ETV Bharat / bharat

'ನೆರೆ'ವಾಗದ ಕೇಂದ್ರ: ಟ್ವಿಟರ್​​ನಲ್ಲಿ #NotFairModiji ಆಕ್ರೋಶ

author img

By

Published : Oct 3, 2019, 7:15 PM IST

ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಪ್ರವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಬಿಡಿಗಾಸು ನೀಡಿಲ್ಲ. ಈ ಮಧ್ಯೆ ಟ್ವಿಟ್ಟರ್‌ನಲ್ಲಿ #NotFairModiji ಅಭಿಯಾನ​ ಶುರುವಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯಕ್ಕೆ ನೆರೆ ಪರಿಹಾರ ನೀಡದ ಕೇಂದ್ರ

ನವದೆಹಲಿ: ಭೀಕರ ಪ್ರವಾಹದಲ್ಲಿ ಸಂಕಷ್ಟಕ್ಕೊಳಗಾದ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರಧನ ಮಂಜೂರಾಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು​ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹರಿಹಾಯ್ದಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರದ ಧೋರಣೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

NotFairModiji
ರಾಜ್ಯ ನೆರೆ ಪರಿಹಾರ

ಟ್ವಿಟ್ಟರ್‌ನಲ್ಲಿ ನೆರೆ ಪರಿಹಾರ ವಿಷಯವನ್ನಿಟ್ಟುಕೊಂಡು ನೆಟ್ಟಿಗರು ಕೇಂದ್ರದ ವಿರುದ್ಧ ಸಮರ ಸಾರಿದ್ದಾರೆ. ಪರಿಹಾರದ ವಿಚಾರದಲ್ಲಿ ಕರ್ನಾಟಕದತ್ತ ಗಮನಕೊಡಿ ಎಂದು ಟ್ವಿಟರ್​ನಲ್ಲಿ #WeWantFloodRelief ಎಂಬ ಹ್ಯಾಷ್​ಟ್ಯಾಗ್​ ಮೂಲಕ #NotFairModiji ಟ್ರೆಂಡಿಂಗ್​ ಆರಂಭಿಸಿದ್ದಾರೆ. ಈ ವಿಷಯ ವಿಶ್ವದಾದ್ಯಂತ ಟ್ವಿಟರ್​​ ಟ್ರೆಂಡಿಂಗ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 22 ಜಿಲ್ಲೆಗಳು ಪ್ರವಾಹ ಪ್ರಕೋಪದಲ್ಲಿ ತೀವ್ರ ಸಂಕಷ್ಟು ಅನುಭವಿಸಿವೆ. ಇಷ್ಟಾದರೂ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡದೇ ಇರುವುದು ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವಾಗಿದೆ.

ನವದೆಹಲಿ: ಭೀಕರ ಪ್ರವಾಹದಲ್ಲಿ ಸಂಕಷ್ಟಕ್ಕೊಳಗಾದ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರಧನ ಮಂಜೂರಾಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು​ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹರಿಹಾಯ್ದಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರದ ಧೋರಣೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

NotFairModiji
ರಾಜ್ಯ ನೆರೆ ಪರಿಹಾರ

ಟ್ವಿಟ್ಟರ್‌ನಲ್ಲಿ ನೆರೆ ಪರಿಹಾರ ವಿಷಯವನ್ನಿಟ್ಟುಕೊಂಡು ನೆಟ್ಟಿಗರು ಕೇಂದ್ರದ ವಿರುದ್ಧ ಸಮರ ಸಾರಿದ್ದಾರೆ. ಪರಿಹಾರದ ವಿಚಾರದಲ್ಲಿ ಕರ್ನಾಟಕದತ್ತ ಗಮನಕೊಡಿ ಎಂದು ಟ್ವಿಟರ್​ನಲ್ಲಿ #WeWantFloodRelief ಎಂಬ ಹ್ಯಾಷ್​ಟ್ಯಾಗ್​ ಮೂಲಕ #NotFairModiji ಟ್ರೆಂಡಿಂಗ್​ ಆರಂಭಿಸಿದ್ದಾರೆ. ಈ ವಿಷಯ ವಿಶ್ವದಾದ್ಯಂತ ಟ್ವಿಟರ್​​ ಟ್ರೆಂಡಿಂಗ್‌ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 22 ಜಿಲ್ಲೆಗಳು ಪ್ರವಾಹ ಪ್ರಕೋಪದಲ್ಲಿ ತೀವ್ರ ಸಂಕಷ್ಟು ಅನುಭವಿಸಿವೆ. ಇಷ್ಟಾದರೂ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡದೇ ಇರುವುದು ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವಾಗಿದೆ.

Intro:Body:

ರಾಜ್ಯ ನೆರೆ ಪರಿಹಾರ ನೀಡದ ಕೇಂದ್ರ ಸರ್ಕಾರ... ಟ್ವಿಟರ್​​ನಲ್ಲಿ #NotFairModiji ಟ್ರೆಂಡ್​! 

ನವದೆಹಲಿ:  ಕಳೆದೆರಡು ತಿಂಗಳ ಹಿಂದೆ ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಕಾಂಗ್ರೆಸ್​ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ಹರಿಹಾಯ್ದಿದೆ. 



ಇದೀಗ ಸಾಮಾಜಿಕ ಜಾಲತಾಣದಲ್ಲೂ ಇದೇ ವಿಷಯವನ್ನಿಟ್ಟುಕೊಂಡು ನೆಟ್ಟಿಗರು ಕೇಂದ್ರದ ವಿರುದ್ಧ ಸಮರ ಸಾರಿದ್ದು ನೆರೆಪರಿಹಾರದ ವಿಚಾರದಲ್ಲಿ ಕರ್ನಾಟಕದತ್ತ ಗಮನಕೊಡಿ ಎಂದು ಟ್ವಿಟರ್​ನಲ್ಲಿ #WeWantFloodRelief ಎಂಬ ಹ್ಯಾಷ್​ಟ್ಯಾಗ್​ ಇಟ್ಟುಕೊಂಡು #NotFairModiji ಟ್ರೆಂಡಿಂಗ್​ ಆರಂಭಿಸಿದ್ದಾರೆ. ಈ ವಿಷಯ ಟ್ವಿಟರ್​​ನಲ್ಲೂ ಅಗ್ರಸ್ಥಾನ ಪಡೆದುಕೊಂಡಿದೆ. 



ಉತ್ತರ ಕರ್ನಾಟಕ ಸೇರಿದಂತೆ ಅನೇಕ ಸ್ಥಳಗಳಲ್ಲಿ ಕಳೆದೆರಡು ತಿಂಗಳ ಹಿಂದೆ ಭೀಕರ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬ ಮನೆ ಕಳೆದುಕೊಂಡಿವೆ. ಇಷ್ಟಾದರೂ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡದೇ ಇರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.