ETV Bharat / bharat

ಪಶುವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣ: ಎಲ್ಲೆಡೆ ಭಾರೀ ಆಕ್ರೋಶ - ಪಶುವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

ಹೈದರಾಬಾದ್​ನ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತೆಲಂಗಾಣದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

Protest
ಪ್ರತಿಭಟನೆ
author img

By

Published : Nov 30, 2019, 8:13 PM IST

Updated : Nov 30, 2019, 8:38 PM IST

ಹೈದ್ರಾಬಾದ್: ಇಲ್ಲಿನ 26 ವರ್ಷದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ಘಟನೆ ವಿರೋಧಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತೆಲಂಗಾಣದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಜೋರಾಗಿದೆ.

ಶಾದ್​ನಗರ ಪೊಲೀಸ್​ ಠಾಣೆ ಹೊರಗಡೆ ತೀವ್ರ ಪ್ರತಿಭಟನೆ

ಒಂದೆಡೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಹೈದರಾಬಾದ್-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ತೆಲಂಗಾಣದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು 'ದೀಕ್ಷಾ' ಎಂಬ ಹೆಸರಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ತೆಲಂಗಾಣದಲ್ಲಿ ಮಹಿಳೆಯರು ಶೇ. 1ರಷ್ಟು ಕೂಡ ಸುರಕ್ಷಿತವಾಗಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಕುಲ ವಿಜಯ ಆರೋಪಿಸಿದ್ದಾರೆ.

  • #WATCH: Police lathicharged on locals who hurled slippers on police outside Shadnagar police station, where the accused in rape&murder case of the woman veterinary doctor were lodged earlier today. Accused have been shifted to Chanchalguda Central Jail. #Telangana pic.twitter.com/qXOc0SVOyS

    — ANI (@ANI) November 30, 2019 " class="align-text-top noRightClick twitterSection" data=" ">

ಈ ವೇಳೆ ಮಾತನಾಡಿದ ಬಿಜೆಪಿ ವಕ್ತಾರ ರಾಮ್‌ಚಂದರ್ ರಾವ್, ತೆಲಂಗಾಣದಲ್ಲಿ ಒಂದೇ ದಿನದಲ್ಲಿ ಎರಡು ಅತ್ಯಾಚಾರ ಮತ್ತು ಕೊಲೆ ಘಟನೆಗಳು ನಡೆದಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು. ಘಟನೆ ನಡೆದ 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಪೊಲೀಸರಿಗೆ ಶ್ಲಾಘಿಸಿದರು.

ಇನ್ನು ಹೈದರಾಬಾದ್​​ನ ದಿಲ್​ಶುಖ್​​​ ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹಾಗೆಯೇ ಶಂಶಾಬಾದ್​ನಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮೃತ ವೈದ್ಯೆ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಹೈದ್ರಾಬಾದ್: ಇಲ್ಲಿನ 26 ವರ್ಷದ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ಘಟನೆ ವಿರೋಧಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತೆಲಂಗಾಣದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಜೋರಾಗಿದೆ.

ಶಾದ್​ನಗರ ಪೊಲೀಸ್​ ಠಾಣೆ ಹೊರಗಡೆ ತೀವ್ರ ಪ್ರತಿಭಟನೆ

ಒಂದೆಡೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಹೈದರಾಬಾದ್-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ತೆಲಂಗಾಣದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು 'ದೀಕ್ಷಾ' ಎಂಬ ಹೆಸರಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ತೆಲಂಗಾಣದಲ್ಲಿ ಮಹಿಳೆಯರು ಶೇ. 1ರಷ್ಟು ಕೂಡ ಸುರಕ್ಷಿತವಾಗಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಕುಲ ವಿಜಯ ಆರೋಪಿಸಿದ್ದಾರೆ.

  • #WATCH: Police lathicharged on locals who hurled slippers on police outside Shadnagar police station, where the accused in rape&murder case of the woman veterinary doctor were lodged earlier today. Accused have been shifted to Chanchalguda Central Jail. #Telangana pic.twitter.com/qXOc0SVOyS

    — ANI (@ANI) November 30, 2019 " class="align-text-top noRightClick twitterSection" data=" ">

ಈ ವೇಳೆ ಮಾತನಾಡಿದ ಬಿಜೆಪಿ ವಕ್ತಾರ ರಾಮ್‌ಚಂದರ್ ರಾವ್, ತೆಲಂಗಾಣದಲ್ಲಿ ಒಂದೇ ದಿನದಲ್ಲಿ ಎರಡು ಅತ್ಯಾಚಾರ ಮತ್ತು ಕೊಲೆ ಘಟನೆಗಳು ನಡೆದಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡಬೇಕು. ಘಟನೆ ನಡೆದ 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಪೊಲೀಸರಿಗೆ ಶ್ಲಾಘಿಸಿದರು.

ಇನ್ನು ಹೈದರಾಬಾದ್​​ನ ದಿಲ್​ಶುಖ್​​​ ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹಾಗೆಯೇ ಶಂಶಾಬಾದ್​ನಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮೃತ ವೈದ್ಯೆ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

Intro:Body:

national


Conclusion:
Last Updated : Nov 30, 2019, 8:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.