ETV Bharat / bharat

ಮೆಟ್ರೋ ಮ್ಯಾನ್ ಇ.ಶ್ರೀಧರನ್ ಕೇರಳ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ

author img

By

Published : Mar 4, 2021, 3:37 PM IST

ಕೇರಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಭಾರತೀಯ ಜನತಾ ಪಾರ್ಟಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

Assembly election Keral
Assembly election Keral

ತಿರುವನಂತಪುರಂ(ಕೇರಳ) : 'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಕಳೆದ ಕೆಲವು ದಿನಗಳ ಹಿಂದೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು. ಇವರನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಘೋಷಣೆ ಮಾಡಿದೆ.

E Sreedharan
ಮೆಟ್ರೋ ಮ್ಯಾನ್ ಇ.ಶ್ರೀಧರನ್

ಫೆ.26ರಂದು ಮಲಪ್ಪುರಂನಲ್ಲಿ ನಡೆದ ಬಿಜೆಪಿ ಯಾತ್ರೆಯಲ್ಲಿ ಅವರು ಅಧಿಕೃತವಾಗಿ ಕಮಲ ಪಕ್ಷ ಸೇರಿದ್ದರು. ಇದೀಗ ಅವರನ್ನು ಅಲ್ಲಿನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್​ ಪ್ರಕಟಿಸಿದ್ದಾರೆ. ಜತೆಗೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇರಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, 140 ಕ್ಷೇತ್ರಗಳಿಗೆ ಏಪ್ರಿಲ್​ 6ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಮೂಲ ಸೌಕರ್ಯ ವಿಸ್ತರಣೆ ಹಾಗೂ ರಾಜ್ಯವನ್ನು ಸಾಲದಿಂದ ಮುಕ್ತಗೊಳಿಸುವತ್ತ ಗಮನ ಹರಿಸಲಾಗುವುದು ಎಂದು ಶ್ರೀಧರನ್‌ ಹೇಳಿದರು.

88 ವರ್ಷದ ಇ.ಶ್ರೀಧರನ್​​ ಕೇರಳದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಚಿರಪರಿಚಿತರು. 1995 ರಿಂದ 2012ರವರೆಗೆ ದೆಹಲಿ ಮೆಟ್ರೋದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಕೊಂಕಣ ರೈಲ್ವೆ ಕನಸನ್ನು ಸಾಕಾರಗೊಳಿಸಿದವರು ಕೂಡಾ ಇವರೇ. ಇವರಿಗೆ 2001ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಹಾಗೂ 2008ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ತಿರುವನಂತಪುರಂ(ಕೇರಳ) : 'ಮೆಟ್ರೋ ಮ್ಯಾನ್' ಎಂದು ಹೆಸರುವಾಸಿಯಾಗಿರುವ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಕಳೆದ ಕೆಲವು ದಿನಗಳ ಹಿಂದೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು. ಇವರನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕೇರಳ ಬಿಜೆಪಿ ಘೋಷಣೆ ಮಾಡಿದೆ.

E Sreedharan
ಮೆಟ್ರೋ ಮ್ಯಾನ್ ಇ.ಶ್ರೀಧರನ್

ಫೆ.26ರಂದು ಮಲಪ್ಪುರಂನಲ್ಲಿ ನಡೆದ ಬಿಜೆಪಿ ಯಾತ್ರೆಯಲ್ಲಿ ಅವರು ಅಧಿಕೃತವಾಗಿ ಕಮಲ ಪಕ್ಷ ಸೇರಿದ್ದರು. ಇದೀಗ ಅವರನ್ನು ಅಲ್ಲಿನ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್​ ಪ್ರಕಟಿಸಿದ್ದಾರೆ. ಜತೆಗೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇರಳ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, 140 ಕ್ಷೇತ್ರಗಳಿಗೆ ಏಪ್ರಿಲ್​ 6ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಮೂಲ ಸೌಕರ್ಯ ವಿಸ್ತರಣೆ ಹಾಗೂ ರಾಜ್ಯವನ್ನು ಸಾಲದಿಂದ ಮುಕ್ತಗೊಳಿಸುವತ್ತ ಗಮನ ಹರಿಸಲಾಗುವುದು ಎಂದು ಶ್ರೀಧರನ್‌ ಹೇಳಿದರು.

88 ವರ್ಷದ ಇ.ಶ್ರೀಧರನ್​​ ಕೇರಳದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಚಿರಪರಿಚಿತರು. 1995 ರಿಂದ 2012ರವರೆಗೆ ದೆಹಲಿ ಮೆಟ್ರೋದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಕೊಂಕಣ ರೈಲ್ವೆ ಕನಸನ್ನು ಸಾಕಾರಗೊಳಿಸಿದವರು ಕೂಡಾ ಇವರೇ. ಇವರಿಗೆ 2001ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಹಾಗೂ 2008ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.