ETV Bharat / bharat

ಮಾಸ್ಕ್​ ಧರಿಸದವರಿಂದ ₹80-90 ಕೋಟಿ ದಂಡ ಸಂಗ್ರಹಿಸಿದ ಗುಜರಾತ್ : ಸುಪ್ರೀಂ ಆತಂಕ

author img

By

Published : Dec 16, 2020, 1:36 PM IST

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ನಿರಂತರವಾಗಿ ಆಸ್ಪತ್ರೆಯ ಕರ್ತವ್ಯದಲ್ಲಿ ತೊಡಗಿರುವ ವೈದ್ಯರಿಗೆ ವಿರಾಮ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಿದೆ. ಸಾಂಕ್ರಾಮಿಕದ ಮಧ್ಯೆ ನಿರಂತರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಸಂಗತಿ..

SC notes Guj got Rs 90 cr 'mask' fines
90 ಕೋಟಿ ರೂಪಾಯಿ ದಂಡ ಸಂಗ್ರಹಿಸಿದ ಗುಜರಾತ್

ನವದೆಹಲಿ : ಮಾಸ್ಕ್​ ಧರಿಸದವರಿಂದ ದಂಡ ವಸೂಲಿ ಮಾಡುತ್ತಿರುವ ಗುಜರಾತ್ ಸರ್ಕಾರ ಸುಮಾರು 90 ಕೋಟಿ ರೂಪಾಯಿ ಸಂಗ್ರಸಿರುವ ವಿಷಯ ತಿಳಿದ ಸುಪ್ರೀಂಕೋರ್ಟ್ ಆಘಾತ ವ್ಯಕ್ತಪಡಿಸಿದೆ.

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರದ ನಿಯಮಗಳನ್ನು ಜಾರಿಗೆ ತರುವುದು ಹೇಗೆ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ ಆರ್ ಸುಭಾಷ್ ರೆಡ್ಡಿ ಮತ್ತು ಎಂ ಆರ್ ಷಾ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ದಂಡ ಮಾತ್ರವೇ ನಿಯಮಗಳ ಅನುಷ್ಠಾನಕ್ಕೆ ಇರುವ ಮಾರ್ಗ, ಅಲ್ಲದೆ 500 ರೂ. ದಂಡ ಸಾಕಾಗುವುದಿಲ್ಲ ಎಂದು ಮೆಹ್ತಾ ಉತ್ತರಿಸಿದ್ದಾರೆ. ಗುಜರಾತ್ ಸರ್ಕಾರ 80 ರಿಂದ 90 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ. ಇದು ನಿಜಕ್ಕೂ ಆಘಾತಕಾರಿ ಅಲ್ಲವೇ? ಎಂದು ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.

ಓದಿ ಬಾಲಿವುಡ್ ಡ್ರಗ್ಸ್ ಕೇಸ್​: ತಾರೆಯರ ಮೊಬೈಲ್​​ಗಳು​​ ಗುಜರಾತ್​ ಎಫ್​ಎಸ್​ಎಲ್​ಗೆ ರವಾನೆ

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ನಿರಂತರವಾಗಿ ಆಸ್ಪತ್ರೆಯ ಕರ್ತವ್ಯದಲ್ಲಿ ತೊಡಗಿರುವ ವೈದ್ಯರಿಗೆ ವಿರಾಮ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಿದೆ. ಸಾಂಕ್ರಾಮಿಕದ ಮಧ್ಯೆ ನಿರಂತರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಸಂಗತಿ.

ಇದು ಅವರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ಸಲಹೆಯನ್ನು ಸರ್ಕಾರ ಪರಿಗಣಿಸುತ್ತದೆ ಎಂದು ಮೆಹ್ತಾ ಭರವಸೆ ನೀಡಿದ್ದಾರೆ.

ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ಆಸ್ಪತ್ರೆಗಳಲ್ಲಿ ಮೃತ ದೇಹಗಳನ್ನು ಗೌರವಯುತವಾಗಿ ನಿರ್ವಹಿಸುವುದು ಕುರಿತು ಸುಮೊಟೊ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನವದೆಹಲಿ : ಮಾಸ್ಕ್​ ಧರಿಸದವರಿಂದ ದಂಡ ವಸೂಲಿ ಮಾಡುತ್ತಿರುವ ಗುಜರಾತ್ ಸರ್ಕಾರ ಸುಮಾರು 90 ಕೋಟಿ ರೂಪಾಯಿ ಸಂಗ್ರಸಿರುವ ವಿಷಯ ತಿಳಿದ ಸುಪ್ರೀಂಕೋರ್ಟ್ ಆಘಾತ ವ್ಯಕ್ತಪಡಿಸಿದೆ.

ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರದ ನಿಯಮಗಳನ್ನು ಜಾರಿಗೆ ತರುವುದು ಹೇಗೆ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಮತ್ತು ನ್ಯಾಯಮೂರ್ತಿಗಳಾದ ಆರ್ ಸುಭಾಷ್ ರೆಡ್ಡಿ ಮತ್ತು ಎಂ ಆರ್ ಷಾ ಅವರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ದಂಡ ಮಾತ್ರವೇ ನಿಯಮಗಳ ಅನುಷ್ಠಾನಕ್ಕೆ ಇರುವ ಮಾರ್ಗ, ಅಲ್ಲದೆ 500 ರೂ. ದಂಡ ಸಾಕಾಗುವುದಿಲ್ಲ ಎಂದು ಮೆಹ್ತಾ ಉತ್ತರಿಸಿದ್ದಾರೆ. ಗುಜರಾತ್ ಸರ್ಕಾರ 80 ರಿಂದ 90 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ. ಇದು ನಿಜಕ್ಕೂ ಆಘಾತಕಾರಿ ಅಲ್ಲವೇ? ಎಂದು ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.

ಓದಿ ಬಾಲಿವುಡ್ ಡ್ರಗ್ಸ್ ಕೇಸ್​: ತಾರೆಯರ ಮೊಬೈಲ್​​ಗಳು​​ ಗುಜರಾತ್​ ಎಫ್​ಎಸ್​ಎಲ್​ಗೆ ರವಾನೆ

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ನಿರಂತರವಾಗಿ ಆಸ್ಪತ್ರೆಯ ಕರ್ತವ್ಯದಲ್ಲಿ ತೊಡಗಿರುವ ವೈದ್ಯರಿಗೆ ವಿರಾಮ ನೀಡುವಂತೆ ನ್ಯಾಯಾಲಯವು ಕೇಂದ್ರವನ್ನು ಕೇಳಿದೆ. ಸಾಂಕ್ರಾಮಿಕದ ಮಧ್ಯೆ ನಿರಂತರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಸಂಗತಿ.

ಇದು ಅವರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ಸಲಹೆಯನ್ನು ಸರ್ಕಾರ ಪರಿಗಣಿಸುತ್ತದೆ ಎಂದು ಮೆಹ್ತಾ ಭರವಸೆ ನೀಡಿದ್ದಾರೆ.

ಕೋವಿಡ್-19 ರೋಗಿಗಳಿಗೆ ಸರಿಯಾದ ಚಿಕಿತ್ಸೆ ಮತ್ತು ಆಸ್ಪತ್ರೆಗಳಲ್ಲಿ ಮೃತ ದೇಹಗಳನ್ನು ಗೌರವಯುತವಾಗಿ ನಿರ್ವಹಿಸುವುದು ಕುರಿತು ಸುಮೊಟೊ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.