ETV Bharat / bharat

ಲಾಕ್​ಡೌನ್​ ಸಡಿಲಿಕೆ; ಪ. ಬಂಗಾಳ ಸರ್ಕಾರಕ್ಕೆ ರಾಜ್ಯಪಾಲರ ಎಚ್ಚರಿಕೆ - ಕೇಂದ್ರ ಸರ್ಕಾರ

ಲಾಕ್​ಡೌನ್​ ಹಂತ ಹಂತವಾಗಿ ಸಡಿಲಿಸುತ್ತಿರುವ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ರಾಜ್ಯಪಾಲ ಜಗದೀಪ್ ಧಾಂಕರ್ ಕಿಡಿಕಾರಿದ್ದು, ನಿಯಮಗಳ ಉಲ್ಲಂಘನೆಯಾದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

WB guv asks state govt to heed MHA warnings
WB guv asks state govt to heed MHA warnings
author img

By

Published : Apr 13, 2020, 9:31 PM IST

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಾಕ್​ಡೌನ್​ ಹಂತ ಹಂತವಾಗಿ ಸಡಿಲಿಸುತ್ತಿರುವ ಸರ್ಕಾರದ ವಿರುದ್ಧ ರಾಜ್ಯಪಾಲ ಜಗದೀಪ್ ಧಾಂಕರ್ ಕಿಡಿಕಾರಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಬೆಲೆ ನೀಡದಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಂತ ಹಂತವಾಗಿ ಲಾಕ್​ಡೌನ್​ ಸಡಿಲಿಸುವ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಕೇಂದ್ರ ಗೃಹ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಸಾಮಾಜಿಕ ಅಂತರದ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿತ್ತು.

ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿರುವ ರಾಜ್ಯಪಾಲ ಜಗದೀಪ್ ಧಾಂಕರ್, "ಮಮತಾ ಬ್ಯಾನರ್ಜಿ ಸರ್ಕಾರ ಮೊದಲು ರಾಜಭವನದೊಂದಿಗಿನ ಲಾಕ್​ಡೌನ್​ ಕೊನೆಗಾಣಿಸಲಿ. ನಾವೆಲ್ಲರೂ ಕೊರೊನಾ ವೈರಸ್​ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ. ಕೇಂದ್ರ ಗೃಹ ಇಲಾಖೆಯ ನಿರ್ದೇಶನಗಳನ್ನು ಅರಿತು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವಾಗಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ವಿಫಲವಾದಲ್ಲಿ ಹಾಗೂ ಧಾರ್ಮಿಕ ಸಮಾವೇಶ ನೆಪದಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು." ಎಂದು ಟ್ವೀಟ್ ಮಾಡಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಾಕ್​ಡೌನ್​ ಹಂತ ಹಂತವಾಗಿ ಸಡಿಲಿಸುತ್ತಿರುವ ಸರ್ಕಾರದ ವಿರುದ್ಧ ರಾಜ್ಯಪಾಲ ಜಗದೀಪ್ ಧಾಂಕರ್ ಕಿಡಿಕಾರಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಬೆಲೆ ನೀಡದಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಂತ ಹಂತವಾಗಿ ಲಾಕ್​ಡೌನ್​ ಸಡಿಲಿಸುವ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಕೇಂದ್ರ ಗೃಹ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಸಾಮಾಜಿಕ ಅಂತರದ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿತ್ತು.

ರಾಜ್ಯ ಸರ್ಕಾರದ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿರುವ ರಾಜ್ಯಪಾಲ ಜಗದೀಪ್ ಧಾಂಕರ್, "ಮಮತಾ ಬ್ಯಾನರ್ಜಿ ಸರ್ಕಾರ ಮೊದಲು ರಾಜಭವನದೊಂದಿಗಿನ ಲಾಕ್​ಡೌನ್​ ಕೊನೆಗಾಣಿಸಲಿ. ನಾವೆಲ್ಲರೂ ಕೊರೊನಾ ವೈರಸ್​ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ. ಕೇಂದ್ರ ಗೃಹ ಇಲಾಖೆಯ ನಿರ್ದೇಶನಗಳನ್ನು ಅರಿತು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವಾಗಲಿ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ವಿಫಲವಾದಲ್ಲಿ ಹಾಗೂ ಧಾರ್ಮಿಕ ಸಮಾವೇಶ ನೆಪದಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು." ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.