ETV Bharat / bharat

ಕೊರೊನಾ ಹೆಚ್ಚಾಗಲು ವಾಯುಮಾಲಿನ್ಯ ಪ್ರಮುಖ ಕಾರಣ: ಮೋದಿಗೆ ಕೇಜ್ರಿವಾಲ್​ ಮಾಹಿತಿ

author img

By

Published : Nov 24, 2020, 4:35 PM IST

Updated : Nov 24, 2020, 4:43 PM IST

ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 1,000 ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗಾಗಿ ಮೀಸಲಿಡಲಾಗಿದೆ ಎಂದು ಪ್ರಧಾನಮಂತ್ರಿ ಅವರೊಂದಿಗೆ ನಡೆದ ಸಭೆಯಲ್ಲಿ ಕೇಜ್ರಿವಾಲ್ ಮಾಹಿತಿ ನೀಡಿದ್ರು.

ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೋವಿಡ್ ಸಂಬಂಧ ಎಲ್ಲ ರಾಜ್ಯದ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಇದಕ್ಕೆ ಹಲವು ಕಾರಣಗಳಿವೆ ಅದರಲ್ಲಿ ವಾಯುಮಾಲಿನ್ಯ ಪ್ರಮುಖ ಕಾರಣ ಎಂದರು.

ನವೆಂಬರ್ 10 ರಂದು ದೆಹಲಿಯಲ್ಲಿ 8,600 ಕೊರೊನಾ ವೈರಸ್​ ಪ್ರಕರಣಗಳು ಪತ್ತೆಯಾಗಿದ್ದು, ಅದೇ ಹೆಚ್ಚಿನ ಸಂಖ್ಯೆಯಾಗಿದೆ. ಅಂದಿನಿಂದ ಇಂದಿನವರೆಗೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಕೇಜ್ರಿವಾಲ್ ಪ್ರಧಾನ ಮಂತ್ರಿಗೆ ತಿಳಿಸಿದರು.

ಚೇತರಿಕೆ ಪ್ರಮಾಣ ಹೆಚ್ಚಿದೆ ಎಂದು ಅಸಡ್ಡೆ ಬೇಡ: ಪ್ರಧಾನಿ ಮೋದಿ ಎಚ್ಚರಿಕೆ

ಮೂರನೇ ಅಲೆಯ ಕೊರೊನಾ ಹೆಚ್ಚಾಗಲು ವಾಯುಮಾಲಿನ್ಯ ಪ್ರಮುಖ ಕಾರಣವಾಗಿದೆ. ಇದಕ್ಕೆ ಪ್ರಮುಖ ಕಾರಣ ಪಕ್ಕದ ರಾಜ್ಯಗಳು ಹೊಲದಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದು. ಮಾಲಿನ್ಯ ನಿಯಂತ್ರಣಕ್ಕೆ ಪ್ರಧಾನಿಯವರು ಮುಂದಾಗಬೇಕು ಎಂದು ಕೇಜ್ರಿವಾಲ್​ ಹೇಳಿದರು.

ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 1,000 ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗಾಗಿ ಮೀಸಲಿಡಲಾಗಿದೆ. ದೆಹಲಿಯಲ್ಲಿ ಸೋಮವಾರ 4,454 ಕೋವಿಡ್​​ -19 ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಧಾನಿ ಕೇಜ್ರಿವಾಲ್​ ಮಾಹಿತಿ ನೀಡಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೋವಿಡ್ ಸಂಬಂಧ ಎಲ್ಲ ರಾಜ್ಯದ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಈ ವೇಳೆ ಮಾಹಿತಿ ನೀಡಿದ ದೆಹಲಿ ಸಿಎಂ ಅರವಿಂದ್​​ ಕೇಜ್ರಿವಾಲ್ ಕೊರೊನಾ ಮೂರನೇ ಅಲೆ ಆರಂಭವಾಗಿದ್ದು, ಇದಕ್ಕೆ ಹಲವು ಕಾರಣಗಳಿವೆ ಅದರಲ್ಲಿ ವಾಯುಮಾಲಿನ್ಯ ಪ್ರಮುಖ ಕಾರಣ ಎಂದರು.

ನವೆಂಬರ್ 10 ರಂದು ದೆಹಲಿಯಲ್ಲಿ 8,600 ಕೊರೊನಾ ವೈರಸ್​ ಪ್ರಕರಣಗಳು ಪತ್ತೆಯಾಗಿದ್ದು, ಅದೇ ಹೆಚ್ಚಿನ ಸಂಖ್ಯೆಯಾಗಿದೆ. ಅಂದಿನಿಂದ ಇಂದಿನವರೆಗೆ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂದು ಕೇಜ್ರಿವಾಲ್ ಪ್ರಧಾನ ಮಂತ್ರಿಗೆ ತಿಳಿಸಿದರು.

ಚೇತರಿಕೆ ಪ್ರಮಾಣ ಹೆಚ್ಚಿದೆ ಎಂದು ಅಸಡ್ಡೆ ಬೇಡ: ಪ್ರಧಾನಿ ಮೋದಿ ಎಚ್ಚರಿಕೆ

ಮೂರನೇ ಅಲೆಯ ಕೊರೊನಾ ಹೆಚ್ಚಾಗಲು ವಾಯುಮಾಲಿನ್ಯ ಪ್ರಮುಖ ಕಾರಣವಾಗಿದೆ. ಇದಕ್ಕೆ ಪ್ರಮುಖ ಕಾರಣ ಪಕ್ಕದ ರಾಜ್ಯಗಳು ಹೊಲದಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದು. ಮಾಲಿನ್ಯ ನಿಯಂತ್ರಣಕ್ಕೆ ಪ್ರಧಾನಿಯವರು ಮುಂದಾಗಬೇಕು ಎಂದು ಕೇಜ್ರಿವಾಲ್​ ಹೇಳಿದರು.

ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 1,000 ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗಾಗಿ ಮೀಸಲಿಡಲಾಗಿದೆ. ದೆಹಲಿಯಲ್ಲಿ ಸೋಮವಾರ 4,454 ಕೋವಿಡ್​​ -19 ಪ್ರಕರಣಗಳು ಪತ್ತೆಯಾಗಿವೆ ಎಂದು ಪ್ರಧಾನಿ ಕೇಜ್ರಿವಾಲ್​ ಮಾಹಿತಿ ನೀಡಿದರು.

Last Updated : Nov 24, 2020, 4:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.