ETV Bharat / bharat

ನಂದಿಗ್ರಾಮ: ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

author img

By

Published : Apr 1, 2021, 10:10 AM IST

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿರುವ ನಂದಿಗ್ರಾಮ ಕ್ಷೇತ್ರದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದೆ.

Body of a BJP worker found hanging at Purba Bhekutia of Nandigram
ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ನಂದಿಗ್ರಾಮ (ಪಶ್ಚಿಮ ಬಂಗಾಳ): ರಾಜ್ಯದಲ್ಲಿಂದು ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಹಿಂಸಾಚಾರವೂ ಮುಂದುವರೆದಿದೆ. ಮತದಾನ ಆರಂಭಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಕೊಲೆಯಾಗಿದ್ದರೆ, ಇದೀಗ ಬಿಜೆಪಿ ಕಾರ್ಯಕರ್ತನ ಶವವಾಗಿ ಪತ್ತೆಯಾಗಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಕೂಡ ಇಂದು 2ನೇ ಹಂತದ ವೋಟಿಂಗ್​ ನಡೆಯುತ್ತಿದ್ದು, ನಂದಿಗ್ರಾಮದ ಪೂರ್ವ ಭೆಕುಟಿಯಾ ಪ್ರದೇಶದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: 2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ: 7 ಮಂದಿ ಬಂಧನ

ಸ್ಥಳೀಯ ಟಿಎಂಸಿ ಕಾರ್ಯಕರ್ತರಿಂದ ಬೆದರಿಕೆ ಇತ್ತು ಎಂದು ಮೃತ ಬಿಜೆಪಿ ಕಾರ್ಯಕರ್ತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು ಮತ್ತೊಂದೆಡೆ ಟಿಎಂಸಿ ಕಾರ್ಯಕರ್ತನ ಹತ್ಯೆ ನಡೆಸಿದೆ. ಈ ಸಂಬಂಧ ಬಂಗಾಳ ಪೊಲೀಸರು 7 ಮಂದಿ ಬಂಧನ ಮಾಡಿದ್ದಾರೆ. ಚುನಾವಣೆಗೂ ಮುಂಚಿನಿಂದಲೂ ರಾಜಕೀಯ ಹತ್ಯೆಗಳು ವರದಿಯಾಗುತ್ತಲೇ ಇವೆ. ಬಿಜೆಪಿ- ಟಿಎಂಸಿ ನಡುವೆ ಈ ಬಾರಿಯ ಚುನಾವಣೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ನಂದಿಗ್ರಾಮ (ಪಶ್ಚಿಮ ಬಂಗಾಳ): ರಾಜ್ಯದಲ್ಲಿಂದು ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಹಿಂಸಾಚಾರವೂ ಮುಂದುವರೆದಿದೆ. ಮತದಾನ ಆರಂಭಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಕೊಲೆಯಾಗಿದ್ದರೆ, ಇದೀಗ ಬಿಜೆಪಿ ಕಾರ್ಯಕರ್ತನ ಶವವಾಗಿ ಪತ್ತೆಯಾಗಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಕೂಡ ಇಂದು 2ನೇ ಹಂತದ ವೋಟಿಂಗ್​ ನಡೆಯುತ್ತಿದ್ದು, ನಂದಿಗ್ರಾಮದ ಪೂರ್ವ ಭೆಕುಟಿಯಾ ಪ್ರದೇಶದ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: 2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ: 7 ಮಂದಿ ಬಂಧನ

ಸ್ಥಳೀಯ ಟಿಎಂಸಿ ಕಾರ್ಯಕರ್ತರಿಂದ ಬೆದರಿಕೆ ಇತ್ತು ಎಂದು ಮೃತ ಬಿಜೆಪಿ ಕಾರ್ಯಕರ್ತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು ಮತ್ತೊಂದೆಡೆ ಟಿಎಂಸಿ ಕಾರ್ಯಕರ್ತನ ಹತ್ಯೆ ನಡೆಸಿದೆ. ಈ ಸಂಬಂಧ ಬಂಗಾಳ ಪೊಲೀಸರು 7 ಮಂದಿ ಬಂಧನ ಮಾಡಿದ್ದಾರೆ. ಚುನಾವಣೆಗೂ ಮುಂಚಿನಿಂದಲೂ ರಾಜಕೀಯ ಹತ್ಯೆಗಳು ವರದಿಯಾಗುತ್ತಲೇ ಇವೆ. ಬಿಜೆಪಿ- ಟಿಎಂಸಿ ನಡುವೆ ಈ ಬಾರಿಯ ಚುನಾವಣೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.