ETV Bharat / bharat

ದೆಹಲಿಯಲ್ಲೇ ಲಿಂಗಾಯತ ಸಂಪ್ರದಾಯದಂತೆ ಸಂಜೆ 4ಕ್ಕೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಸಂಸದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರ ಬೆಳಗಾವಿಗೆ ತಂದು ಇಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂಬುದು ಕುಟುಂಬಸ್ಥರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಆದರೆ ಕೋವಿಡ್​-19 ನಿಯಮಾವಳಿ ಅನ್ವಯ ಬೆಳಗಾವಿಗೆ ತರಲು ಅವಕಾಶ ದೊರೆಯುತ್ತಿಲ್ಲ. ಹೀಗಾಗಿ ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿ ಸಂಜೆ 4 ಗಂಟೆಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

author img

By

Published : Sep 24, 2020, 7:13 AM IST

Updated : Sep 24, 2020, 10:29 AM IST

suresh-angadi-last-rites-will-be-performed-in-delhi
ಸುರೇಶ್ ಅಂಗಡಿ ಅಂತ್ಯಕ್ರಿಯೆ

ನವದೆಹಲಿ/ಬೆಳಗಾವಿ: ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಬುಧವಾರ ಕೊರೊನಾ ಸೋಂಕಿನಿಂದ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.

ಸಂಸದರ ಪಾರ್ಥಿವ ಶರೀರ ಬೆಳಗಾವಿಗೆ ತಂದು ಇಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂಬುದು ಕುಟುಂಬಸ್ಥರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಅಂಗಡಿ ಅವರ ಬೀಗರಾಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಯತ್ನ ನಡಿಸಿದ್ದಾರೆ. ರಾಜ್ಯ ಸರ್ಕಾರ ಸಹ ಪ್ರಯತ್ನ ನಡೆಸಿತ್ತು. ಆದರೆ ಕೋವಿಡ್​-19 ನಿಯಮಾವಳಿ ಅನ್ವಯ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ದೊರೆಯುತ್ತಿಲ್ಲ. ಹೀಗಾಗಿ ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿ ಸಂಜೆ 4 ಗಂಟೆಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅಂತಿಮ ದರ್ಶನ ಪಡೆದರು. ಬೆಳಗಾವಿಯ ವಿಶ್ವೇಶ್ವರ ನಗರದಲ್ಲಿ ವಾಸವಿದ್ದ ಹಿರಿಯ ಸುಪುತ್ರಿ ಸ್ಫೂರ್ತಿ ಮುಂಬೈಗೆ ತೆರಳಲಿದ್ದು, ಅಲ್ಲಿಂದ ವಿಮಾನದ ಮೂಲಕ ದೆಹಲಿ ತಲುಪಲಿದ್ದಾರೆ. ಪುತ್ರಿ ಸ್ಫೂರ್ತಿ ದೆಹಲಿಗೆ ತೆರಳಿದ ಬಳಿಕವೇ ಅಂತ್ಯಕ್ರಿಯೆಯ ವಿಧಿ ವಿಧಾನ ನಡೆಯಲಿವೆ.

ವಾರದ ಹಿಂದೆಯಷ್ಟೇ ಅಂಗಡಿ ಅವರ ಪತ್ನಿ‌ ಮಂಗಳಾ, ಕಿರಿಯ ಪುತ್ರಿ ಶ್ರದ್ಧಾ, ಸಂಬಂಧಿಯೂ ಆಗಿರುವ ಜಗದೀಶ್ ಶೆಟ್ಟರ್ ಕುಟುಂಬದ ಸದಸ್ಯರೂ ದೆಹಲಿಗೆ ತೆರಳಿ ಅಲ್ಲೇ ಇದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಕುಟುಂಬ ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ/ಬೆಳಗಾವಿ: ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಬುಧವಾರ ಕೊರೊನಾ ಸೋಂಕಿನಿಂದ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.

ಸಂಸದರ ಪಾರ್ಥಿವ ಶರೀರ ಬೆಳಗಾವಿಗೆ ತಂದು ಇಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂಬುದು ಕುಟುಂಬಸ್ಥರು ಹಾಗೂ ಅಭಿಮಾನಿಗಳ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಅಂಗಡಿ ಅವರ ಬೀಗರಾಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಪ್ರಯತ್ನ ನಡಿಸಿದ್ದಾರೆ. ರಾಜ್ಯ ಸರ್ಕಾರ ಸಹ ಪ್ರಯತ್ನ ನಡೆಸಿತ್ತು. ಆದರೆ ಕೋವಿಡ್​-19 ನಿಯಮಾವಳಿ ಅನ್ವಯ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಅವಕಾಶ ದೊರೆಯುತ್ತಿಲ್ಲ. ಹೀಗಾಗಿ ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿ ಸಂಜೆ 4 ಗಂಟೆಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅಂತಿಮ ದರ್ಶನ ಪಡೆದರು. ಬೆಳಗಾವಿಯ ವಿಶ್ವೇಶ್ವರ ನಗರದಲ್ಲಿ ವಾಸವಿದ್ದ ಹಿರಿಯ ಸುಪುತ್ರಿ ಸ್ಫೂರ್ತಿ ಮುಂಬೈಗೆ ತೆರಳಲಿದ್ದು, ಅಲ್ಲಿಂದ ವಿಮಾನದ ಮೂಲಕ ದೆಹಲಿ ತಲುಪಲಿದ್ದಾರೆ. ಪುತ್ರಿ ಸ್ಫೂರ್ತಿ ದೆಹಲಿಗೆ ತೆರಳಿದ ಬಳಿಕವೇ ಅಂತ್ಯಕ್ರಿಯೆಯ ವಿಧಿ ವಿಧಾನ ನಡೆಯಲಿವೆ.

ವಾರದ ಹಿಂದೆಯಷ್ಟೇ ಅಂಗಡಿ ಅವರ ಪತ್ನಿ‌ ಮಂಗಳಾ, ಕಿರಿಯ ಪುತ್ರಿ ಶ್ರದ್ಧಾ, ಸಂಬಂಧಿಯೂ ಆಗಿರುವ ಜಗದೀಶ್ ಶೆಟ್ಟರ್ ಕುಟುಂಬದ ಸದಸ್ಯರೂ ದೆಹಲಿಗೆ ತೆರಳಿ ಅಲ್ಲೇ ಇದ್ದಾರೆ. ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಕುಟುಂಬ ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Last Updated : Sep 24, 2020, 10:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.