ETV Bharat / bharat

ಕೇಂದ್ರ ಕೃಷಿ ಮಸೂದೆ ವಿರುದ್ಧ ಕಾಯ್ದೆ ರಚಿಸಲು 'ಕೈ'​​ ಆಡಳಿತ ರಾಜ್ಯಗಳಿಗೆ ಸೋನಿಯಾ ಸೂಚನೆ

author img

By

Published : Sep 28, 2020, 9:18 PM IST

ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಕೃಷಿ ಮಸೂದೆಗಳಿಗೆ ಕಾಂಗ್ರೆಸ್​ ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ಕಾಂಗ್ರೆಸ್​ ಆಡಳಿತವಿರುವ ರಾಜ್ಯಗಳಿಗೆ ಸೋನಿಯಾ ಗಾಂಧಿ ವಿಶೇಷ ಸೂಚನೆ ನೀಡಿದ್ದಾರೆ.

Sonia Gandhi
Sonia Gandhi

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಕೃಷಿ ಮಸೂದೆಗಳಿಗೆ ಈಗಾಗಲೇ ಕೆಲವೊಂದು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೇ ವಿಚಾರವಾಗಿ ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಆಡಳಿತ ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳ ವಿರುದ್ಧವಾಗಿ ಪ್ರತ್ಯೇಕವಾದ ಕಾಯ್ದೆ ಜಾರಿಗೊಳಿಸುವಂತೆ ಅವರು ಕರೆ ನೀಡಿದ್ದು, ಅದಕ್ಕಾಗಿ ಸಂವಿಧಾನದ ಆರ್ಟಿಕಲ್​​ 254(2)ರ ಅಡಿಯಲ್ಲಿ ಕಾನೂನು ಮಾರ್ಗ ಕಂಡುಕೊಳ್ಳಲು ಸೂಚಿಸಿದ್ದಾರೆ.

  • Hon'ble Congress President has asked the Congress ruled states to explore the possibilities to pass laws in their states under Article 254(2) of the constitution which allows the state legislatures to pass a law to override a Central law which then comes for President Assent.

    — K C Venugopal (@kcvenugopalmp) September 28, 2020 " class="align-text-top noRightClick twitterSection" data=" ">

ಇದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್​ ಮುಖಂಡ ಕೆ.ಸಿ ವೇಣುಗೋಪಾಲ್​, ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿ ಮಸೂದೆಗಳ ವಿರುದ್ಧ ನಿರ್ಬಂಧ ಹೇರುವ ಕಾನೂನು ಮಾರ್ಗ ಕಂಡುಕೊಳ್ಳುವಂತೆ ಹೇಳಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ರದ್ಧತಿಯಂತಹ ರೈತ ವಿರೋಧಿ ನೀತಿಗಳು ಈ ಕೃಷಿ ಮಸೂದೆಗಳಲ್ಲಿದ್ದು, ಇದರ ವಿರುದ್ಧ ಹೋರಾಟ ಅಗತ್ಯವಾಗಿದೆ ಎಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಈಗಾಗಲೇ ಪಂಜಾಬ್​, ಹರಿಯಾಣದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕದ ಕೆಲ ಭಾಗಗಳಲ್ಲೂ ಇದಕ್ಕೆ ಟೀಕೆ ವ್ಯಕ್ತವಾಗುತ್ತಿದೆ.

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಕೃಷಿ ಮಸೂದೆಗಳಿಗೆ ಈಗಾಗಲೇ ಕೆಲವೊಂದು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೇ ವಿಚಾರವಾಗಿ ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಆಡಳಿತ ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳ ವಿರುದ್ಧವಾಗಿ ಪ್ರತ್ಯೇಕವಾದ ಕಾಯ್ದೆ ಜಾರಿಗೊಳಿಸುವಂತೆ ಅವರು ಕರೆ ನೀಡಿದ್ದು, ಅದಕ್ಕಾಗಿ ಸಂವಿಧಾನದ ಆರ್ಟಿಕಲ್​​ 254(2)ರ ಅಡಿಯಲ್ಲಿ ಕಾನೂನು ಮಾರ್ಗ ಕಂಡುಕೊಳ್ಳಲು ಸೂಚಿಸಿದ್ದಾರೆ.

  • Hon'ble Congress President has asked the Congress ruled states to explore the possibilities to pass laws in their states under Article 254(2) of the constitution which allows the state legislatures to pass a law to override a Central law which then comes for President Assent.

    — K C Venugopal (@kcvenugopalmp) September 28, 2020 " class="align-text-top noRightClick twitterSection" data=" ">

ಇದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್​ ಮುಖಂಡ ಕೆ.ಸಿ ವೇಣುಗೋಪಾಲ್​, ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿ ಮಸೂದೆಗಳ ವಿರುದ್ಧ ನಿರ್ಬಂಧ ಹೇರುವ ಕಾನೂನು ಮಾರ್ಗ ಕಂಡುಕೊಳ್ಳುವಂತೆ ಹೇಳಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ರದ್ಧತಿಯಂತಹ ರೈತ ವಿರೋಧಿ ನೀತಿಗಳು ಈ ಕೃಷಿ ಮಸೂದೆಗಳಲ್ಲಿದ್ದು, ಇದರ ವಿರುದ್ಧ ಹೋರಾಟ ಅಗತ್ಯವಾಗಿದೆ ಎಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಈಗಾಗಲೇ ಪಂಜಾಬ್​, ಹರಿಯಾಣದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಕರ್ನಾಟಕದ ಕೆಲ ಭಾಗಗಳಲ್ಲೂ ಇದಕ್ಕೆ ಟೀಕೆ ವ್ಯಕ್ತವಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.