ETV Bharat / bharat

ಕಣಿವೆ ರಾಜ್ಯದಲ್ಲಿ ದೋವಲ್​​ ಸುತ್ತಾಟ.. ಸಂಭಾವ್ಯ ಉಗ್ರದಾಳಿ ಹಿಮ್ಮೆಟ್ಟಿಸಲು ಚಾಣಾಕ್ಷ ಪ್ಲಾನ್​!

author img

By

Published : Aug 11, 2019, 1:12 PM IST

ಸ್ವಾತಂತ್ರ್ಯ ದಿನಾಚರಣೆ ವೇಳೆ ಪಾಕ್​​​​ ಪೋಷಿತ ಉಗ್ರ ಸಂಘಟನೆಗಳಿಂದ ದಾಳಿ ನಡೆಯಲಿದೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಅಜಿತ್ ದೋವಲ್​ ಸ್ಥಳದಲ್ಲಿಯೇ ಇದ್ದು, ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಅಜಿತ್ ದೋವಲ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿದ ದಿನವೇ ಕಣಿವೆ ರಾಜ್ಯಕ್ಕೆ ತೆರಳಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದಾರೆ.

ಜೇಮ್ಸ್​​ಬಾಂಡ್​ ಖ್ಯಾತಿಯ ದೋವಲ್​ ಕಣಿವೆಯಲ್ಲಿ ಓಡಾಟ.... ಸ್ಥಳೀಯರೊಂದಿಗೆ ಊಟದ ಜತೆ ಚರ್ಚೆ!

ಮೂಲಗಳ ಪ್ರಕಾರ ಅಜಿತ್ ದೋವಲ್​ ಇನ್ನೂ ಕೆಲ ದಿನಗಳ ಕಾಲ ಕಾಶ್ಮೀರದಲ್ಲೇ ಇರಲಿದ್ದು, ಸ್ವಾತಂತ್ರ್ಯೋತ್ಸವದ ಬಳಿಕವೇ ರಾಷ್ಟ್ರ ರಾಜಧಾನಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ವೇಳೆ ಪಾಕ್​​ ಪೋಷಿತ ಉಗ್ರ ಸಂಘಟನೆಗಳಿಂದ ದಾಳಿ ನಡೆಯಲಿದೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಅಜಿತ್ ದೋವಲ್​ ಸ್ಥಳದಲ್ಲಿಯೇ ಇದ್ದು ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂಭಾವ್ಯ ದಾಳಿಯನ್ನು ಹಿಮ್ಮೆಟ್ಟಿಸಲು ದೋವಲ್​ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಕಣಿವೆ ನಾಡಿನಲ್ಲೇ ಬೀಡು ಬಿಟ್ಟಿರುವ ಮೋದಿ ಬಲಗೈ ಬಂಟ ದೋವಲ್... ಅನಂತನಾಗ್​​ನಲ್ಲಿ ಓಡಾಟ!

ಸೋಮವಾರದಂದು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ಅಲ್ಲಿನ ಸ್ಥಳೀಯರೊಂದಿಗೆ ಮಾತನಾಡುತ್ತಾ ಸಮಯ ಕಳೆಯುತ್ತಿದ್ದಾರೆ. ಇದರ ಜೊತೆಗೆ ಭದ್ರತೆಯ ಬಗ್ಗೆ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿದ ದಿನವೇ ಕಣಿವೆ ರಾಜ್ಯಕ್ಕೆ ತೆರಳಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದಾರೆ.

ಜೇಮ್ಸ್​​ಬಾಂಡ್​ ಖ್ಯಾತಿಯ ದೋವಲ್​ ಕಣಿವೆಯಲ್ಲಿ ಓಡಾಟ.... ಸ್ಥಳೀಯರೊಂದಿಗೆ ಊಟದ ಜತೆ ಚರ್ಚೆ!

ಮೂಲಗಳ ಪ್ರಕಾರ ಅಜಿತ್ ದೋವಲ್​ ಇನ್ನೂ ಕೆಲ ದಿನಗಳ ಕಾಲ ಕಾಶ್ಮೀರದಲ್ಲೇ ಇರಲಿದ್ದು, ಸ್ವಾತಂತ್ರ್ಯೋತ್ಸವದ ಬಳಿಕವೇ ರಾಷ್ಟ್ರ ರಾಜಧಾನಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ವೇಳೆ ಪಾಕ್​​ ಪೋಷಿತ ಉಗ್ರ ಸಂಘಟನೆಗಳಿಂದ ದಾಳಿ ನಡೆಯಲಿದೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಅಜಿತ್ ದೋವಲ್​ ಸ್ಥಳದಲ್ಲಿಯೇ ಇದ್ದು ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂಭಾವ್ಯ ದಾಳಿಯನ್ನು ಹಿಮ್ಮೆಟ್ಟಿಸಲು ದೋವಲ್​ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಕಣಿವೆ ನಾಡಿನಲ್ಲೇ ಬೀಡು ಬಿಟ್ಟಿರುವ ಮೋದಿ ಬಲಗೈ ಬಂಟ ದೋವಲ್... ಅನಂತನಾಗ್​​ನಲ್ಲಿ ಓಡಾಟ!

ಸೋಮವಾರದಂದು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​, ಅಲ್ಲಿನ ಸ್ಥಳೀಯರೊಂದಿಗೆ ಮಾತನಾಡುತ್ತಾ ಸಮಯ ಕಳೆಯುತ್ತಿದ್ದಾರೆ. ಇದರ ಜೊತೆಗೆ ಭದ್ರತೆಯ ಬಗ್ಗೆ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

Intro:Body:

ಕಣಿವೆ ರಾಜ್ಯದಲ್ಲಿ ಧೋವಲ್​​ ಸುತ್ತಾಟ... ಪಾಕ್​ ದಾಳಿ ಹಿಮ್ಮೆಟ್ಟಿಸಲು ಚಾಣಾಕ್ಷ ಪ್ಲಾನ್​..!



ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿದ ದಿನವೇ ಕಣಿವೆ ರಾಜ್ಯಕ್ಕೆ ತೆರಳಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡುತ್ತಿದ್ದಾರೆ.



ಮೂಲಗಳ ಪ್ರಕಾರ ಅಜಿತ್ ಧೋವಲ್​ ಇನ್ನೂ ಕೆಲ ದಿನಗಳ ಕಾಲ ಕಾಶ್ಮೀರದಲ್ಲೇ ಇರಲಿದ್ದು, ಸ್ವಾತಂತ್ರ್ಯೋತ್ಸವದ ಬಳಿಕವೇ ರಾಷ್ಟ್ರ ರಾಜಧಾನಿಗೆ ಮರಳಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.



ಸ್ವಾತಂತ್ರ್ಯ ದಿನಾಚರಣೆ ವೇಳೆ ಪಾಪ್​ ಪೋಷಿತ ಉಗ್ರ ಸಂಘಟನೆಗಳಿಂದ ದಾಳಿ ನಡೆಯಲಿದೆ ಎನ್ನುವ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಅಜಿತ್ ಧೋವಲ್​ ಸ್ಥಳದಲ್ಲಿಯೇ ಇದ್ದು ಭದ್ರತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂಭಾವ್ಯ ದಾಳಿಯನ್ನು ಹಿಮ್ಮೆಟ್ಟಿಸಲು ಧೋವಲ್​ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.



ಸೋಮವಾರದಂದು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್​ ಅಲ್ಲಿನ ಸ್ಥಳೀಯರೊಂದಿಗೆ ಮಾತನಾಡುತ್ತಾ ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಭದ್ರತೆಯ ಬಗ್ಗೆ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.