ETV Bharat / bharat

ರಾಜಸ್ಥಾನ ಶಾಸಕರ ಅನರ್ಹತೆ ವಿಚಾರ: 'ಯಥಾಸ್ಥಿತಿ' ಕಾಪಾಡಿಕೊಳ್ಳಲು ಹೈಕೋರ್ಟ್​ ಆದೇಶ

author img

By

Published : Jul 24, 2020, 11:46 AM IST

ಅನರ್ಹತೆ ಪ್ರಶ್ನಿಸಿ ಸಚಿನ್ ಪೈಲಟ್ ನೇತೃತ್ವದಲ್ಲಿ ರಾಜಸ್ಥಾನದ 18 ಮಂದಿ ಕಾಂಗ್ರೆಸ್ ಶಾಸಕರು ಜೈಪುರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.

Rajasthan Political crisis
ಸಚಿನ್ ಪೈಲಟ್

ಜೈಪುರ: ಅನರ್ಹತೆ ಪ್ರಶ್ನಿಸಿ ಸಚಿನ್ ಪೈಲಟ್ ಮತ್ತು ಇತರ ಕಾಂಗ್ರೆಸ್​ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಜೈಪುರ ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.

ರಾಜಸ್ಥಾನದಲ್ಲಿ ಸಿಎಂ ಅಶೋಕ್​​ ಗೆಹ್ಲೋಟ್​​ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಡಿಸಿಎಂ ಸಚಿನ್ ಪೈಲಟ್ ಸೇರಿ 18 ಮಂದಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭಾ ಸ್ಪೀಕರ್​ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಜೈಪುರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಇಂದ್ರಜಿತ್ ಮೊಹಾಂತಿ ಹಾಗೂ ನ್ಯಾ. ಪ್ರಕಾಶ್ ಗುಪ್ತಾ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದ್ದಾರೆ. ಹೀಗಾಗಿ ಸ್ಪೀಕರ್ ಆದೇಶ ಮುಂದುವರೆಯಲಿದೆ.

ಜೈಪುರ: ಅನರ್ಹತೆ ಪ್ರಶ್ನಿಸಿ ಸಚಿನ್ ಪೈಲಟ್ ಮತ್ತು ಇತರ ಕಾಂಗ್ರೆಸ್​ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಜೈಪುರ ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.

ರಾಜಸ್ಥಾನದಲ್ಲಿ ಸಿಎಂ ಅಶೋಕ್​​ ಗೆಹ್ಲೋಟ್​​ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಡಿಸಿಎಂ ಸಚಿನ್ ಪೈಲಟ್ ಸೇರಿ 18 ಮಂದಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭಾ ಸ್ಪೀಕರ್​ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಸಚಿನ್ ಪೈಲಟ್ ನೇತೃತ್ವದಲ್ಲಿ ಶಾಸಕರು ಜೈಪುರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳಾದ ಇಂದ್ರಜಿತ್ ಮೊಹಾಂತಿ ಹಾಗೂ ನ್ಯಾ. ಪ್ರಕಾಶ್ ಗುಪ್ತಾ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದ್ದಾರೆ. ಹೀಗಾಗಿ ಸ್ಪೀಕರ್ ಆದೇಶ ಮುಂದುವರೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.