​ಗೆ ಸಮನ್ಸ್ ನೀಡಲಾಗಿದೆ. ಸತತ 11 ಗಂಟೆಗಳ ವಿಚಾರಣೆಯ ಬಳಿಕ ಉಮರ್​ ಖಾಲಿದ್​ನನ್ನು ಪೊಲೀಸರು ಬಂಧಿಸಿದ್ದರು.

2020 ಫೆಬ್ರವರಿ 24 ರಂದು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ-ವಿರೋಧ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ 53 ಜನರ ಮೃತಪಟ್ಟಿದ್ದರು, ಸುಮಾರು 200 ರಷ್ಟು ಜನರು ಗಾಯಗೊಂಡಿದ್ದರು. .

ನವದೆಹಲಿ : ಸಿಎಎ ಪ್ರತಿಭಟನೆ ವೇಳೆ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕಿರು ಚಿತ್ರ ನಿರ್ಮಾಪಕ ರಾಹುಲ್ ರಾಯ್ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ಸಬಾ ದಿವಾನ್​ಗೆ ದೆಹಲಿ ಪೊಲೀಸರ ವಿಶೇಷ ವಿಭಾಗ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್​ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪೊಲೀಸರು ಬಂಧಿಸಿದ ಒಂದು ದಿನದ ಬಳಿಕ ರಾಹುಲ್ ರಾಯ್ ಮತ್ತು ಸಬಾ ದಿವಾನ್​ಗೆ ಸಮನ್ಸ್ ನೀಡಲಾಗಿದೆ. ಸತತ 11 ಗಂಟೆಗಳ ವಿಚಾರಣೆಯ ಬಳಿಕ ಉಮರ್​ ಖಾಲಿದ್​ನನ್ನು ಪೊಲೀಸರು ಬಂಧಿಸಿದ್ದರು.

2020 ಫೆಬ್ರವರಿ 24 ರಂದು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ-ವಿರೋಧ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ 53 ಜನರ ಮೃತಪಟ್ಟಿದ್ದರು, ಸುಮಾರು 200 ರಷ್ಟು ಜನರು ಗಾಯಗೊಂಡಿದ್ದರು. .

ETV Bharat Logo

Copyright © 2024 Ushodaya Enterprises Pvt. Ltd., All Rights Reserved.