ETV Bharat / bharat

ಪಡಿತರ ನೀಡಲು ನಿರಾಕರಣೆ: ಶಾಲೆ ಮೇಲೆ ಕಲ್ಲು ತೂರಿದ ಜನ - ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ ಜನರು

ಪಡಿತರ ಪಡೆಯಲು ಸರತಿಯಲ್ಲಿ ನಿಂತ ಜನರಿಗೆ ಸ್ಥಳೀಯ ಆಡಳಿತ ಪಡಿತರ ನೀಡುವುದಿಲ್ಲ ಎಂದು ತಿಳಿಸಿದ್ದಕ್ಕೆ ರೊಚ್ಚಿಗೆದ್ದ ಜನ ಕಲ್ಲು ತೂರಾಟ ನಡೆಸಿದ್ದಾರೆ.

Residents pelted stone at government school
ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ ಜನರು
author img

By

Published : May 15, 2020, 3:07 PM IST

Updated : May 15, 2020, 3:18 PM IST

ನವದೆಹಲಿ: ಪಡಿತರ ನೀಡಲು ಸ್ಥಳೀಯ ಆಡಳಿತ ನಿರಾಕರಿಸಿದ ಹಿನ್ನೆಲೆಯಲ್ಲಿ ನವದೆಹಲಿಯ ಪ್ರೇಮ್‌ನಗರ ನಿವಾಸಿಗಳು ಸರ್ಕಾರಿ ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ ಜನರು

ಶುಕ್ರವಾರ ಪಡಿತರ ನೀಡುವುದಾಗಿ ಹೇಳಿ ಒಂದು ದಿನ ಮುಂಚಿತವಾಗಿ ಟೋಕನ್ ನೀಡಲಾಗಿತ್ತು. ಅದರಂತೆ ಇಂದು ಮುಂಜಾನೆಯೆ ಜನರು ಪಡಿತರಕ್ಕಾಗಿ ಕಾದು ನಿಂತಿದ್ದರು. ಆದರೆ, ಶಾಲಾ ಉದ್ಯೋಗಿಯೊಬ್ಬರು ಇಂದು ಪಡಿತರ ನೀಡುವುದಿಲ್ಲ ಎಂದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ನಾವು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ. ಅಷ್ಟರಲ್ಲಿ, ಶಾಲೆಯಲ್ಲಿ ಪಡಿತರ ನೀಡಲಾಗುತ್ತಿದೆ ಎಂದು ಜನರು ಸರದಿಯಲ್ಲಿ ನಿಲ್ಲಲು ಪ್ರಾರಂಭಿಸಿದ್ದಾರೆ. ಇಂದು ಪಡಿತರ ನೀಡುವುದಿಲ್ಲ ಎಂದು ನಾವು ತಿಳಿಸಿದಾಗ ಕೋಪಗೊಂಡ ಜನರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ನವದೆಹಲಿ: ಪಡಿತರ ನೀಡಲು ಸ್ಥಳೀಯ ಆಡಳಿತ ನಿರಾಕರಿಸಿದ ಹಿನ್ನೆಲೆಯಲ್ಲಿ ನವದೆಹಲಿಯ ಪ್ರೇಮ್‌ನಗರ ನಿವಾಸಿಗಳು ಸರ್ಕಾರಿ ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಶಾಲೆ ಮೇಲೆ ಕಲ್ಲು ತೂರಾಟ ನಡೆಸಿದ ಜನರು

ಶುಕ್ರವಾರ ಪಡಿತರ ನೀಡುವುದಾಗಿ ಹೇಳಿ ಒಂದು ದಿನ ಮುಂಚಿತವಾಗಿ ಟೋಕನ್ ನೀಡಲಾಗಿತ್ತು. ಅದರಂತೆ ಇಂದು ಮುಂಜಾನೆಯೆ ಜನರು ಪಡಿತರಕ್ಕಾಗಿ ಕಾದು ನಿಂತಿದ್ದರು. ಆದರೆ, ಶಾಲಾ ಉದ್ಯೋಗಿಯೊಬ್ಬರು ಇಂದು ಪಡಿತರ ನೀಡುವುದಿಲ್ಲ ಎಂದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ನಾವು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ. ಅಷ್ಟರಲ್ಲಿ, ಶಾಲೆಯಲ್ಲಿ ಪಡಿತರ ನೀಡಲಾಗುತ್ತಿದೆ ಎಂದು ಜನರು ಸರದಿಯಲ್ಲಿ ನಿಲ್ಲಲು ಪ್ರಾರಂಭಿಸಿದ್ದಾರೆ. ಇಂದು ಪಡಿತರ ನೀಡುವುದಿಲ್ಲ ಎಂದು ನಾವು ತಿಳಿಸಿದಾಗ ಕೋಪಗೊಂಡ ಜನರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Last Updated : May 15, 2020, 3:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.