ETV Bharat / bharat

ಗೋಮಾಂಸ ಸಾಗಣೆ: ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ ಯುವಕರು - undefined

ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಿಸುತ್ತಿದ್ದರು ಎನ್ನಲಾದ ಒಬ್ಬ ಮಹಿಳೆ ಹಾಗೂ ಇಬ್ಬರು  ಪುರುಷರನ್ನ ಇಲ್ಲಿನ ರಾಮಸೇನಾ ಸಂಘಟನೆಯ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ ರಾಮಭಕ್ತರು
author img

By

Published : May 25, 2019, 12:45 PM IST

Updated : May 25, 2019, 1:24 PM IST

ಭೋಪಾಲ್​: ಇಲ್ಲಿನ ಸಿಯೋನಿ ಪಟ್ಟಣದಲ್ಲಿ ಆಟೊರಿಕ್ಷಾದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಒಬ್ಬ ಮಹಿಳೆ ಹಾಗೂ ಇಬ್ಬರು ಪುರುಷರನ್ನ ರಾಮ ಭಕ್ತರೆಂದು ಹೇಳಿಕೊಂಡ ಕೆಲವರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರಿಗೆ ಥಳಿತ

ರಾಜಧಾನಿ ಭೋಪಾಲ್​ನಿಂದ 350 ಕಿ.ಮೀ. ದೂರವಿರುವ ಸಿಯೋನಿ ಪಟ್ಟಣದಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಮೂಲಗಳ ಪ್ರಕಾರ ಮಹಿಳೆ ಸೇರಿದಂತೆ ಮೂವರು ಆಟೊ ರಿಕ್ಷಾದಲ್ಲಿ ಗೋಮಾಂಸವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ ಯುವಕರು ಅವರನ್ನು ಆಟೊದೊಂದ ಕೆಳಗಿಳಿಸಿ ಮರಕ್ಕೆ ಕಟ್ಟಿ ಹಾಕಿ ಮರದ ರೆಂಬೆಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಅವರ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನು ಒಂದು ಕೋಣೆಯಲ್ಲಿ ಕೂಡಿಹಾಕಿ ಆಕೆ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಹೊಡೆಯುವಾಗ ಯುವಕರು ಜೈ ಶ್ರೀರಾಮ್​ ಎಂದು ಘೋಷಣೆ ಕೂಗುತ್ತಿರುವುದು ವಿಡಿಯೊದಲ್ಲಿ ರೆಕಾರ್ಡ್​ ಆಗಿದೆ. ಇಷ್ಟೆಲ್ಲಾ ಘಟನೆ ನಡೆದರು ಸುಮ್ಮನೆ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದ ಜನ ಪೊಲೀಸರಿಗೆ ಮಾಹಿತಿ ನೀಡದೆ ಅಮಾನವೀಯತೆ ಮೆರೆದಿದ್ದಾರೆ.

ಆರೋಪಿಗಳು ತಾವು ರಾಮಸೇನಾ ಕಾರ್ಯಕರ್ತರೆಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ವಿಡಿಯೊವನ್ನು ಅವರು ಫೇಸ್​ಬಕ್​ನಲ್ಲಿ ಪೋಸ್ಟ್​ ಮಾಡಿದ್ದು, ನಂತರ ಡಿಲಿಟ್​ ಮಾಡಿದ್ದಾರೆ.

ಭೋಪಾಲ್​: ಇಲ್ಲಿನ ಸಿಯೋನಿ ಪಟ್ಟಣದಲ್ಲಿ ಆಟೊರಿಕ್ಷಾದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಒಬ್ಬ ಮಹಿಳೆ ಹಾಗೂ ಇಬ್ಬರು ಪುರುಷರನ್ನ ರಾಮ ಭಕ್ತರೆಂದು ಹೇಳಿಕೊಂಡ ಕೆಲವರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರಿಗೆ ಥಳಿತ

ರಾಜಧಾನಿ ಭೋಪಾಲ್​ನಿಂದ 350 ಕಿ.ಮೀ. ದೂರವಿರುವ ಸಿಯೋನಿ ಪಟ್ಟಣದಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಮೂಲಗಳ ಪ್ರಕಾರ ಮಹಿಳೆ ಸೇರಿದಂತೆ ಮೂವರು ಆಟೊ ರಿಕ್ಷಾದಲ್ಲಿ ಗೋಮಾಂಸವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ ಯುವಕರು ಅವರನ್ನು ಆಟೊದೊಂದ ಕೆಳಗಿಳಿಸಿ ಮರಕ್ಕೆ ಕಟ್ಟಿ ಹಾಕಿ ಮರದ ರೆಂಬೆಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಅವರ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನು ಒಂದು ಕೋಣೆಯಲ್ಲಿ ಕೂಡಿಹಾಕಿ ಆಕೆ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೀಗೆ ಹೊಡೆಯುವಾಗ ಯುವಕರು ಜೈ ಶ್ರೀರಾಮ್​ ಎಂದು ಘೋಷಣೆ ಕೂಗುತ್ತಿರುವುದು ವಿಡಿಯೊದಲ್ಲಿ ರೆಕಾರ್ಡ್​ ಆಗಿದೆ. ಇಷ್ಟೆಲ್ಲಾ ಘಟನೆ ನಡೆದರು ಸುಮ್ಮನೆ ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದ ಜನ ಪೊಲೀಸರಿಗೆ ಮಾಹಿತಿ ನೀಡದೆ ಅಮಾನವೀಯತೆ ಮೆರೆದಿದ್ದಾರೆ.

ಆರೋಪಿಗಳು ತಾವು ರಾಮಸೇನಾ ಕಾರ್ಯಕರ್ತರೆಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ವಿಡಿಯೊವನ್ನು ಅವರು ಫೇಸ್​ಬಕ್​ನಲ್ಲಿ ಪೋಸ್ಟ್​ ಮಾಡಿದ್ದು, ನಂತರ ಡಿಲಿಟ್​ ಮಾಡಿದ್ದಾರೆ.

Intro:Body:

ಗೋಮಾಂಸ ಸಾಗಣೆ: ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ ರಾಮಭಕ್ತರು



ಭೋಪಾಲ್​: ಇಲ್ಲಿನ ಸಿಯೋನಿ ಪಟ್ಟಣದಲ್ಲಿ ಆಟೊರಿಕ್ಷಾದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರು ಪುರುಷರು ಹಾಗೂ ಒಬ್ಬ ಮಹಿಳೆಯನ್ನು ರಾಮ ಭಕ್ತರೆಂದು ಹೇಳಿಕೊಂಡ ಕೆಲವರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದ್ದಾರೆ. 



ರಾಜಧಾನಿ ಭೋಪಾಲ್​ನಿಂದ 350 ಕಿ.ಮೀ. ದೂರವಿರುವ ಸಿಯೋನಿ ಪಟ್ಟಣದಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ. 



ಮೂಲಗಳ ಪ್ರಕಾರ ಮಹಿಳೆ ಸೇರಿದಂತೆ ಮೂವರು ಆಟೊ ರಿಕ್ಷಾದಲ್ಲಿ ಗೋಮಾಂಸವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಈ ವಿಷಯವನ್ನು ಪೊಲೀಸರಿಗೆ ತಿಳಿಸದ ಯುವಕರು ಅವರನ್ನು ಆಟೊದೊಂದ ಕೆಳಗಿಳಿಸಿ ಮರಕ್ಕೆ ಕಟ್ಟಿ ಹಾಕಿ ಮರದ ರೆಂಬೆಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಅವರ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನು ಒಂದು ಕೋಣೆಯಲ್ಲಿ ಕೂಡಿಹಾಕಿ ಆಕೆ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. 



ಹೀಗೆ ಹೊಡೆಯುವಾಗ ಯುವಕರು ಜೈ ಶ್ರೀರಾಮ್​ ಎಂದು ಘೋಷಣೆ ಕೂಗುತ್ತಿರುವುದು ವಿಡಿಯೊದಲ್ಲಿ ರೆಕಾರ್ಡ್​ ಆಗಿದೆ. 

ಆರೋಪಿಗಳು ತಾವು ರಾಮಸೇನಾ ಕಾರ್ಯಕರ್ತರೆಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ವಿಡಿಯೊವನ್ನು ಅವರು ಫೇಸ್​ಬಕ್​ನಲ್ಲಿ ಪೋಸ್ಟ್​ ಮಾಡಿದ್ದು, ನಂತರ ಡಿಲಿಟ್​ ಮಾಡಿದ್ದಾರೆ.


Conclusion:
Last Updated : May 25, 2019, 1:24 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.