ಚೆನ್ನೈ: ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಅಲ್ಲಿನ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸೂಪರ್ಸ್ಟಾರ್ ರಜನಿಕಾಂತ್ ಸ್ವಾಗತಿಸಿದ್ದಾರೆ.
ಇದರೊಂದಿಗೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ಬಾಧಿತ ವ್ಯಕ್ತಿಗಳಿಗೆ ಆರ್ಥಿಕ ನೆರವು ನೀಡುವಂತೆ ತಲೈವಾ ಮನವಿ ಮಾಡಿದ್ದಾರೆ. ಅಲ್ಲದೆ ವೈರಸ್ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಸಹಕಾರ ನೀಡಬೇಕಾಗಿ ಕರೆ ನೀಡಿದ್ದಾರೆ.
ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಈಗಾಗಲೇ ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯದಲ್ಲಿನ ಶಾಲಾ-ಕಾಲೇಜು, ಮಾಲ್, ಸ್ವಿಮ್ಮಿಂಗ್ ಪೂಲ್, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮಾರ್ಚ್ 31 ರವರೆಗೆ ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿದೆ.