ETV Bharat / bharat

ಪಶ್ಚಿಮ ಬಂಗಾಳದಲ್ಲಿ ಮೇ 21ರ ವರೆಗೆ ನಿರ್ಬಂಧ ಮುಂದುವರಿಕೆ: ಸಿಎಂ ಮಮತಾ ಬ್ಯಾನರ್ಜಿ - ಲಾಕ್​ಡೌನ್​ ಬಗ್ಗೆ ಮಮತಾ ಬ್ಯಾನರ್ಜಿ ಹೇಳಿಕೆ

ಲಾಕ್​ಡೌನ್ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ. ಪಶ್ಚಿಮ ಬಂಗಾಳದಲ್ಲಿ ನಿರ್ಬಂಧವನ್ನು ಮುಂದುವರೆಸುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Restrictions to continue in West Bengal till May 21
ಮುಖ್ಯಂತ್ರಿ ಮಮತಾ ಬ್ಯಾನರ್ಜಿ
author img

By

Published : Apr 28, 2020, 11:02 AM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೋವಿಡ್ -19 ವಿರುದ್ಧ ಹೋರಾಡಲು ಪಶ್ಚಿಮ ಬಂಗಾಳದಲ್ಲಿ ಹೇರಲಾಗಿರುವ ನಿರ್ಬಂಧಗಳು ಮೇ 21ರ ವರೆಗೆ ಮುಂದುವರಿಯಲಿವೆ ಎಂದು ಮುಖ್ಯಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 'ನಿರ್ಬಂಧಗಳು ಮೇ 21ರ ವರೆಗೆ ಮುಂದುವರೆಯಬೇಕೆಂದು ನಾವು ಬಯಸುತ್ತೇವೆ. ಅಲ್ಲಿಯವರೆಗೂ ನಾವು ಎಚ್ಚರಿಕೆಯಿಂದ ಇರಬೇಕು' ಎಂದು ತಿಳಿಸಿದ್ದಾರೆ.

ನಾವು ಲಾಕ್​ಡೌನ್ ವಿಸ್ತರಣೆಯನ್ನು ಘೋಷಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಮಮತಾ ಬ್ಯಾನರ್ಜಿ, ಆ ನಿರ್ಧಾರವನ್ನು ಕೇಂದ್ರ ಸರ್ಕಾರವು ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ನಾನು ನಿರ್ಬಂಧಗಳ ಬಗ್ಗೆ ಮಾತ್ರ ಮಾತನಾಡುತ್ತಿದ್ದೇನೆ. ಇದು ಲಾಕ್​ಡೌನ್​ಗಿಂತ ಭಿನ್ನವಾಗಿದೆ ಎಂದು ಹೇಳಿದ್ದಾರೆ.

ರೆಡ್​ ಝೋನ್​ನಲ್ಲಿರುವ ವಲಯದಲ್ಲಿ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಕಿತ್ತಳೆ ವಲಯಗಳಲ್ಲಿ ಕೊರೊನಾ ಪರಿಣಾಮ ಕಡಿಮೆ ಇರುತ್ತದೆ. ಒಂದು ವೇಳೆ ಕಿತ್ತಳೆ ಝೋನ್​ನಲ್ಲಿ ಪ್ರಕರಣಗಳ ಏರಿಕೆ ಕಂಡುಬಂದರೆ ಅಲ್ಲೂ ಕೂಡ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು. ಹಸಿರು ವಲಯಗಳಲ್ಲಿ ಹೆಚ್ಚಿನ ನಿರ್ಬಂಧ ಇರುವುದಿಲ್ಲ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೋವಿಡ್ -19 ವಿರುದ್ಧ ಹೋರಾಡಲು ಪಶ್ಚಿಮ ಬಂಗಾಳದಲ್ಲಿ ಹೇರಲಾಗಿರುವ ನಿರ್ಬಂಧಗಳು ಮೇ 21ರ ವರೆಗೆ ಮುಂದುವರಿಯಲಿವೆ ಎಂದು ಮುಖ್ಯಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 'ನಿರ್ಬಂಧಗಳು ಮೇ 21ರ ವರೆಗೆ ಮುಂದುವರೆಯಬೇಕೆಂದು ನಾವು ಬಯಸುತ್ತೇವೆ. ಅಲ್ಲಿಯವರೆಗೂ ನಾವು ಎಚ್ಚರಿಕೆಯಿಂದ ಇರಬೇಕು' ಎಂದು ತಿಳಿಸಿದ್ದಾರೆ.

ನಾವು ಲಾಕ್​ಡೌನ್ ವಿಸ್ತರಣೆಯನ್ನು ಘೋಷಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಮಮತಾ ಬ್ಯಾನರ್ಜಿ, ಆ ನಿರ್ಧಾರವನ್ನು ಕೇಂದ್ರ ಸರ್ಕಾರವು ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ನಾನು ನಿರ್ಬಂಧಗಳ ಬಗ್ಗೆ ಮಾತ್ರ ಮಾತನಾಡುತ್ತಿದ್ದೇನೆ. ಇದು ಲಾಕ್​ಡೌನ್​ಗಿಂತ ಭಿನ್ನವಾಗಿದೆ ಎಂದು ಹೇಳಿದ್ದಾರೆ.

ರೆಡ್​ ಝೋನ್​ನಲ್ಲಿರುವ ವಲಯದಲ್ಲಿ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಕಿತ್ತಳೆ ವಲಯಗಳಲ್ಲಿ ಕೊರೊನಾ ಪರಿಣಾಮ ಕಡಿಮೆ ಇರುತ್ತದೆ. ಒಂದು ವೇಳೆ ಕಿತ್ತಳೆ ಝೋನ್​ನಲ್ಲಿ ಪ್ರಕರಣಗಳ ಏರಿಕೆ ಕಂಡುಬಂದರೆ ಅಲ್ಲೂ ಕೂಡ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು. ಹಸಿರು ವಲಯಗಳಲ್ಲಿ ಹೆಚ್ಚಿನ ನಿರ್ಬಂಧ ಇರುವುದಿಲ್ಲ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.