ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಆಸೆ ಸಂಪೂರ್ಣ ಕಮರಿದೆ.
ಪಾಟಿದಾರ್ ಹೋರಾಟದ ವೇಳೆ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್, ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ಹಾರ್ದಿಕ್ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿತ್ತು. ಇದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆ ಬಹುತೇಕ ಕೊನೆಯಾಗಿತ್ತು.
Supreme Court declines urgent hearing of Patidar leader Hardik Patel's plea seeking a suspension of his conviction in a 2015 case relating to rioting, so that he can contest the upcoming Lok Sabha elections. (file pic) pic.twitter.com/5AMtzD3SqC
— ANI (@ANI) April 2, 2019 " class="align-text-top noRightClick twitterSection" data="
">Supreme Court declines urgent hearing of Patidar leader Hardik Patel's plea seeking a suspension of his conviction in a 2015 case relating to rioting, so that he can contest the upcoming Lok Sabha elections. (file pic) pic.twitter.com/5AMtzD3SqC
— ANI (@ANI) April 2, 2019Supreme Court declines urgent hearing of Patidar leader Hardik Patel's plea seeking a suspension of his conviction in a 2015 case relating to rioting, so that he can contest the upcoming Lok Sabha elections. (file pic) pic.twitter.com/5AMtzD3SqC
— ANI (@ANI) April 2, 2019
ಸದ್ಯ ಈ ತೀರ್ಪನ್ನು ಪ್ರಶ್ನಿಸಿ ಹಾರ್ದಿಕ್ ಪಟೇಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ತಕ್ಷಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿದೆ.
ಹಾರ್ದಿಕ್ ಪಟೇಲ್ ತಿಂಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಗುಜರಾತ್ನ ಜಾಮ್ನಗರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುವ ತಯಾರಿಯಲ್ಲಿದ್ದರು.