ETV Bharat / bharat

ಪಾದಚಾರಿಗಳಿಗೆ ವೇಗವಾಗಿ ಬಂದು ಗುದ್ದಿದ ಟ್ರಕ್​: ಎಂಟು ಜನರ ದುರ್ಮರಣ

author img

By

Published : Nov 20, 2022, 11:09 PM IST

ಪಾದಚಾರಿಗಳಿಗೆ ವೇಗವಾಗಿ ಬಂದ ಟ್ರಕ್​ ಗುದ್ದಿದ ಪರಿಣಾಮ ಎಂಟು ಜನರು ಸಾವೀಗಿಡಾದ ದಾರುಣ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.

Etv Bharat
Etv Bharat

ವೈಶಾಲಿ (ಬಿಹಾರ): ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ನಡೆದುಕೊಂಡು ಹಿಂದಿರುಗುತ್ತಿದ್ದ ಹಲವರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಇಲ್ಲಿನ ಸುಲ್ತಾನ್‌ಪುರ 28 ತೋಲಾದಲ್ಲಿ ಪ್ರಾರ್ಥನಾ ಔತಣದಲ್ಲಿ ಪಾಲ್ಗೊಂಡು ಅನೇಕರು ಕಾಲ್ನಡಿಗೆಯಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಟ್ರಕ್ ಬಂದು ಗಿದ್ದಿದೆ ಎಂದು ತಿಳಿದು ಬಂದಿದೆ. ಈ ವಿಷಯ ತಿಳಿಸುತ್ತಿದ್ದಂತೆಯೇ ಸ್ಥಳದಲ್ಲಿ ಅಪಾರ ಜನ ಜಮಾಯಿಸಿದ್ದರು.

ಅಲ್ಲದೇ, ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ ಮೃತರಲ್ಲಿ ಹೆಚ್ಚಿನವರು ಮಕ್ಕಳೇ ಆಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ.. ಸ್ಥಳಕ್ಕೆ ಹೋದ ಶಾಸಕನ ಮೇಲೆ ಹಲ್ಲೆ ಮಾಡಿ ಅಂಗಿ ಹರಿದ್ರಾ ಗ್ರಾಮಸ್ಥರು!?

ವೈಶಾಲಿ (ಬಿಹಾರ): ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ನಡೆದುಕೊಂಡು ಹಿಂದಿರುಗುತ್ತಿದ್ದ ಹಲವರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಇಲ್ಲಿನ ಸುಲ್ತಾನ್‌ಪುರ 28 ತೋಲಾದಲ್ಲಿ ಪ್ರಾರ್ಥನಾ ಔತಣದಲ್ಲಿ ಪಾಲ್ಗೊಂಡು ಅನೇಕರು ಕಾಲ್ನಡಿಗೆಯಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಟ್ರಕ್ ಬಂದು ಗಿದ್ದಿದೆ ಎಂದು ತಿಳಿದು ಬಂದಿದೆ. ಈ ವಿಷಯ ತಿಳಿಸುತ್ತಿದ್ದಂತೆಯೇ ಸ್ಥಳದಲ್ಲಿ ಅಪಾರ ಜನ ಜಮಾಯಿಸಿದ್ದರು.

ಅಲ್ಲದೇ, ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ ಮೃತರಲ್ಲಿ ಹೆಚ್ಚಿನವರು ಮಕ್ಕಳೇ ಆಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ.. ಸ್ಥಳಕ್ಕೆ ಹೋದ ಶಾಸಕನ ಮೇಲೆ ಹಲ್ಲೆ ಮಾಡಿ ಅಂಗಿ ಹರಿದ್ರಾ ಗ್ರಾಮಸ್ಥರು!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.