ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಹಾಗೂ ಹೈಕಮಾಂಡ್ ವಿರುದ್ಧ ಆಗಾಗ ಚಕಾರ ಎತ್ತುತ್ತಿದ್ದ ಪಕ್ಷದ ಸಂಸದ ಶತ್ರುಘ್ನ ಸಿನ್ಹಾಗೆ ಬಿಜೆಪಿ ಗುನ್ನಾ ಇಟ್ಟಿದೆ.
ಬಿಹಾರದ 40 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಎನ್ಡಿಎ, ಶತ್ರುಘ್ನ ಸಿನ್ಹಾ ಅವರು ಹಾಲಿ ಸಂಸದರಾಗಿರುವ ಪಟ್ನಾ ಸಾಹೀಬ್ ಕ್ಷೇತ್ರದ ಟಿಕೆಟ್ ಅನ್ನು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರಿಗೆ ನೀಡಿದೆ. ಈ ಮೂಲಕ ಪದೇ ಪದೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಸಿನ್ಹಾಗೆ ಕೇಸರಿ ಪಡೆ ಕೊಕ್ ನೀಡಿದೆ.
ಪಟ್ನಾ ಸಾಹೀಬ್ ಕ್ಷೇತ್ರದಿಂದ ಸಿನ್ಹಾ ಎರಡು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆ ಆಗಿದ್ದರು. ಆದ್ರೆ ಮೋದಿ ಸರ್ಕಾರದ ಜಿಎಸ್ಟಿ, ನೋಟು ರದ್ದುತಿ, ರಫೇಲ್ ವಿವಾದ ಸೇರಿದಂತೆ ಹಲವು ಕ್ರಮಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿ, ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದರು.