ರಾಯದುರ್ಗಂ(ಆಂಧ್ರಪ್ರದೇಶ): ಅನಂತಪುರಂ ಜಿಲ್ಲೆಯ ರಾಯದುರ್ಗಂ ತಾಲೂಕಿನ ಕದರಂಪಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.
ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಹಿನ್ನೆಲೆ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೂವರು ಮೃತಪಟ್ಟಿದ್ದಾರೆ.
ಮೃತರನ್ನು ಸುರೇಶ್ (28), ಚಾಕಲಿ ಕೃಷ್ಣ (30) ಮತ್ತು ಬೆಂಗಳೂರು ನಿವಾಸಿ ಸಿದ್ಧನಗೌಡ (30) ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.