ETV Bharat / bharat

ತ್ರಿಪುರ: ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

author img

By

Published : Jan 30, 2021, 7:35 PM IST

ತ್ರಿಪುರದಲ್ಲಿ ಬಿಜೆಪಿ ಮುಖಂಡ ಕೃಪಾ ರಂಜನ್ ಚಕ್ಮಾ ಅವರನ್ನು ಅಪರಿಚಿತ ಬಂದೂಕುಧಾರಿಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಯ ಚುನಾವಣೆಗೆ ಮುನ್ನ ಈ ಘಟನೆ ನಡೆದಿರುವುದರ ಹಿಂದೆ "ರಾಜಕೀಯ ಪಿತೂರಿ" ಇದೆ ಎಂದು ಆರೋಪಿಸಿದೆ.

BJP leader shot dead in Tripura
ಬಿಜೆಪಿ ನಾಯಕ ಕೃಪಾ ರಂಜನ್ ಚಕ್ಮಾ ಹತ್ಯೆ

ಅಗರ್ತಲಾ: ತ್ರಿಪುರದ ಆಡಳಿತರೂಢ ಬಿಜೆಪಿಯ ನಾಯಕ ಕೃಪಾ ರಂಜನ್ ಚಕ್ಮಾ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಲೈ ಜಿಲ್ಲೆಯ ಮಾಣಿಕ್​ಪುರದಲ್ಲಿ ಬಿಜೆಪಿ ಮುಖಂಡ ಕೃಪಾ ರಂಜನ್ ಚಕ್ಮಾ(35) ಮನೆಯ ಮೇಲೆ ಮೂವರು ಬಂದೂಕುಧಾರಿಗಳು ಶನಿವಾರ ಮುಂಜಾನೆ ದಾಳಿ ನಡೆಸಿ ಈ ಬುಡಕಟ್ಟು ನಾಯಕನನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ರಾಜ್ಯ ರಾಜಕೀಯದಲ್ಲಿ ಈ ಘಟನೆ ಸಂಚಲನ ಮೂಡಿಸಿದ್ದು, ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಯ ಚುನಾವಣೆಗೆ ಮುನ್ನ ಈ ಘಟನೆ ನಡೆದಿರುವುದು "ರಾಜಕೀಯ ಪಿತೂರಿ" ಎಂದು ಬಿಜೆಪಿ ದೂರಿದೆ.

ಇದನ್ನೂ ಓದಿ:ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ ಉನ್ನತ ಶಿಕ್ಷಣ ಇಲಾಖೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಅಗರ್ತಲಾ: ತ್ರಿಪುರದ ಆಡಳಿತರೂಢ ಬಿಜೆಪಿಯ ನಾಯಕ ಕೃಪಾ ರಂಜನ್ ಚಕ್ಮಾ ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಲೈ ಜಿಲ್ಲೆಯ ಮಾಣಿಕ್​ಪುರದಲ್ಲಿ ಬಿಜೆಪಿ ಮುಖಂಡ ಕೃಪಾ ರಂಜನ್ ಚಕ್ಮಾ(35) ಮನೆಯ ಮೇಲೆ ಮೂವರು ಬಂದೂಕುಧಾರಿಗಳು ಶನಿವಾರ ಮುಂಜಾನೆ ದಾಳಿ ನಡೆಸಿ ಈ ಬುಡಕಟ್ಟು ನಾಯಕನನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ರಾಜ್ಯ ರಾಜಕೀಯದಲ್ಲಿ ಈ ಘಟನೆ ಸಂಚಲನ ಮೂಡಿಸಿದ್ದು, ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಯ ಚುನಾವಣೆಗೆ ಮುನ್ನ ಈ ಘಟನೆ ನಡೆದಿರುವುದು "ರಾಜಕೀಯ ಪಿತೂರಿ" ಎಂದು ಬಿಜೆಪಿ ದೂರಿದೆ.

ಇದನ್ನೂ ಓದಿ:ಸ್ನಾತಕೋತ್ತರ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ ಉನ್ನತ ಶಿಕ್ಷಣ ಇಲಾಖೆ: ಇಲ್ಲಿದೆ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.