ETV Bharat / bharat

ಕೊರೊನಾ ಭೀತಿಯಲ್ಲಿ ಮುಗ್ಗರಿಸಿದ ಮಾರುಕಟ್ಟೆ... ಕೇಂದ್ರದ ವಿರುದ್ಧ ರಾಹುಲ್​ ವಾಗ್ದಾಳಿ

ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಮಹಾಮಾರಿ ಕೊರೊನಾದಿಂದಾಗಿ ದೇಶದ ಆರ್ಥಿಕತೆ ಸಂಪೂರ್ಣವಾಗಿ ಹಾಳಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ನೇರ ಹೊಣೆ ಎಂದು ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

author img

By

Published : Mar 13, 2020, 12:19 PM IST

Rahul Gandhi
ರಾಹುಲ್​ ಗಾಂಧಿ

ನವದೆಹಲಿ: ದೇಶದಲ್ಲೂ ರುದ್ರತಾಂಡವ ಆಡುತ್ತಿರುವ ಮಹಾಮಾರಿ ಕೊರೊನಾ ಎಲ್ಲ ವಲಯಗಳಲ್ಲೂ ವ್ಯಾಪಿಸಿದ್ದು, ಮಾರುಕಟ್ಟೆ ಮೇಲೆ ಇನ್ನಿಲ್ಲದ ಪರಿಣಾಮ ಬೀರಿದೆ. ಈಗಾಗಲೇ ದೇಶದ ಆರ್ಥಿಕತೆ ಮತ್ತಷ್ಟು ಇಳಕೆಯಾಗಿದ್ದು, ಇದೇ ವಿಷಯವನ್ನಿಟ್ಟುಕೊಂಡು ರಾಹುಲ್​ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ಟೀಟ್​ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್​ ಗಾಂಧಿ, ನಾನು ಇದನ್ನ ಮತ್ತೊಮ್ಮೆ ಪುನರಾವರ್ತನೆ ಮಾಡುತ್ತಿದ್ದೇನೆ. ಕೊರೊನಾ ವೈರಸ್​​ ದೊಡ್ಡ ಸಮಸ್ಯೆಯಾಗಿದೆ. ನಿವಾರಣೆ ಮಾಡಲು ಕ್ರಮ ಕೈಗೊಳ್ಳುವ ಬದಲು ಬೇಜವಾಬ್ದಾರಿ ತೋರಲಾಗುತ್ತಿದೆ. ಒಂದು ವೇಳೆ ದೊಡ್ಡ ಮಟ್ಟದ ನಿರ್ಧಾರ ಕೈಗೊಳ್ಳದೇ ಹೋದರೆ ಭಾರತದ ಆರ್ಥಿಕತೆ ಸಂಪೂರ್ಣವಾಗಿ ಹಾಳಾಗಲಿದೆ ಎಂದಿರುವ ರಾಗಾ, ಕೇಂದ್ರ ಸರ್ಕಾರ ಮೂರ್ಖತನದಿಂದ ನಡೆದುಕೊಳ್ಳುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ನಿನ್ನೆ ಕೂಡ ಇದೇ ವಿಷಯವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್​ ಗಾಂಧಿ, ಕೊರೊನಾ ವೈರಸ್​ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದ್ದರೂ, ಕೇಂದ್ರ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ. ಇದರಿಂದ ದೇಶದ ಜನರ ಆರೋಗ್ಯ ಹಾಗೂ ಆರ್ಥಿಕತೆ ಹಾಳಾಗುತ್ತಿದೆ ಎಂದು ಟ್ವೀಟ್​ ಮಾಡಿದ್ದರು.

ಕೊರೊನಾ ವೈರಸ್ ಭೀತಿಯಿಂದ ಕಳೆದ ಕೆಲ ದಿನಗಳಿಂದ ಮುಂಬೈ ಷೇರು ಮಾರುಕಟ್ಟೆ ಗಣನೀಯ ಮಟ್ಟದಲ್ಲಿ ಇಳಿಕೆ ಕಂಡಿದ್ದರಿಂದ ಹೂಡಿಕೆದಾರರು ಆರ್ಥಿಕ ಸಂಕಷ್ಟ ಅನುಭವಿಸಿದ್ದರು.

ನವದೆಹಲಿ: ದೇಶದಲ್ಲೂ ರುದ್ರತಾಂಡವ ಆಡುತ್ತಿರುವ ಮಹಾಮಾರಿ ಕೊರೊನಾ ಎಲ್ಲ ವಲಯಗಳಲ್ಲೂ ವ್ಯಾಪಿಸಿದ್ದು, ಮಾರುಕಟ್ಟೆ ಮೇಲೆ ಇನ್ನಿಲ್ಲದ ಪರಿಣಾಮ ಬೀರಿದೆ. ಈಗಾಗಲೇ ದೇಶದ ಆರ್ಥಿಕತೆ ಮತ್ತಷ್ಟು ಇಳಕೆಯಾಗಿದ್ದು, ಇದೇ ವಿಷಯವನ್ನಿಟ್ಟುಕೊಂಡು ರಾಹುಲ್​ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟ್ಟೀಟ್​ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್​ ಗಾಂಧಿ, ನಾನು ಇದನ್ನ ಮತ್ತೊಮ್ಮೆ ಪುನರಾವರ್ತನೆ ಮಾಡುತ್ತಿದ್ದೇನೆ. ಕೊರೊನಾ ವೈರಸ್​​ ದೊಡ್ಡ ಸಮಸ್ಯೆಯಾಗಿದೆ. ನಿವಾರಣೆ ಮಾಡಲು ಕ್ರಮ ಕೈಗೊಳ್ಳುವ ಬದಲು ಬೇಜವಾಬ್ದಾರಿ ತೋರಲಾಗುತ್ತಿದೆ. ಒಂದು ವೇಳೆ ದೊಡ್ಡ ಮಟ್ಟದ ನಿರ್ಧಾರ ಕೈಗೊಳ್ಳದೇ ಹೋದರೆ ಭಾರತದ ಆರ್ಥಿಕತೆ ಸಂಪೂರ್ಣವಾಗಿ ಹಾಳಾಗಲಿದೆ ಎಂದಿರುವ ರಾಗಾ, ಕೇಂದ್ರ ಸರ್ಕಾರ ಮೂರ್ಖತನದಿಂದ ನಡೆದುಕೊಳ್ಳುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ನಿನ್ನೆ ಕೂಡ ಇದೇ ವಿಷಯವಾಗಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್​ ಗಾಂಧಿ, ಕೊರೊನಾ ವೈರಸ್​ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದ್ದರೂ, ಕೇಂದ್ರ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ. ಇದರಿಂದ ದೇಶದ ಜನರ ಆರೋಗ್ಯ ಹಾಗೂ ಆರ್ಥಿಕತೆ ಹಾಳಾಗುತ್ತಿದೆ ಎಂದು ಟ್ವೀಟ್​ ಮಾಡಿದ್ದರು.

ಕೊರೊನಾ ವೈರಸ್ ಭೀತಿಯಿಂದ ಕಳೆದ ಕೆಲ ದಿನಗಳಿಂದ ಮುಂಬೈ ಷೇರು ಮಾರುಕಟ್ಟೆ ಗಣನೀಯ ಮಟ್ಟದಲ್ಲಿ ಇಳಿಕೆ ಕಂಡಿದ್ದರಿಂದ ಹೂಡಿಕೆದಾರರು ಆರ್ಥಿಕ ಸಂಕಷ್ಟ ಅನುಭವಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.