ಅಯೋಧ್ಯೆ(ಉತ್ತರ ಪ್ರದೇಶ): ಬಹು ನಿರೀಕ್ಷಿತ ರಾಮ ಮಂದಿರ ನಿರ್ಮಾಣ ಕಾರ್ಯ ಅಧಿಕೃತವಾಗಿ ಈಗಾಗಲೇ ಶುರುಗೊಂಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಭವ್ಯ ರಾಮನ ಮಂದಿರ ನಿರ್ಮಾಣಗೊಳ್ಳಲಿದೆ.
ಇದರ ಮಧ್ಯೆ ಇಂದು ದೊಡ್ಡ ಮಟ್ಟದ ಸಭೆ ನಡೆಸಲಾಯಿತು. ದೇವಾಲಯದ ಭದ್ರತೆ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಎಡಿಜಿ ವಿಕೆ ಸಿಂಗ್ ಹಾಗೂ ಎಡಿಜಿ ಎಸ್ಎನ್ ಸಬ್ತಾ ಸೇರಿದಂತೆ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆ ಮೂರು ತಿಂಗಳಲ್ಲಿ ಒಂದು ಸಲ ನಡೆಸಲು ನಿರ್ಧರಿಸಲಾಗಿದ್ದು, ರಾಮ ಜನ್ಮಭೂಮಿ ಟ್ರಸ್ಟ್ನ ಸದಸ್ಯರು ಇದರಲ್ಲಿ ಭಾಗಿಯಾಗಿದ್ದರು.
ಸಭೆಯಲ್ಲಿ ಪ್ರಮುಖವಾಗಿ ದೇವಸ್ಥಾನದ ಸುತ್ತಲೂ ಬಿಗಿ ಭದ್ರತೆ ನೀಡುವ ಕುರಿತು ಚರ್ಚೆ ನಡೆಸಲಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೂ ಭದ್ರತೆಯಲ್ಲಿ ಯಾವುದೇ ರೀತಿಯ ಕೊರತೆ ಕಂಡು ಬರದಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದೆ.