ETV Bharat / bharat

ಗಡಿಭಾಗದಲ್ಲಿ 20ಕ್ಕೂ ಹೆಚ್ಚು ಉಗ್ರರ ಶಿಬಿರ ಸಕ್ರಿಯ, ಭಾರತದ ಮೇಲೆ ದೊಡ್ಡ ಮಟ್ಟದ ದಾಳಿಗೆ ಸಂಚು!

author img

By

Published : Oct 8, 2019, 5:20 PM IST

ಭಾರತದ ಮೇಲೆ ಅತಿದೊಡ್ಡ ಮಟ್ಟದ ದಾಳಿ ನಡೆಸಲು ಪಾಕ್‌ ಉಗ್ರರು ಯೋಜನೆ ರೂಪಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಡಿ ಭಾಗದಲ್ಲಿ 20ಕ್ಕೂ ಹೆಚ್ಚು ಉಗ್ರರ ಶಿಬಿರಗಳು ಸಕ್ರಿಯವಾಗಿರುವ ಬಗ್ಗೆ ಗುಪ್ತಚರ ಇಲಾಖೆ ಮಹತ್ವದ ಮಾಹಿತಿ ಕಲೆ ಹಾಕಿದೆ.

ಸಾಂದರ್ಭಿಕ ಚಿತ್ರ

ಶ್ರೀನಗರ: ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಪಾಕಿಸ್ತಾನ ಭಾರತದ ಮೇಲೆ ಹರಿಹಾಯುತ್ತಿದ್ದು, ಗಡಿ ಪ್ರದೇಶದಲ್ಲಿ ರಕ್ತ ಹರಿಸಲು ಕುತಂತ್ರ ನಡೆಸುತ್ತಲೇ ಇದೆ. ಈ ಮಧ್ಯೆ ಗಡಿ ಪ್ರದೇಶದಲ್ಲಿ ಪಾಕ್​ನ 20ಕ್ಕೂ ಹೆಚ್ಚು ಭಯೋತ್ಪಾದಕ ಶಿಬಿರಗಳು ಸಕ್ರಿಯವಾಗಿವೆ ಎಂಬ ಮಹತ್ವದ ಮಾಹಿತಿ ದೊರೆತಿದೆ.

ಪ್ರತಿಯೊಂದು ಶಿಬಿರದಲ್ಲೂ ಸುಮಾರು 50ಕ್ಕೂ ಹೆಚ್ಚು ಉಗ್ರರಿದ್ದು, ಫೆಬ್ರವರಿಯಲ್ಲಿ ನಡೆದಿರುವ ಪುಲ್ವಾಮಾದಂತಹ ದಾಳಿ ನಡೆಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಚಳಿಗಾಲ ಆರಂಭಗೊಳ್ಳುವ ಮುನ್ನವೇ ಜಮ್ಮುಕಾಶ್ಮೀರದೊಳಗೆ ಉಗ್ರರನ್ನು ಒಳನುಗ್ಗಿಸಿ, ಭಯೋತ್ಪಾದನಾ ಕೃತ್ಯ ನಡೆಸಲು ಮುಂದಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಡಿ ಪ್ರದೇಶಗಳಲ್ಲಿ ಈಗಾಗಲೇ ಭಾರತೀಯ ಯೋಧರು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್​​, ಕಣಿವೆ ರಾಜ್ಯದಲ್ಲಿ 200 ರಿಂದ 300 ಉಗ್ರರು ಕಾರ್ಯನಿರತರಾಗಿದ್ದಾರೆ ಎಂಬ ಮಾಹಿತಿ ನೀಡಿದ್ರು.

ಎಲ್​ಇಟಿ, ಹಿಜ್ಬುಲ್ ಮುಜಾಹಿದ್ದಿನ್ ಹಾಗೂ ಜೈಷ್‌-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ಭಾರತೀಯ ಯೋಧರ ಮೇಲೆ ದೊಡ್ಡ ಪ್ರಮಾಣದ ದಾಳಿ ನಡೆಸಲು ಮುಂದಾಗಿವೆ ಎಂದು ತಿಳಿದು ಬಂದಿದೆ.

ಶ್ರೀನಗರ: ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಪಾಕಿಸ್ತಾನ ಭಾರತದ ಮೇಲೆ ಹರಿಹಾಯುತ್ತಿದ್ದು, ಗಡಿ ಪ್ರದೇಶದಲ್ಲಿ ರಕ್ತ ಹರಿಸಲು ಕುತಂತ್ರ ನಡೆಸುತ್ತಲೇ ಇದೆ. ಈ ಮಧ್ಯೆ ಗಡಿ ಪ್ರದೇಶದಲ್ಲಿ ಪಾಕ್​ನ 20ಕ್ಕೂ ಹೆಚ್ಚು ಭಯೋತ್ಪಾದಕ ಶಿಬಿರಗಳು ಸಕ್ರಿಯವಾಗಿವೆ ಎಂಬ ಮಹತ್ವದ ಮಾಹಿತಿ ದೊರೆತಿದೆ.

ಪ್ರತಿಯೊಂದು ಶಿಬಿರದಲ್ಲೂ ಸುಮಾರು 50ಕ್ಕೂ ಹೆಚ್ಚು ಉಗ್ರರಿದ್ದು, ಫೆಬ್ರವರಿಯಲ್ಲಿ ನಡೆದಿರುವ ಪುಲ್ವಾಮಾದಂತಹ ದಾಳಿ ನಡೆಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಚಳಿಗಾಲ ಆರಂಭಗೊಳ್ಳುವ ಮುನ್ನವೇ ಜಮ್ಮುಕಾಶ್ಮೀರದೊಳಗೆ ಉಗ್ರರನ್ನು ಒಳನುಗ್ಗಿಸಿ, ಭಯೋತ್ಪಾದನಾ ಕೃತ್ಯ ನಡೆಸಲು ಮುಂದಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗಡಿ ಪ್ರದೇಶಗಳಲ್ಲಿ ಈಗಾಗಲೇ ಭಾರತೀಯ ಯೋಧರು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್​​, ಕಣಿವೆ ರಾಜ್ಯದಲ್ಲಿ 200 ರಿಂದ 300 ಉಗ್ರರು ಕಾರ್ಯನಿರತರಾಗಿದ್ದಾರೆ ಎಂಬ ಮಾಹಿತಿ ನೀಡಿದ್ರು.

ಎಲ್​ಇಟಿ, ಹಿಜ್ಬುಲ್ ಮುಜಾಹಿದ್ದಿನ್ ಹಾಗೂ ಜೈಷ್‌-ಇ-ಮೊಹಮ್ಮದ್ ಉಗ್ರ ಸಂಘಟನೆಗಳು ಭಾರತೀಯ ಯೋಧರ ಮೇಲೆ ದೊಡ್ಡ ಪ್ರಮಾಣದ ದಾಳಿ ನಡೆಸಲು ಮುಂದಾಗಿವೆ ಎಂದು ತಿಳಿದು ಬಂದಿದೆ.

Intro:Body:

ಪಾಕ್​ನಲ್ಲಿ 20 ಉಗ್ರರ ಶಿಬಿರ ಸಕ್ರೀಯ... ಭಾರತದ ಮೇಲೆ ಉಗ್ರ ದಾಳಿಗೆ ಪ್ಲಾನ್​! 



ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್​ 370 ರದ್ಧುಗೊಂಡ ಬಳಿಕ ಪಾಕಿಸ್ತಾನ ಭಾರತದ ಮೇಲೆ ಹರಿಹಾಯುತ್ತಿದ್ದು, ಮೇಲಿಂದ ಮೇಲೆ ಗಡಿ ಪ್ರದೇಶದಲ್ಲಿ ಉಗ್ರ ದಾಳಿ ನಡೆಸಲು ಪ್ಲಾನ್​ ಹಾಕಿಕೊಳ್ಳುತ್ತಿದೆ. ಇದರ ಮಧ್ಯೆ ಗಡಿ ಪ್ರದೇಶದಲ್ಲಿ ಪಾಕ್​ನ 20 ಭಯೋತ್ಪಾದಕ ಶಿಬಿರ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಹತ್ವದ ಮಾಹಿತಿ ಹೊರಬಿದ್ದಿದೆ. 



ಪ್ರತಿಯೊಂದು ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಉಗ್ರರು ಕಾರ್ಯ ನಿರ್ವಹಿಸುತ್ತಿದ್ದು, ಫೆಬ್ರವರಿಯಲ್ಲಿ ನಡೆದಿರುವ ಪುಲ್ವಾಮಾದಂತಹ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಭದ್ರತಾ ಇಲಾಖೆಗೆ ಮಾಹಿತಿ ನೀಡಿದೆ. ಚಳಿಗಾಲ ಆರಂಭಗೊಳ್ಳುವ ಮೊದಲೇ ಜಮ್ಮು-ಕಾಶ್ಮೀರದೊಳಗೆ ಉಗ್ರರನ್ನು ಒಳನುಗ್ಗಿಸಿ,ಭಯೋತ್ಪಾದನಾ ಕೃತ್ಯ ನಡೆಸಲು ಮುಂದಾಗಿದೆ ಎಂದು ತಿಳಿದು ಬಂದಿದೆ



ಈಗಾಗಲೇ ಗಡಿ ಪ್ರದೇಶಗಳಲ್ಲಿ ಭಾರತೀಯ ಯೋಧರು ಹದ್ದಿ ಕಣ್ಣಿಟ್ಟಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಜಮ್ಮು- ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್​​,ಜಮ್ಮು-ಕಾಶ್ಮೀರದಲ್ಲಿ 200 ರಿಂದ 300 ಉಗ್ರರು ಕಾರ್ಯ ನಿರತರಾಗಿದ್ದಾರೆ ಎಂದಿದ್ದಾರೆ. 



ಪ್ರಮುಖವಾಗಿ ಎಲ್​ಇಟಿ, ಹಿಜ್ಬುಲ್ ಮುಜಾಹಿದ್ದೀನ್ ಹಾಗೂ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗಳು ಈ ಕಾರ್ಯ ನಡೆಸಿದ್ದು, ಭಾರತೀಯ ಯೋಧರ ಮೇಲೆ ದೊಡ್ಡ ಪ್ರಮಾಣದ ದಾಳಿ ನಡೆಸಲು ಮಹತ್ವದ ಪ್ಲಾನ್​ ಹಾಕಿಕೊಂಡಿದ್ದಾಗಿ ತಿಳಿದು ಬಂದಿದೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.