ETV Bharat / bharat

ನಿಗದಿ ಸ್ಥಳಕ್ಕೆ ಪ್ರತಿಭಟನೆ ಸ್ಥಳಾಂತರಿಸಿ, ಮಾತುಕತೆಗೆ ಬನ್ನಿ: ರೈತರಿಗೆ ಅಮಿತ್​ ಶಾ ಮನವಿ

author img

By

Published : Nov 29, 2020, 12:15 PM IST

ಗೊತ್ತುಪಡಿಸಿದ ಸ್ಥಳಕ್ಕೆ ಪ್ರತಿಭಟನೆಯನ್ನು ಸ್ಥಳಾಂತರಿಸಿದರೆ, ಮರುದಿನವೇ ರೈತ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮಾತುಕತೆ ನಡೆಸಲಿದೆ ಎಂದು ಅಮಿತ್​ ಶಾ ಭರವಸೆ ನೀಡಿದ್ದಾರೆ.

Framers protest over new farm laws
ಕೃಷಿ ಕಾನೂನು ವಿರುದ್ಧ ರೈತರಿಂದ ಪ್ರತಿಭಟನೆ

ನವದೆಹಲಿ: ಡಿಸೆಂಬರ್​ 3ರೊಳಗೆ ಗೊತ್ತುಪಡಿಸಿದ ಸ್ಥಳಕ್ಕೆ ಪ್ರತಿಭಟನೆಯನ್ನು ಸ್ಥಳಾಂತರಿಸಿದರೆ, ಮರುದಿನವೇ ರೈತ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮಾತುಕತೆ ನಡೆಸಲಿದೆ ಎಂದು ಗೃಹ ಸಚಿವ ಅಮಿತ್​ ಶಾ ಭರವಸೆ ನೀಡಿದ್ದಾರೆ.

ದೆಹಲಿ ಚಲೋ ಹಮ್ಮಿಕೊಂಡಿರುವ ರೈತರು, ರಾಜಧಾನಿಯ ಗಡಿಗಳಾದ ಸಿಂಗು ಮತ್ತು ಟಿಕ್ರಿಗಳಲ್ಲಿ ಉಳಿದುಕೊಂಡಿದ್ದಾರೆ. ರೈತರು ಬುರಾರಿಯ ನಿರಂಕರಿ ಸಮಗಂ ಮೈದಾನಕ್ಕೆ ಪ್ರತಿಭಟನೆ ಸ್ಥಳಾಂತರಿಸಿ, ಚರ್ಚೆಗೆ ಬರುವಂತೆ ಅಮಿತ್​ ಶಾ ಮನವಿ ಮಾಡಿದ್ದಾರೆ.

ಗಾಜಿಯಾಬಾದ್-ದೆಹಲಿ ಗಡಿಯಲ್ಲಿ ಕೃಷಿ ತಿದ್ದುಪಡಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಗಳು ರಾಮ್​ ಲೀಲಾ ಮೈದಾನದಲ್ಲಿ ನಡೆಯುತ್ತವೆ, ನಾವೇಕೆ ನಿರಂಕರಿ ಮೈದಾನಕ್ಕೆ ತೆರಳಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕೈಟ್ ಪ್ರಶ್ನಿಸಿದ್ದಾರೆ.

ನವದೆಹಲಿ: ಡಿಸೆಂಬರ್​ 3ರೊಳಗೆ ಗೊತ್ತುಪಡಿಸಿದ ಸ್ಥಳಕ್ಕೆ ಪ್ರತಿಭಟನೆಯನ್ನು ಸ್ಥಳಾಂತರಿಸಿದರೆ, ಮರುದಿನವೇ ರೈತ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮಾತುಕತೆ ನಡೆಸಲಿದೆ ಎಂದು ಗೃಹ ಸಚಿವ ಅಮಿತ್​ ಶಾ ಭರವಸೆ ನೀಡಿದ್ದಾರೆ.

ದೆಹಲಿ ಚಲೋ ಹಮ್ಮಿಕೊಂಡಿರುವ ರೈತರು, ರಾಜಧಾನಿಯ ಗಡಿಗಳಾದ ಸಿಂಗು ಮತ್ತು ಟಿಕ್ರಿಗಳಲ್ಲಿ ಉಳಿದುಕೊಂಡಿದ್ದಾರೆ. ರೈತರು ಬುರಾರಿಯ ನಿರಂಕರಿ ಸಮಗಂ ಮೈದಾನಕ್ಕೆ ಪ್ರತಿಭಟನೆ ಸ್ಥಳಾಂತರಿಸಿ, ಚರ್ಚೆಗೆ ಬರುವಂತೆ ಅಮಿತ್​ ಶಾ ಮನವಿ ಮಾಡಿದ್ದಾರೆ.

ಗಾಜಿಯಾಬಾದ್-ದೆಹಲಿ ಗಡಿಯಲ್ಲಿ ಕೃಷಿ ತಿದ್ದುಪಡಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಗಳು ರಾಮ್​ ಲೀಲಾ ಮೈದಾನದಲ್ಲಿ ನಡೆಯುತ್ತವೆ, ನಾವೇಕೆ ನಿರಂಕರಿ ಮೈದಾನಕ್ಕೆ ತೆರಳಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕೈಟ್ ಪ್ರಶ್ನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.