ETV Bharat / bharat

ಭಾಗ್ಯನಗರಿಯಲ್ಲಿ ಇಂದಿನಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

author img

By

Published : Jul 2, 2022, 6:35 AM IST

Updated : Jul 2, 2022, 7:40 AM IST

ಹೈದರಾಬಾದ್​​ನಲ್ಲಿ ಇಂದಿನಿಂದ 2 ದಿನಗಳ ಕಾಲ ಕೇಸರಿ ಪಡೆಯ ಚಿಂತನ ಮಂಥನ ನಡೆಯಲಿದೆ. ಈ ಮಹತ್ವದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಿಜೆಪಿ ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಈ ಸಭೆಯ ಪ್ರಮುಖ ಹೈಲೈಟ್ಸ್​ ಆಗಲಿದ್ದಾರೆ.

ಭಾಗ್ಯನಗರಿಯಲ್ಲಿ ಇಂದಿನಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ
BJP national executive meet from Sat; PM to attend all sessions

ಹೈದರಾಬಾದ್: ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇಂದಿನಿಂದ ಆರಂಭವಾಗಲಿದೆ. ಪಕ್ಷದ ಎನ್‌ಇಸಿ ಸಭೆಯ ಎಲ್ಲ ಅಧಿವೇಶನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮಾತನಾಡಿ, 18 ವರ್ಷಗಳ ನಂತರ ಎನ್‌ಇಸಿ ಸಭೆ ನಡೆಸಲಾಗುತ್ತಿದೆ. ಎನ್‌ಇಸಿ(ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ) ಸಭೆಗೂ ಮುನ್ನಾ ದಿನವಾದ ನಿನ್ನೆ ಸಂಜೆ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.

ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಪ್ರಧಾನ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಿ ಮೋದಿ ಅವರು ಎಲ್ಲಾ ಅಧಿವೇಶನಗಳಲ್ಲಿ ಭಾಗವಹಿಸುತ್ತಾರೆ ಮತ್ತು ಕಾರ್ಯಕರ್ತರೊಂದಿಗೆ ಇರುತ್ತಾರೆ ಚುಗ್ ಇದೇ ವೇಳೆ ಮಾಹಿತಿ ನೀಡಿದ್ದಾರೆ. ಎನ್‌ಇಸಿ ಮುಕ್ತಾಯದ ನಂತರ ಮೋದಿ ಜುಲೈ 3 ರಂದು ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಇದೇ ವೇಳೆ ತಿಳಿಸಿದೆ.

ಹೈದರಾಬಾದ್‌ನಲ್ಲಿ ಉಳಿದುಕೊಂಡಿರುವ ಪಕ್ಷದ ನಾಯಕರ ವಿವಿಧ ಗುಂಪುಗಳ 14 ಸಭೆಗಳು ನಡೆಯಲಿವೆ, ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ನಾಯಕರು ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಚುಗ್ ಹೇಳಿದ್ದಾರೆ.

ಇದನ್ನು ಓದಿ:ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್​ ಹೆಸರು 'ಭಾಗ್ಯನಗರ': ರಘುಬರ್​ ದಾಸ್​

ಹೈದರಾಬಾದ್: ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇಂದಿನಿಂದ ಆರಂಭವಾಗಲಿದೆ. ಪಕ್ಷದ ಎನ್‌ಇಸಿ ಸಭೆಯ ಎಲ್ಲ ಅಧಿವೇಶನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ತಿಳಿಸಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮಾತನಾಡಿ, 18 ವರ್ಷಗಳ ನಂತರ ಎನ್‌ಇಸಿ ಸಭೆ ನಡೆಸಲಾಗುತ್ತಿದೆ. ಎನ್‌ಇಸಿ(ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ) ಸಭೆಗೂ ಮುನ್ನಾ ದಿನವಾದ ನಿನ್ನೆ ಸಂಜೆ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.

ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಪ್ರಧಾನ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಿ ಮೋದಿ ಅವರು ಎಲ್ಲಾ ಅಧಿವೇಶನಗಳಲ್ಲಿ ಭಾಗವಹಿಸುತ್ತಾರೆ ಮತ್ತು ಕಾರ್ಯಕರ್ತರೊಂದಿಗೆ ಇರುತ್ತಾರೆ ಚುಗ್ ಇದೇ ವೇಳೆ ಮಾಹಿತಿ ನೀಡಿದ್ದಾರೆ. ಎನ್‌ಇಸಿ ಮುಕ್ತಾಯದ ನಂತರ ಮೋದಿ ಜುಲೈ 3 ರಂದು ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಇದೇ ವೇಳೆ ತಿಳಿಸಿದೆ.

ಹೈದರಾಬಾದ್‌ನಲ್ಲಿ ಉಳಿದುಕೊಂಡಿರುವ ಪಕ್ಷದ ನಾಯಕರ ವಿವಿಧ ಗುಂಪುಗಳ 14 ಸಭೆಗಳು ನಡೆಯಲಿವೆ, ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ನಾಯಕರು ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಚುಗ್ ಹೇಳಿದ್ದಾರೆ.

ಇದನ್ನು ಓದಿ:ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್​ ಹೆಸರು 'ಭಾಗ್ಯನಗರ': ರಘುಬರ್​ ದಾಸ್​

Last Updated : Jul 2, 2022, 7:40 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.