ETV Bharat / bharat

ಪದೇಪದೆ ಕದನ ವಿರಾಮ ಉಲ್ಲಂಘಿಸಿದ ಪಾಕ್‌ ಉದ್ಧಟತನ​..

author img

By

Published : Feb 18, 2020, 7:17 PM IST

ಪೂಂಚ್​ ನಗರದ ಉಪ ಆಯುಕ್ತ ರಾಹುಲ್​ ಯಾದವ್ ಮತ್ತು ಎಸ್​ಎಸ್​ಪಿ ರಮೇಶ್​ ಆ್ಯಂಗ್ರಲ್​ ಅವರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತಪಟ್ಟವರಿಗೆ ₹1 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 5000 ರೂ. ಪರಿಹಾರ ಘೋಷಿಸಲಾಗಿದೆ.

Pak army resorts to firing, shelling along LoC in J&K's Poonch
ಮತ್ತೆ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಮೆರೆದ ಪಾಕ್

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನ ಸೈನ್ಯ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಎರಡು ವಲಯಗಳಲ್ಲಿ ಮಂಗಳವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಗಡಿ ಭಾಗದ ಜನವಸತಿ ಪ್ರದೇಶಗಳನ್ನೇ ಗುರಿಯಾಗಿಸಿ ಪಾಕಿಸ್ತಾನ ಪಡೆ ದಾಳಿ ನಡೆಸಿದೆ. ದಾಳಿಯಿಂದ ಕೆಲ ಮನೆಗಳು ಧ್ವಂಸಗೊಂಡಿವೆ ಎಂಬ ಮಾಹಿತಿ ತಿಳಿದು ಬಂದಿದೆ. 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಹಾಗೂ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಶಾಹಪುರ, ಕಿರ್ನಿ, ಬಾಲಾಕೋಟ್​ ಮತ್ತು ಗುಲ್​ಪುರ ವಲಯಗಳಲ್ಲಿ ಎಲ್‌ಒಸಿ ಉದ್ದಕ್ಕೂ ಶಸ್ತ್ರಾಸ್ತ್ರ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿವೆ ಎಂದು ಹೇಳಿದ್ದಾರೆ. ಇದರಿಂದ ಅಲ್ಲಿನ ನಿವಾಸಿಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದರು.

ಪೂಂಚ್​ ನಗರದ ಉಪ ಆಯುಕ್ತ ರಾಹುಲ್​ ಯಾದವ್ ಮತ್ತು ಎಸ್​ಎಸ್​ಪಿ ರಮೇಶ್​ ಆ್ಯಂಗ್ರಲ್​ ಅವರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತಪಟ್ಟವರಿಗೆ ₹1 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 5000 ರೂ. ಪರಿಹಾರ ಘೋಷಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನ ಸೈನ್ಯ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಎರಡು ವಲಯಗಳಲ್ಲಿ ಮಂಗಳವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಗಡಿ ಭಾಗದ ಜನವಸತಿ ಪ್ರದೇಶಗಳನ್ನೇ ಗುರಿಯಾಗಿಸಿ ಪಾಕಿಸ್ತಾನ ಪಡೆ ದಾಳಿ ನಡೆಸಿದೆ. ದಾಳಿಯಿಂದ ಕೆಲ ಮನೆಗಳು ಧ್ವಂಸಗೊಂಡಿವೆ ಎಂಬ ಮಾಹಿತಿ ತಿಳಿದು ಬಂದಿದೆ. 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಹಾಗೂ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಶಾಹಪುರ, ಕಿರ್ನಿ, ಬಾಲಾಕೋಟ್​ ಮತ್ತು ಗುಲ್​ಪುರ ವಲಯಗಳಲ್ಲಿ ಎಲ್‌ಒಸಿ ಉದ್ದಕ್ಕೂ ಶಸ್ತ್ರಾಸ್ತ್ರ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿವೆ ಎಂದು ಹೇಳಿದ್ದಾರೆ. ಇದರಿಂದ ಅಲ್ಲಿನ ನಿವಾಸಿಗಳಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದರು.

ಪೂಂಚ್​ ನಗರದ ಉಪ ಆಯುಕ್ತ ರಾಹುಲ್​ ಯಾದವ್ ಮತ್ತು ಎಸ್​ಎಸ್​ಪಿ ರಮೇಶ್​ ಆ್ಯಂಗ್ರಲ್​ ಅವರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತಪಟ್ಟವರಿಗೆ ₹1 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 5000 ರೂ. ಪರಿಹಾರ ಘೋಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.