ನಾಸಿಕ್: ನವೆಂಬರ್ 3ರಂದು ಹೊರಬಂದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ವಿರುದ್ಧವಾಗಿ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಹಿಲ್ ಮೇಲೆ ದಾಳಿ ನಡೆಸಿದ್ದು, ಇದನ್ನ ಕೇಂದ್ರ ಸಚಿವ ರಾಮದಾಸ್ ಅಠಾವಳೆ ತೀವ್ರವಾಗಿ ಖಂಡಿಸಿದ್ದಾರೆ.
ಟ್ರಂಪ್ ಬಗ್ಗೆ ನನಗೆ ಸಾಕಷ್ಟು ಗೌರವವಿತ್ತು. ಆದರೆ, ಯುಎಸ್ ಅಧ್ಯಕ್ಷೀಯ ಚುನಾವಣೆ ನಂತರ ಅವರು ನಡೆದುಕೊಂಡಿರುವ ವರ್ತನೆಯಿಂದ ಹಾಗೂ ಸಾರ್ವಜನಿಕ ಆದೇಶ ಅವಮಾನಿಸಿದ್ದು, ಆ ಗೌರವ ಕರಗಿ ಹೋಗಿದೆ ಎಂದಿದ್ದಾರೆ. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡೆದುಕೊಂಡ ರೀತಿ ಪ್ರಜಾಪ್ರಭುತ್ವಕ್ಕೆ ಹಾನಿಕಾರಕ ಹೀಗಾಗಿ ಅವರನ್ನ ರಿಪಬ್ಲಿಕನ್ ಎಂದು ಕರೆಯುವ ಹಕ್ಕು ಕಳೆದುಕೊಂಡಿದ್ದಾರೆ ಎಂದು ರಿಪಬ್ಲಿಕನ್ ಪಾರ್ಟಿ್ ಆಫ್ ಇಂಡಿಯಾದ ನಾಯಕ ಅಠಾವಳೆ ಹೇಳಿದ್ದಾರೆ.
ಓದಿ: ಸಂಕ್ರಾಂತಿಗೆ ಕೇಂದ್ರದ ಭರ್ಜರಿ ಗಿಫ್ಟ್: ಜ.16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ಹಂಚಿಕೆ
ಟ್ರಂಪ್ ಸೋಲನ್ನು ಒಪ್ಪಿಕೊಳ್ಳಬೇಕು. ಜತೆಗೆ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಪ್ರಯತ್ನ ಮಾಡಬೇಕು. ಆದರೆ, ಜನರ ಆದೇಶ ಅಗೌರವಿಸಿ, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಅಠಾವಳೆ ಹೇಳಿದ್ದಾರೆ. ಸಾಧ್ಯವಾದರೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುವುದಾಗಿ ತಿಳಿಸಿದ್ದಾರೆ.