ಮುಂಬೈ: ಕಳೆದ ಕೆಲ ದಿನಗಳ ಹಿಂದೆ ಆಂಧ್ರಪ್ರದೇಶ ಹಾಗೂ ವಿದರ್ಭ ತಂಡಗಳ ನಡುವೆ ರಣಜಿ ಪಂದ್ಯ ನಡೆಯುತ್ತಿದ್ದ ವೇಳೆ ಏಕಾಏಕಿಯಾಗಿ ಮೈದಾನಕ್ಕೆ ಹಾವೊಂದು ಲಗ್ಗೆ ಹಾಕಿ ಆಟಗಾರರಲ್ಲಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ನಡೆದಿತ್ತು.
ಇದೀಗ ಅಂತಹ ಮತ್ತೊಂದು ಘಟನೆ ನಡೆದಿದ್ದು, ಕರ್ನಾಟಕ-ಮುಂಬೈ ತಂಡಗಳ ನಡುವಿನ ಪಂದ್ಯದ ವೇಳೆ ಮೈದಾನದಲ್ಲಿ ಈ ಅಪರೂಪದ ಅತಿಥಿ ಕಾಣಿಸಿಕೊಂಡಿದೆ.
ರಣಜಿ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ಬಂದ ಅಪರೂಪದ ಅತಿಥಿ... ದಿಗಿಲುಗೊಂಡ ಆಟಗಾರರು!
ಬಾದ್ರಾ ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ನಿನ್ನೆ ಕರ್ನಾಟಕ-ಮುಂಬೈ ತಂಡಗಳ ನಡುವೆ ರಣಜಿ ಪಂದ್ಯ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆಟಗಾರರು ಮೈದಾನದಲ್ಲಿದ್ದ ವೇಳೆ ಹಾವು ಮೈದಾನಕ್ಕೆ ಲಗ್ಗೆ ಹಾಕಿದೆ. ಈ ವೇಳೆ ಕೆಲ ನಿಮಿಷಗಳ ಕಾಲ ಪಂದ್ಯವನ್ನ ಸ್ಥಗಿತಗೊಳಿಸಲಾಗಿತ್ತು.
ಮೈದಾನಕ್ಕೆ ಹಾವು ಹಿಡಿಯುವವರು ಬಂದ ಬಳಿಕ ಅದನ್ನ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟು ಬರಲಾಗಿದೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡ 5 ವಿಕೆಟ್ಗಳ ಗೆಲುವು ಸಾಧಿಸಿದೆ.