ETV Bharat / bharat

ಬಯಲು ಶೌಚಕ್ಕೆ ಕುಳಿತ ಇಬ್ಬರು ದಲಿತ ಮಕ್ಕಳ ಹತ್ಯೆ, ಶಿಕ್ಷೆ ತಪ್ಪಿಸಲು ಮಾನಸಿಕ ಅಸ್ವಸ್ಥರಂತೆ ನಾಟಕ? - ಬಯಲು ಶೌಚಕ್ಕೆ ಕುಳಿತ ಮಕ್ಕಳ ಹತ್ಯೆ

ಮಧ್ಯಪ್ರದೇಶದಲ್ಲಿ ಬಯಲು ಶೌಚಕ್ಕೆ ಕುಳಿತ ಇಬ್ಬರು ದಲಿತ ಮಕ್ಕಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಮಾಡಲಾಗಿದೆ.

ಬಯಲು ಶೌಚಕ್ಕೆ ಕುಳಿತ ಇಬ್ಬರು ದಲಿತ ಮಕ್ಕಳ ಹತ್ಯೆ
author img

By

Published : Sep 25, 2019, 5:21 PM IST

Updated : Sep 25, 2019, 7:46 PM IST

ಶಿವಪುರಿ (ಮಧ್ಯಪ್ರದೇಶ): ಇಲ್ಲಿನ ಪಂಚಾಯಿತಿ ಕಚೇರಿ ಸಮೀಪದಲ್ಲಿ ಬಯಲು ಶೌಚಕ್ಕೆ ಕುಳಿತಿದ್ದ ದಲಿತ ಸಮುದಾಯದ ಇಬ್ಬರು ಮಕ್ಕಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಬಯಲು ಶೌಚಕ್ಕೆ ಕುಳಿತ ಇಬ್ಬರು ದಲಿತ ಮಕ್ಕಳ ಹತ್ಯೆ

ಭಾವ್ಕೇಧಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಹತ್ಯೆ ಮಾಡಲಾಗಿದೆ ಎಂದು ಸಿರ್ಸೋದ್​ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಆರ್​ಎಸ್​ ಧಕಡ್​ ತಿಳಿಸಿದ್ದಾರೆ. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಪೊಲೀಸ್​ ಮೂಲಗಳು ಹೇಳಿವೆ.

ಹಕೀಮ್​ ಯಾದವ್​ ಹಾಗೂ ರಾಮೇಶ್ವರ್​ ಯಾದವ್​ ಹತ್ಯೆ ಮಾಡಿದ ಆರೋಪಿಗಳಾಗಿದ್ದು, ಕಾನೂನಿನಿಂದ ಕಣ್ತಪ್ಪಿಸಿಕೊಳ್ಳಲು ಮಾನಸಿಕ ಅಸ್ವಸ್ಥರಂತೆ ನಾಟಕವಾಡುತ್ತಿದ್ದಾರೆ ಎಂದು ಮೃತರ ಕುಟುಂಬವರ್ಗದವರು ಆರೋಪಿಸಿದ್ದಾರೆ.

ಶಿವಪುರಿ (ಮಧ್ಯಪ್ರದೇಶ): ಇಲ್ಲಿನ ಪಂಚಾಯಿತಿ ಕಚೇರಿ ಸಮೀಪದಲ್ಲಿ ಬಯಲು ಶೌಚಕ್ಕೆ ಕುಳಿತಿದ್ದ ದಲಿತ ಸಮುದಾಯದ ಇಬ್ಬರು ಮಕ್ಕಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

ಬಯಲು ಶೌಚಕ್ಕೆ ಕುಳಿತ ಇಬ್ಬರು ದಲಿತ ಮಕ್ಕಳ ಹತ್ಯೆ

ಭಾವ್ಕೇಧಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಹತ್ಯೆ ಮಾಡಲಾಗಿದೆ ಎಂದು ಸಿರ್ಸೋದ್​ ಪೊಲೀಸ್​ ಠಾಣೆಯ ಇನ್ಸ್​ಪೆಕ್ಟರ್​ ಆರ್​ಎಸ್​ ಧಕಡ್​ ತಿಳಿಸಿದ್ದಾರೆ. ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಪೊಲೀಸ್​ ಮೂಲಗಳು ಹೇಳಿವೆ.

ಹಕೀಮ್​ ಯಾದವ್​ ಹಾಗೂ ರಾಮೇಶ್ವರ್​ ಯಾದವ್​ ಹತ್ಯೆ ಮಾಡಿದ ಆರೋಪಿಗಳಾಗಿದ್ದು, ಕಾನೂನಿನಿಂದ ಕಣ್ತಪ್ಪಿಸಿಕೊಳ್ಳಲು ಮಾನಸಿಕ ಅಸ್ವಸ್ಥರಂತೆ ನಾಟಕವಾಡುತ್ತಿದ್ದಾರೆ ಎಂದು ಮೃತರ ಕುಟುಂಬವರ್ಗದವರು ಆರೋಪಿಸಿದ್ದಾರೆ.

Intro:Body:Conclusion:
Last Updated : Sep 25, 2019, 7:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.