ETV Bharat / bharat

ಆಸ್ತಿ ಕಾರ್ಡ್​​​ ವಿತರಿಸುವ 'ಸ್ವಾಮಿತ್ವ' ಯೋಜನೆಗೆ ಚಾಲನೆ ನೀಡಲಿದ್ದಾರೆ ಮೋದಿ

author img

By

Published : Oct 11, 2020, 8:32 AM IST

ಕೇಂದ್ರ ಸರ್ಕಾರದ 'ಸ್ವಾಮಿತ್ವ' (ಸುಧಾರಿತ ತಂತ್ರಜ್ಞಾನ ಬಳಕೆ ಮೂಲಕ ಗ್ರಾಮಗಳ ಸಮೀಕ್ಷೆ ಹಾಗೂ ಮ್ಯಾಪಿಂಗ್) ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.

PM Modi to launch rural property cards' distribution today
ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಲಿದ್ದಾರೆ ಮೋದಿ

ನವದೆಹಲಿ: ಆಸ್ತಿ ಕಾರ್ಡ್​​ ವಿತರಿಸುವ 'ಸ್ವಾಮಿತ್ವ' (SVAMITVA) ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ವಾಸ ಮಾಡಿರುವ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಹಕ್ಕುಪತ್ರ ನೀಡುವ ಯೋಜನೆ ಇದಾಗಿದೆ.

"ಈ ಯೋಜನೆ ಸುಮಾರು ಒಂದು ಲಕ್ಷ ಮಂದಿ ಆಸ್ತಿ ಮಾಲೀಕರು ತಮ್ಮ ಮೊಬೈಲ್ ಫೋನ್‌ಗೆ ಬಂದ ಎಸ್‌ಎಂಎಸ್ ಲಿಂಕ್ ಮೂಲಕ ತಮ್ಮ ಆಸ್ತಿ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು ಅನುವು ಮಾಡಿಕೊಡುತ್ತದೆ. ಇದರ ನಂತರ ಆಯಾ ರಾಜ್ಯ ಸರ್ಕಾರಗಳು ಆಸ್ತಿ ಕಾರ್ಡ್‌ಗಳನ್ನು ಭೌತಿಕವಾಗಿ ವಿತರಿಸುತ್ತವೆ" ಎಂದು ಕೇಂದ್ರ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದಿಂದ 346, ಹರಿಯಾಣದಿಂದ 221, ಮಹಾರಾಷ್ಟ್ರದಿಂದ 100, ಮಧ್ಯಪ್ರದೇಶದಿಂದ 44, ಉತ್ತರಾಖಂಡದಿಂದ 50 ಮತ್ತು ಕರ್ನಾಟಕದ 2 ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳ ಫಲಾನುಭವಿಗಳು ಈ ಯೋಜನೆಯ ಭಾಗವಾಗಿದ್ದಾರೆ.

ಸಾಲ ಮತ್ತು ಇತರ ಆರ್ಥಿಕ ಸವಲತ್ತು ಪಡೆಯಲು ಈ ಯೋಜನೆ ಸಕಾರಿಯಾಗಲಿದೆ. ಗ್ರಾಮಸ್ಥರು ತಮ್ಮ ಆಸ್ತಿಯನ್ನು ಆರ್ಥಿಕ ಸೌಲಭ್ಯಕ್ಕಾಗಿ ಬಳಸಿಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ಸರ್ಕಾರ ಹೇಳಿದೆ. ಲಕ್ಷಾಂತರ ಗ್ರಾಮೀಣ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಇಷ್ಟು ದೊಡ್ಡ ಪ್ರಮಾಣದ ಯೋಜನೆ ನಡೆಸುತ್ತಿರುವುದು ಇದೇ ಮೊದಲು ಎನ್ನಲಾಗ್ತಿದೆ.

ಯೋಜನೆಗೆ ಚಾಲನೆ ನೀಡಿದ ನಂತರ ಪ್ರಧಾನಿ ಮೋದಿ ಅವರು ಕೆಲವು ಫಲಾನುಭವಿಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಕೇಂದ್ರ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಉಪಸ್ಥಿತರಿರಲಿದ್ದಾರೆ.

ನವದೆಹಲಿ: ಆಸ್ತಿ ಕಾರ್ಡ್​​ ವಿತರಿಸುವ 'ಸ್ವಾಮಿತ್ವ' (SVAMITVA) ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ವಾಸ ಮಾಡಿರುವ ತಮ್ಮ ಜಾಗದ ದಾಖಲೆ ಹೊಂದಿರದವರಿಗೆ ಹಕ್ಕುಪತ್ರ ನೀಡುವ ಯೋಜನೆ ಇದಾಗಿದೆ.

"ಈ ಯೋಜನೆ ಸುಮಾರು ಒಂದು ಲಕ್ಷ ಮಂದಿ ಆಸ್ತಿ ಮಾಲೀಕರು ತಮ್ಮ ಮೊಬೈಲ್ ಫೋನ್‌ಗೆ ಬಂದ ಎಸ್‌ಎಂಎಸ್ ಲಿಂಕ್ ಮೂಲಕ ತಮ್ಮ ಆಸ್ತಿ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು ಅನುವು ಮಾಡಿಕೊಡುತ್ತದೆ. ಇದರ ನಂತರ ಆಯಾ ರಾಜ್ಯ ಸರ್ಕಾರಗಳು ಆಸ್ತಿ ಕಾರ್ಡ್‌ಗಳನ್ನು ಭೌತಿಕವಾಗಿ ವಿತರಿಸುತ್ತವೆ" ಎಂದು ಕೇಂದ್ರ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದಿಂದ 346, ಹರಿಯಾಣದಿಂದ 221, ಮಹಾರಾಷ್ಟ್ರದಿಂದ 100, ಮಧ್ಯಪ್ರದೇಶದಿಂದ 44, ಉತ್ತರಾಖಂಡದಿಂದ 50 ಮತ್ತು ಕರ್ನಾಟಕದ 2 ಸೇರಿದಂತೆ ಆರು ರಾಜ್ಯಗಳ 763 ಗ್ರಾಮಗಳ ಫಲಾನುಭವಿಗಳು ಈ ಯೋಜನೆಯ ಭಾಗವಾಗಿದ್ದಾರೆ.

ಸಾಲ ಮತ್ತು ಇತರ ಆರ್ಥಿಕ ಸವಲತ್ತು ಪಡೆಯಲು ಈ ಯೋಜನೆ ಸಕಾರಿಯಾಗಲಿದೆ. ಗ್ರಾಮಸ್ಥರು ತಮ್ಮ ಆಸ್ತಿಯನ್ನು ಆರ್ಥಿಕ ಸೌಲಭ್ಯಕ್ಕಾಗಿ ಬಳಸಿಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ಸರ್ಕಾರ ಹೇಳಿದೆ. ಲಕ್ಷಾಂತರ ಗ್ರಾಮೀಣ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಇಷ್ಟು ದೊಡ್ಡ ಪ್ರಮಾಣದ ಯೋಜನೆ ನಡೆಸುತ್ತಿರುವುದು ಇದೇ ಮೊದಲು ಎನ್ನಲಾಗ್ತಿದೆ.

ಯೋಜನೆಗೆ ಚಾಲನೆ ನೀಡಿದ ನಂತರ ಪ್ರಧಾನಿ ಮೋದಿ ಅವರು ಕೆಲವು ಫಲಾನುಭವಿಗಳೊಂದಿಗೆ ಸಂವಹನ ನಡೆಸಲಿದ್ದಾರೆ. ಕೇಂದ್ರ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಉಪಸ್ಥಿತರಿರಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.