ETV Bharat / bharat

ಶ್ರೀನಗರದಲ್ಲಿ ಎನ್​ಕೌಂಟರ್​: ಮೂವರು ಉಗ್ರರು ಹತ,​ ಎಎಸ್ಐ ಹುತಾತ್ಮ

author img

By

Published : Aug 30, 2020, 7:56 AM IST

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಎನ್​ಕೌಂಟರ್​ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

Srinagar encounter
ಶ್ರೀನಗರದಲ್ಲಿ ಎನ್​ಕೌಂಟರ್

ಶ್ರೀನಗರ: ನಗರದ ಹೊರವಲಯದಲ್ಲಿರುವ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್​ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಎಎಸ್ಐ ಬಾಬು ರಾಮ್ ಹುತಾತ್ಮರಾದವರು. ಪಂಥಾ ಚೌಕ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ 'ನಾಕಾ' ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಮೂವರು ಉಗ್ರರನ್ನು ಯೋಧರು ಬೇಟೆಯಾಡಿದ್ದಾರೆ.

ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವಾಗ ಉಗ್ರರು ಗುಂಡು ಹಾರಿಸಿದರು, ತಕ್ಷಣ ಎಚ್ಚೆತ್ತುಕೊಂಡು ಭಯೋತ್ಪಾದಕರ ಹೆಡೆಮುರಿ ಕಟ್ಟಲಾಗಿದೆ ಎಂದು ಅಧಿಕಾರಿವೋರ್ವರು ತಿಳಿಸಿದ್ದಾರೆ.

ಶ್ರೀನಗರ: ನಗರದ ಹೊರವಲಯದಲ್ಲಿರುವ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್​ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಎಎಸ್ಐ ಬಾಬು ರಾಮ್ ಹುತಾತ್ಮರಾದವರು. ಪಂಥಾ ಚೌಕ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ 'ನಾಕಾ' ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಮೂವರು ಉಗ್ರರನ್ನು ಯೋಧರು ಬೇಟೆಯಾಡಿದ್ದಾರೆ.

ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವಾಗ ಉಗ್ರರು ಗುಂಡು ಹಾರಿಸಿದರು, ತಕ್ಷಣ ಎಚ್ಚೆತ್ತುಕೊಂಡು ಭಯೋತ್ಪಾದಕರ ಹೆಡೆಮುರಿ ಕಟ್ಟಲಾಗಿದೆ ಎಂದು ಅಧಿಕಾರಿವೋರ್ವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.