ETV Bharat / bharat

ದೆಹಲಿ ಹಿಂಸಾಚಾರದಲ್ಲಿ ಪೊಲೀಸ್​ ಪೇದೆ ಸಾವು... ಕೋಟಿ ರೂ. ಪರಿಹಾರ ಘೋಷಿಸಿದ ಕೇಜ್ರಿವಾಲ್​!

author img

By

Published : Feb 26, 2020, 7:22 PM IST

Updated : Feb 26, 2020, 9:45 PM IST

ದೆಹಲಿ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡ ಹೆಡ್​ಕಾನ್ಸ್​ಟೇಬಲ್​​ ರತನ್​ ಲಾಲ್​ ಕುಟುಂಬಕ್ಕೆ ದೆಹಲಿ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

kejriwal
kejriwal

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಕಳೆದ ಮೂರು ದಿನಗಳಿಂದ ದೆಹಲಿ ಹೊತ್ತಿ ಉರಿಯುತ್ತಿದೆ.

ಕೋಟಿ ರೂ. ಪರಿಹಾರ ಘೋಷಿಸಿದ ಕೇಜ್ರಿವಾಲ್

ಈಶಾನ್ಯ ದೆಹಲಿಯ ದಯಾಳಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಿಯಂತ್ರಣ ಮಾಡಲು ತೆರಳಿದ್ದ ಪೊಲೀಸ್ ಪೇದೆ ರತನ್​ ಲಾಲ್​(42) ಸಾವನ್ನಪ್ಪಿದ್ದು, ಇದೀಗ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಈ​ ಘೋಷಣೆ ಮಾಡಿದ್ದು, ಕುಟುಂಬದ ಜವಾಬ್ದಾರಿ ಹೊತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ದೆಹಲಿ ಜನತೆ ಈ ರೀತಿ ಹಿಂಸಾಚಾರ ನಡೆಯಲು ಇಷ್ಟಪಡಲ್ಲ. ಆದರೆ, ಕೆಲ ಸಮಾಜ ವಿರೋಧಿ ಹಾಗೂ ರಾಜಕೀಯ ಶಕ್ತಿಗಳು ಇದರ ಹಿಂದಿವೆ ಎಂದು ಹೇಳಿದ್ದಾರೆ.

1ಕೋಟಿ ರೂ ನೀಡುವುದಾಗಿ ನಡ್ಡಾ ಘೋಷಣೆ: ಗಲಭೆ ವೇಳೆ ಮೃತಪಟ್ಟಿರುವ ಹೆಡ್​ ಕಾನ್​ಸ್ಟೇಬಲ್​ ರತನ್​ ಲಾಲ್​ ಕುಟುಂಬದವರಿಗೆ 1 ಕೋಟಿ ರೂ ಪರಿಹಾರ ನೀಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಘೋಷಣೆ ಮಾಡಿದ್ದು, ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸದ ಆಶ್ವಾಸನೆ ನೀಡಿದ್ದಾರೆ. ಸೋಮವಾರ ನಡೆಯುತ್ತಿದ್ದ ಗಲಭೆ ವೇಳೆ ಕಲ್ಲೇಟಿನಿಂದ ರತನ್​ ಲಾಲ್​ ಸಾವನ್ನಪ್ಪಿದ್ದರು. ಈ ನಡುವೆ, ಪ್ರಚೋದನಕಾರಿ ಭಾಷಣ ಮಾಡಿ ಗಲಭೆ ಉದ್ಭವವಾಗಲು ಕುಮ್ಮಕ್ಕು ನೀಡುವವರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ದೆಹಲಿ ಹೈಕೋರ್ಟ್​​ ಆದೇಶ ನೀಡಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಕಳೆದ ಮೂರು ದಿನಗಳಿಂದ ದೆಹಲಿ ಹೊತ್ತಿ ಉರಿಯುತ್ತಿದೆ.

ಕೋಟಿ ರೂ. ಪರಿಹಾರ ಘೋಷಿಸಿದ ಕೇಜ್ರಿವಾಲ್

ಈಶಾನ್ಯ ದೆಹಲಿಯ ದಯಾಳಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಿಯಂತ್ರಣ ಮಾಡಲು ತೆರಳಿದ್ದ ಪೊಲೀಸ್ ಪೇದೆ ರತನ್​ ಲಾಲ್​(42) ಸಾವನ್ನಪ್ಪಿದ್ದು, ಇದೀಗ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಈ​ ಘೋಷಣೆ ಮಾಡಿದ್ದು, ಕುಟುಂಬದ ಜವಾಬ್ದಾರಿ ಹೊತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ದೆಹಲಿ ಜನತೆ ಈ ರೀತಿ ಹಿಂಸಾಚಾರ ನಡೆಯಲು ಇಷ್ಟಪಡಲ್ಲ. ಆದರೆ, ಕೆಲ ಸಮಾಜ ವಿರೋಧಿ ಹಾಗೂ ರಾಜಕೀಯ ಶಕ್ತಿಗಳು ಇದರ ಹಿಂದಿವೆ ಎಂದು ಹೇಳಿದ್ದಾರೆ.

1ಕೋಟಿ ರೂ ನೀಡುವುದಾಗಿ ನಡ್ಡಾ ಘೋಷಣೆ: ಗಲಭೆ ವೇಳೆ ಮೃತಪಟ್ಟಿರುವ ಹೆಡ್​ ಕಾನ್​ಸ್ಟೇಬಲ್​ ರತನ್​ ಲಾಲ್​ ಕುಟುಂಬದವರಿಗೆ 1 ಕೋಟಿ ರೂ ಪರಿಹಾರ ನೀಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಘೋಷಣೆ ಮಾಡಿದ್ದು, ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸದ ಆಶ್ವಾಸನೆ ನೀಡಿದ್ದಾರೆ. ಸೋಮವಾರ ನಡೆಯುತ್ತಿದ್ದ ಗಲಭೆ ವೇಳೆ ಕಲ್ಲೇಟಿನಿಂದ ರತನ್​ ಲಾಲ್​ ಸಾವನ್ನಪ್ಪಿದ್ದರು. ಈ ನಡುವೆ, ಪ್ರಚೋದನಕಾರಿ ಭಾಷಣ ಮಾಡಿ ಗಲಭೆ ಉದ್ಭವವಾಗಲು ಕುಮ್ಮಕ್ಕು ನೀಡುವವರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ದೆಹಲಿ ಹೈಕೋರ್ಟ್​​ ಆದೇಶ ನೀಡಿದೆ.

Last Updated : Feb 26, 2020, 9:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.