ಹೈದರಾಬಾದ್: ರಾಮಜನ್ಮಭೂಮಿ-ಬಾಬ್ರಿ ಮಸೀದಿಯ ವಿವಾದಿತ 2.77 ಎಕರೆ ಜಾಗದ ಬಗೆಗಿನ ತೀರ್ಪು ಇಂದು ಹೊರಬಿದ್ದಿದ್ದು, ಏಳು ದಶಕಗಳ ಸಂಘರ್ಷಕ್ಕೆ ಅಧಿಕೃತ ತೆರೆ ಬಿದ್ದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ಕೂಡಾ ಮಹತ್ವದ ತೀರ್ಪು ನೀಡಿತ್ತು.
2002ರಲ್ಲಿ ಈ ವಿವಾದಿತ ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯದ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ಆರಂಭಿಸಿದೆ. ಪಾಲುದಾರ ಅರ್ಜಿದಾರರಾದ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರ ಮತ್ತು ರಾಮ ಲಲ್ಲಾ ಎಂಬ ಮೂವರು ವಾರಸುದಾರರಿಗೆ ವಿವಾದಿತ ಜಾಗದ ಸಮಾನವಾಗಿ ಹಂಚಿಕೆ ಮಾಡಿ ಕೋರ್ಟ್ ತೀರ್ಪಿತ್ತಿದೆ. ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ ಮತ್ತು ರಾಮ್ ಲಲ್ಲಾಗೆ ಸಮಾನವಾಗಿ ಈ ಭೂಮಿಯನ್ನು ಹಂಚಿಕೆ ಮಾಡುವಂತೆ ನ್ಯಾಯಮೂರ್ತಿಗಳ ಪೀಠ 2:1 ಬಹುಮತದ ಒಪ್ಪಿಗೆ ನೀಡಿತ್ತು.
ಈ ತೀರ್ಪು ನೀಡಿದ ನ್ಯಾಯಪೀಠದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಯು. ಖನ್ನಾ, ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ. ವಿ. ಶರ್ಮಾ ಇದ್ದರು.
2010ರ ಸೆಪ್ಟೆಂಬರ್ನಲ್ಲಿ ಮೂವರು ನ್ಯಾಯಮೂರ್ತಿಗಳಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಐವರು ನ್ಯಾಯೂರ್ತಿಗಳಿದ್ದ ಸಂವಿಧಾನಿಕ ಪೀಠ ಇಂದು ಐತಿಹಾಸಿಕ ತೀರ್ಪು ನೀಡಿ ವಿವಾದಕ್ಕೆ ತಾರ್ಕಿಕ ಅಂತ್ಯ ಕೊಟ್ಟಿದೆ.