ETV Bharat / bharat

ಸಿಂಘು ಗಡಿಯಲ್ಲಲ್ಲ.. ಡಿ. 25ಕ್ಕೆ ಯುಪಿ ರೈತರೊಂದಿಗೆ ಪ್ರಧಾನಿ ಮೋದಿ ಸಂವಾದ

author img

By

Published : Dec 20, 2020, 1:36 PM IST

ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಪಕ್ಷದ ಮುಖಂಡ ರಾಧಾ ಮೋಹನ್ ಸಿಂಗ್ ಅವರು ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದ್ದಾರೆ..

PM Modi
PM Modi

ಲಖನೌ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನ ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ.

ಉತ್ತರಪ್ರದೇಶದ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ 'ಕಿಸಾನ್ ಸಂವಾದ್' ನಡೆಯಲಿದೆ. ಈ ಹಿನ್ನೆಲೆ ಪಕ್ಷವು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದೆ ಎಂದು ಬಿಜೆಪಿ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಪಕ್ಷದ ಮುಖಂಡ ರಾಧಾ ಮೋಹನ್ ಸಿಂಗ್ ಅವರು ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಳ್ಳು ಮಾಹಿತಿ ಹರಡುತ್ತಿವೆ ಎಂದು ರಾಧಾ ಮೋಹನ್ ಸಿಂಗ್ ಆರೋಪಿಸಿದ್ದಾರೆ.

ಲಖನೌ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನ ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈತರೊಂದಿಗೆ ವಿಶೇಷ ಸಂವಾದ ನಡೆಸಲಿದ್ದಾರೆ.

ಉತ್ತರಪ್ರದೇಶದ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ 'ಕಿಸಾನ್ ಸಂವಾದ್' ನಡೆಯಲಿದೆ. ಈ ಹಿನ್ನೆಲೆ ಪಕ್ಷವು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದೆ ಎಂದು ಬಿಜೆಪಿ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಯುಪಿ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಪಕ್ಷದ ಮುಖಂಡ ರಾಧಾ ಮೋಹನ್ ಸಿಂಗ್ ಅವರು ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಳ್ಳು ಮಾಹಿತಿ ಹರಡುತ್ತಿವೆ ಎಂದು ರಾಧಾ ಮೋಹನ್ ಸಿಂಗ್ ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.