ETV Bharat / bharat

ಉತ್ತರಾಖಂಡಕ್ಕೆ ನೂತನ ಸಿಎಂ: ಪುಷ್ಕರ್‌ ಸಿಂಗ್‌ ಧಮಿಗೆ ಸಾರಥ್ಯ - ಪುಷ್ಕರ್​ ಸಿಂಗ್ ಧಮಿ

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ಶಾಸಕ ಪುಷ್ಕರ್​ ಸಿಂಗ್ ಧಮಿಗೆ ಮಣೆ ಹಾಕಲಾಗಿದೆ. ​

BJP MLA Pushkar singh Dhami
BJP MLA Pushkar singh Dhami
author img

By

Published : Jul 3, 2021, 3:55 PM IST

Updated : Jul 3, 2021, 4:50 PM IST

ಡೆಹ್ರಾಡೂನ್​(ಉತ್ತರಾಖಂಡ): ಕಳೆದ ನಾಲ್ಕು ತಿಂಗಳ ಹಿಂದೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ತಿರಥ್​ ಸಿಂಗ್​ ರಾವತ್​ ನಿನ್ನೆ ದಿಢೀರ್​ ಆಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ಇದೀಗ ಹೊಸ ಸಾರಥಿ ಆಯ್ಕೆ ಮಾಡಲಾಗಿದೆ.

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್​ ಸಿಂಗ್​ ಧಮಿ ಆಯ್ಕೆಯಾಗಿದ್ದು, ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಹೆಸರು ಅಂತಿಮಗೊಳಿಸಲಾಗಿದೆ. ಕಳೆದ ಮಾರ್ಚ್ 10ರಂದು ಮುಖ್ಯಮಂತ್ರಿಯಾಗಿ ತಿರಥ್​ ಸಿಂಗ್​​ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ನಡೆದ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿರಿ: Uttarakhand Politics: ವರ್ಷದಲ್ಲೇ ಮೂವರು ಸಿಎಂ ಕಂಡ ಉತ್ತರಾಖಂಡ!

ಉತ್ತರಾಖಂಡ ಬಿಜೆಪಿಯಲ್ಲಿ ಕಳೆದ ಕೆಲ ತಿಂಗಳಿಂದ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿರುವ ಕಾರಣ ಕಳೆದ ನಾಲ್ಕೇ ತಿಂಗಳಲ್ಲಿ ಮೂರನೇ ಮುಖ್ಯಮಂತ್ರಿಯನ್ನ ಕಂಡಿದೆ. ಸದ್ಯ ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್​ ಸಿಂಗ್ ಧಮಿ ಆಯ್ಕೆಯಾಗಿದ್ದಾರೆ.

ಸಂಸದರಾಗಿದ್ದ ತಿರಥ್​ ಸಿಂಗ್ ರಾವತ್​, ಸೆಪ್ಟೆಂಬರ್​ 10ರೊಳಗಾಗೊ ಶಾಸಕರಾಗಿ ಆಯ್ಕೆಯಾಗಬೇಕಾಗಿತ್ತು. ಆದರೆ ಅದು ಸಾಧ್ಯವಾಗದಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಉತ್ತರಾಖಂಡ ಬಿಜೆಪಿಯ 57 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಕೇಂದ್ರದಿಂದ ವೀಕ್ಷಕರಾಗಿ ನರೇಂದ್ರ ಸಿಂಗ್ ತೋಮರ್​​ ಆಗಮಿಸಿದ್ದರು. ಈ ಸಭೆಯಲ್ಲಿ ಪುಷ್ಕರ್‌ ಸಿಂಗ್‌ ಧಮಿ ಅವರನ್ನ ಸಿಎಂ ಅಭ್ಯರ್ಥಿಯಾಗಿ ನೇಮಕ ಮಾಡಲಾಗಿದೆ. 45 ವರ್ಷದ ಧಮಿ ಖಾತಿಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್​ ಅವರ ಆಪ್ತರೆಂದು ಗುರುತಿಸಿಕೊಂಡಿದ್ದಾರೆ.

ಇಂದು ಸಂಜೆ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಉತ್ತರಾಖಂಡ್​ನ 11ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಇನ್ನು ಉತ್ತರಾಖಂಡ್​ ವಿಧಾನಸಭೆಗೆ ಒಂದೇ ವರ್ಷದಲ್ಲಿ ಚುನಾವಣೆ ನಡೆಯಲಿದೆ.

ಡೆಹ್ರಾಡೂನ್​(ಉತ್ತರಾಖಂಡ): ಕಳೆದ ನಾಲ್ಕು ತಿಂಗಳ ಹಿಂದೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ತಿರಥ್​ ಸಿಂಗ್​ ರಾವತ್​ ನಿನ್ನೆ ದಿಢೀರ್​ ಆಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ಇದೀಗ ಹೊಸ ಸಾರಥಿ ಆಯ್ಕೆ ಮಾಡಲಾಗಿದೆ.

ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್​ ಸಿಂಗ್​ ಧಮಿ ಆಯ್ಕೆಯಾಗಿದ್ದು, ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಹೆಸರು ಅಂತಿಮಗೊಳಿಸಲಾಗಿದೆ. ಕಳೆದ ಮಾರ್ಚ್ 10ರಂದು ಮುಖ್ಯಮಂತ್ರಿಯಾಗಿ ತಿರಥ್​ ಸಿಂಗ್​​ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ನಡೆದ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿರಿ: Uttarakhand Politics: ವರ್ಷದಲ್ಲೇ ಮೂವರು ಸಿಎಂ ಕಂಡ ಉತ್ತರಾಖಂಡ!

ಉತ್ತರಾಖಂಡ ಬಿಜೆಪಿಯಲ್ಲಿ ಕಳೆದ ಕೆಲ ತಿಂಗಳಿಂದ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆಯುತ್ತಿರುವ ಕಾರಣ ಕಳೆದ ನಾಲ್ಕೇ ತಿಂಗಳಲ್ಲಿ ಮೂರನೇ ಮುಖ್ಯಮಂತ್ರಿಯನ್ನ ಕಂಡಿದೆ. ಸದ್ಯ ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್​ ಸಿಂಗ್ ಧಮಿ ಆಯ್ಕೆಯಾಗಿದ್ದಾರೆ.

ಸಂಸದರಾಗಿದ್ದ ತಿರಥ್​ ಸಿಂಗ್ ರಾವತ್​, ಸೆಪ್ಟೆಂಬರ್​ 10ರೊಳಗಾಗೊ ಶಾಸಕರಾಗಿ ಆಯ್ಕೆಯಾಗಬೇಕಾಗಿತ್ತು. ಆದರೆ ಅದು ಸಾಧ್ಯವಾಗದಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಉತ್ತರಾಖಂಡ ಬಿಜೆಪಿಯ 57 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಕೇಂದ್ರದಿಂದ ವೀಕ್ಷಕರಾಗಿ ನರೇಂದ್ರ ಸಿಂಗ್ ತೋಮರ್​​ ಆಗಮಿಸಿದ್ದರು. ಈ ಸಭೆಯಲ್ಲಿ ಪುಷ್ಕರ್‌ ಸಿಂಗ್‌ ಧಮಿ ಅವರನ್ನ ಸಿಎಂ ಅಭ್ಯರ್ಥಿಯಾಗಿ ನೇಮಕ ಮಾಡಲಾಗಿದೆ. 45 ವರ್ಷದ ಧಮಿ ಖಾತಿಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್​ ಅವರ ಆಪ್ತರೆಂದು ಗುರುತಿಸಿಕೊಂಡಿದ್ದಾರೆ.

ಇಂದು ಸಂಜೆ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಉತ್ತರಾಖಂಡ್​ನ 11ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಇನ್ನು ಉತ್ತರಾಖಂಡ್​ ವಿಧಾನಸಭೆಗೆ ಒಂದೇ ವರ್ಷದಲ್ಲಿ ಚುನಾವಣೆ ನಡೆಯಲಿದೆ.

Last Updated : Jul 3, 2021, 4:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.