ETV Bharat / bharat

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಅರ್ನಾಬ್: ಗೋಸ್ವಾಮಿ ಅರ್ಜಿ ಇಂದು ವಿಚಾರಣೆ

author img

By

Published : Nov 11, 2020, 7:57 AM IST

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಮುಂಬೈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

SC to hear Arnab Goswami's plea challenging Bombay HC order today
ಇಂದು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಅರ್ನಾಬ್ ಗೋಸ್ವಾಮಿ ಮನವಿಯ ವಿಚಾರಣೆ ನಡೆಸಲಿರುವ ಸುಪ್ರೀಂ

ನವದೆಹಲಿ: 2018 ರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಮುಂಬೈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ತನ್ನ ಬಂಧನವು 'ಕಾನೂನುಬಾಹಿರ'ವಾಗಿದ್ದು, 1950ರ ಭಾರತದ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿರುವ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗೋಸ್ವಾಮಿ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

'ಮಹಾರಾಷ್ಟ್ರ ಸರ್ಕಾರ ತನ್ನ ವಿರುದ್ಧ ದುರುದ್ದೇಶ ಹೊಂದಿದ್ದು, ತನ್ನ ಬಂಧನವು ರಾಜಕೀಯ ಪ್ರೇರಿತವಾಗಿದೆ' ಎಂದು ಅವರು ಆರೋಪಿಸಿದ್ದಾರೆ.

2019 ರಲ್ಲಿ ಅಂತ್ಯ ಹಾಡಲಾಗಿದ್ದ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧದ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪ ಪ್ರಕರಣವನ್ನು ನಾಯಕ್​ ಅವರ ಪತ್ನಿ ಅಕ್ಷತಾ ಸಲ್ಲಿಸಿದ ಅರ್ಜಿ ಮೇರೆಗೆ ಮತ್ತೆ ತೆರೆಯಲಾಗಿದೆ. ಈ ವರ್ಷದ ಸೆಪ್ಟಂಬರ್‌ನಲ್ಲಿ ನಾಯಕ್ ಅವರ ಪುತ್ರಿ ಹೊಸದಾಗಿ ನೀಡಿದ ದೂರಿನ ನಂತರ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಈ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು.

ನವದೆಹಲಿ: 2018 ರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಮುಂಬೈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ತನ್ನ ಬಂಧನವು 'ಕಾನೂನುಬಾಹಿರ'ವಾಗಿದ್ದು, 1950ರ ಭಾರತದ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿರುವ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗೋಸ್ವಾಮಿ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

'ಮಹಾರಾಷ್ಟ್ರ ಸರ್ಕಾರ ತನ್ನ ವಿರುದ್ಧ ದುರುದ್ದೇಶ ಹೊಂದಿದ್ದು, ತನ್ನ ಬಂಧನವು ರಾಜಕೀಯ ಪ್ರೇರಿತವಾಗಿದೆ' ಎಂದು ಅವರು ಆರೋಪಿಸಿದ್ದಾರೆ.

2019 ರಲ್ಲಿ ಅಂತ್ಯ ಹಾಡಲಾಗಿದ್ದ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧದ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪ ಪ್ರಕರಣವನ್ನು ನಾಯಕ್​ ಅವರ ಪತ್ನಿ ಅಕ್ಷತಾ ಸಲ್ಲಿಸಿದ ಅರ್ಜಿ ಮೇರೆಗೆ ಮತ್ತೆ ತೆರೆಯಲಾಗಿದೆ. ಈ ವರ್ಷದ ಸೆಪ್ಟಂಬರ್‌ನಲ್ಲಿ ನಾಯಕ್ ಅವರ ಪುತ್ರಿ ಹೊಸದಾಗಿ ನೀಡಿದ ದೂರಿನ ನಂತರ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಈ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.