ETV Bharat / bharat

ಗಾಯಾಳು ಪತ್ನಿ ಸೈಕಲ್​ಗಾಡಿಯಲ್ಲಿ ಮಲಗಿಸಿ ಆಸ್ಪತ್ರೆ ಸೇರಿಸಿದ ಪತಿ : ವಿಡಿಯೋ ವೈರಲ್​

author img

By

Published : Jul 30, 2020, 1:15 PM IST

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬರದ ಕಾರಣ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದಾಗಿ ವ್ಯಕ್ತಿಯೊಬ್ಬ ತನ್ನ ಗಾಯಾಳು ಪತ್ನಿಯನ್ನು ಸೈಕಲ್​ ಗಾಡಿಯಲ್ಲಿ ಮಲಗಿಸಿ ಆಸ್ಪತ್ರೆ ಸೇರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Inhumane incident
ಅಮಾನವೀಯ ಘಟನೆ

ಲಖನೌ (ಉತ್ತರ ಪ್ರದೇಶ): ಪೊಲೀಸರು ಸಹಕರಿಸದ ಹಿನ್ನೆಲೆಯಲ್ಲಿ ಗಾಯಾಳು ಪತ್ನಿಯನ್ನು ವ್ಯಕ್ತಿಯೊಬ್ಬ ಸೈಕಲ್​ ಗಾಡಿಯಲ್ಲಿ ಮಲಗಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿದೆ.

ಅಮಾನವೀಯ ಘಟನೆ

ಬಸ್ತಿ ಜಿಲ್ಲೆಯಲ್ಲಿಈ ಘಟನೆ ನಡೆದಿದ್ದು, ''ಮನೆಯಲ್ಲಿ ನಡೆದ ಗಲಾಟೆಯಲ್ಲಿ ನನ್ನ ಸಹೋದರ, ನನ್ನ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡಿದ್ದ ಆಕೆಯನ್ನು ನಾನು ಪೊಲೀಸ್ ಠಾಣೆಗೆ ಕರೆತಂದು ದೂರು ದಾಖಲಿಸಿದ್ದೆ. ಈ ವೇಳೆ, ಆಸ್ಪತ್ರೆಗೆ ದಾಖಲಿಸಲು ಸಹಕರಿಸುವಂತೆ ಪೊಲೀಸರಿಗೆ ಮನವಿ ಮಾಡಿದೆ. ಆ್ಯಂಬುಲೆನ್ಸ್​​​ ಕರೆ ಮಾಡಿದರೂ ಸರಿಯಾದ ಸ್ಪಂದನೆ ಸಿಗದ ಕಾರಣ ಆಕೆಯನ್ನು ಸೈಕಲ್ ಗಾಡಿಯಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ಸಾಗಿಸಿದ್ದೇನೆ'' ಎಂದು ಗಾಯಾಳು ಮಹಿಳೆಯ ಪತಿ ದಿನೇಶ್​ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮೂಲಗಳ ಪ್ರಕಾರ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆ್ಯಂಬುಲೆನ್ಸ್​​ಗಳ ಕೊರತೆಯಿದೆ. ಇದೇ ಕಾರಣದಿಂದ ದಿನೇಶ್​ಕುಮಾರ್ ಹಾಗೂ ಆತನ ಪತ್ನಿಗೆ ಆ್ಯಂಬುಲೆನ್ಸ್​ ಒದಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ಗಾಯಾಳು ಹಾಗೂ ಮೂವರು ಮಕ್ಕಳನ್ನು ವ್ಯಕ್ತಿ ಸೈಕಲ್​ ಗಾಡಿಯಲ್ಲಿ ಕರೆದೊಯ್ಯುತ್ತಿದ್ದಾನೆ. ವ್ಯಕ್ತಿ ಆ್ಯಂಬುಲೆನ್ಸ್​ಗೆ ಕರೆ ಮಾಡಿರುವುದರ ಬಗ್ಗೆ ಹಾಗೂ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆಯಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಒತ್ತಾಯಿಸಿದ್ದಾರೆ.

ಲಖನೌ (ಉತ್ತರ ಪ್ರದೇಶ): ಪೊಲೀಸರು ಸಹಕರಿಸದ ಹಿನ್ನೆಲೆಯಲ್ಲಿ ಗಾಯಾಳು ಪತ್ನಿಯನ್ನು ವ್ಯಕ್ತಿಯೊಬ್ಬ ಸೈಕಲ್​ ಗಾಡಿಯಲ್ಲಿ ಮಲಗಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗಿದೆ.

ಅಮಾನವೀಯ ಘಟನೆ

ಬಸ್ತಿ ಜಿಲ್ಲೆಯಲ್ಲಿಈ ಘಟನೆ ನಡೆದಿದ್ದು, ''ಮನೆಯಲ್ಲಿ ನಡೆದ ಗಲಾಟೆಯಲ್ಲಿ ನನ್ನ ಸಹೋದರ, ನನ್ನ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡಿದ್ದ ಆಕೆಯನ್ನು ನಾನು ಪೊಲೀಸ್ ಠಾಣೆಗೆ ಕರೆತಂದು ದೂರು ದಾಖಲಿಸಿದ್ದೆ. ಈ ವೇಳೆ, ಆಸ್ಪತ್ರೆಗೆ ದಾಖಲಿಸಲು ಸಹಕರಿಸುವಂತೆ ಪೊಲೀಸರಿಗೆ ಮನವಿ ಮಾಡಿದೆ. ಆ್ಯಂಬುಲೆನ್ಸ್​​​ ಕರೆ ಮಾಡಿದರೂ ಸರಿಯಾದ ಸ್ಪಂದನೆ ಸಿಗದ ಕಾರಣ ಆಕೆಯನ್ನು ಸೈಕಲ್ ಗಾಡಿಯಲ್ಲಿ ತೆಗೆದುಕೊಂಡು ಆಸ್ಪತ್ರೆಗೆ ಸಾಗಿಸಿದ್ದೇನೆ'' ಎಂದು ಗಾಯಾಳು ಮಹಿಳೆಯ ಪತಿ ದಿನೇಶ್​ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮೂಲಗಳ ಪ್ರಕಾರ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆ್ಯಂಬುಲೆನ್ಸ್​​ಗಳ ಕೊರತೆಯಿದೆ. ಇದೇ ಕಾರಣದಿಂದ ದಿನೇಶ್​ಕುಮಾರ್ ಹಾಗೂ ಆತನ ಪತ್ನಿಗೆ ಆ್ಯಂಬುಲೆನ್ಸ್​ ಒದಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ಗಾಯಾಳು ಹಾಗೂ ಮೂವರು ಮಕ್ಕಳನ್ನು ವ್ಯಕ್ತಿ ಸೈಕಲ್​ ಗಾಡಿಯಲ್ಲಿ ಕರೆದೊಯ್ಯುತ್ತಿದ್ದಾನೆ. ವ್ಯಕ್ತಿ ಆ್ಯಂಬುಲೆನ್ಸ್​ಗೆ ಕರೆ ಮಾಡಿರುವುದರ ಬಗ್ಗೆ ಹಾಗೂ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆಯಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.