ETV Bharat / bharat

ಗರ್ಭಿಣಿ, ಬಾಣಂತಿಯರ ಹಾಜರಾತಿ ವಿನಾಯಿತಿಗೆ ಯುಜಿಸಿ, ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್​

author img

By

Published : Feb 18, 2020, 1:41 AM IST

Updated : Feb 18, 2020, 7:13 AM IST

ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಜರಾತಿ ಮಾನದಂಡಗಳನ್ನು ಸಡಿಲಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಯುಜಿಸಿ ನಿಲುವು ತಿಳಿದುಕೊಳ್ಳಲು ಇಚ್ಛಿಸಿದೆ.

ಗರ್ಭಿಣಿ, ಬಾಣಂತಿಯರಿಗೆ ಹಾಜಾರಾತಿ ವಿನಾಯಿತಿ
ಗರ್ಭಿಣಿ, ಬಾಣಂತಿಯರಿಗೆ ಹಾಜಾರಾತಿ ವಿನಾಯಿತಿ

ನವದೆಹಲಿ: ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಜರಾತಿ ಮಾನದಂಡಗಳನ್ನು ಸಡಿಲಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತಮ್ಮ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಯುಜಿಸಿ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಗಳಿಗೆ ನೋಟಿಸ್​ ಜಾರಿಗೊಳಿಸಿದ್ದು, ಪಿಐಎಲ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಕೋರಿದೆ.

ಇದರ ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ), ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೂ (ಎಐಸಿಟಿಇ) ನೋಟಿಸ್​ ಜಾರಿಗೊಳಿಸಿದೆ. ಮುಂದಿನ ವಿಚಾರಣೆಗೂ ಮೊದಲೇ ಅಂದರೆ, ಮೇ 28ಕ್ಕೂ ಮುನ್ನ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಆದೇಶಿಸಿದೆ.

ಗರ್ಭಿಣಿ ಮತ್ತು ಬಾಣಂತಿ ಸಂದರ್ಭಗಳಲ್ಲಿ ತರಗತಿಗಳಿಗೆ ಗೈರಾಗುವ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಹಾಜರಾತಿಯಲ್ಲಿ ವಿನಾಯಿತಿ ನೀಡಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ವಕೀಲ ಕುಶ್ ಕಲ್ರಾ ಎಂಬವರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.

'ಗರ್ಭಿಣಿ ಮತ್ತು ಬಾಣಂತನದ ದಿನಗಳಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ, ಹೆಚ್ಚಿನ ಮಹಿಳೆಯರು ಶಿಕ್ಷಣವನ್ನೇ ಅರ್ಧದಲ್ಲೇ ಮೊಟಕುಗೊಳಿಸುತ್ತಿದ್ದಾರೆ. ಇನ್ನೂ ಕೆಲವರು ಸೆಮಿಸ್ಟರ್​ಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಲ್ರಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಹೆರಿಗೆ ಪ್ರಯೋಜನಗಳ ಕಾಯ್ದೆಯಡಿ ದುಡಿಯುವ ಮಹಿಳೆಯರಿಗೆ ಕಲ್ಪಿಸುವ ಪ್ರಯೋಜನಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವವರಿಗೂ ಒದಗಿಸಬೇಕು. ಇಲ್ಲದಿದ್ದರೆ ತಾರತಮ್ಯಎಸಗಿದಂತೆ ಆಗುತ್ತದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನವದೆಹಲಿ: ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಜರಾತಿ ಮಾನದಂಡಗಳನ್ನು ಸಡಿಲಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತಮ್ಮ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗಕ್ಕೆ (ಯುಜಿಸಿ) ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಯುಜಿಸಿ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಗಳಿಗೆ ನೋಟಿಸ್​ ಜಾರಿಗೊಳಿಸಿದ್ದು, ಪಿಐಎಲ್​ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಕೋರಿದೆ.

ಇದರ ಜೊತೆಗೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ), ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ (ಎಂಸಿಐ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೂ (ಎಐಸಿಟಿಇ) ನೋಟಿಸ್​ ಜಾರಿಗೊಳಿಸಿದೆ. ಮುಂದಿನ ವಿಚಾರಣೆಗೂ ಮೊದಲೇ ಅಂದರೆ, ಮೇ 28ಕ್ಕೂ ಮುನ್ನ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಆದೇಶಿಸಿದೆ.

ಗರ್ಭಿಣಿ ಮತ್ತು ಬಾಣಂತಿ ಸಂದರ್ಭಗಳಲ್ಲಿ ತರಗತಿಗಳಿಗೆ ಗೈರಾಗುವ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಹಾಜರಾತಿಯಲ್ಲಿ ವಿನಾಯಿತಿ ನೀಡಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ವಕೀಲ ಕುಶ್ ಕಲ್ರಾ ಎಂಬವರು ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.

'ಗರ್ಭಿಣಿ ಮತ್ತು ಬಾಣಂತನದ ದಿನಗಳಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ, ಹೆಚ್ಚಿನ ಮಹಿಳೆಯರು ಶಿಕ್ಷಣವನ್ನೇ ಅರ್ಧದಲ್ಲೇ ಮೊಟಕುಗೊಳಿಸುತ್ತಿದ್ದಾರೆ. ಇನ್ನೂ ಕೆಲವರು ಸೆಮಿಸ್ಟರ್​ಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಲ್ರಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಹೆರಿಗೆ ಪ್ರಯೋಜನಗಳ ಕಾಯ್ದೆಯಡಿ ದುಡಿಯುವ ಮಹಿಳೆಯರಿಗೆ ಕಲ್ಪಿಸುವ ಪ್ರಯೋಜನಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುವವರಿಗೂ ಒದಗಿಸಬೇಕು. ಇಲ್ಲದಿದ್ದರೆ ತಾರತಮ್ಯಎಸಗಿದಂತೆ ಆಗುತ್ತದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.

Last Updated : Feb 18, 2020, 7:13 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.