ETV Bharat / bharat

ತಮಿಳುನಾಡು ಕದನದ ಮೇಲೆ ಕೊರೊನಾ ಕೆಂಗಣ್ಣು

author img

By

Published : Mar 24, 2021, 4:54 PM IST

Updated : Mar 24, 2021, 5:03 PM IST

ಕೆಲವು ದಿನಗಳ ಹಿಂದೆ ವೇಲಾಚೇರಿ ಅಸೆಂಬ್ಲಿ ಕ್ಷೇತ್ರದ ಮಕ್ಕಳ್ ನೀಧಿ ಮೈಯಂ ಅಭ್ಯರ್ಥಿ ಸಂತೋಷ್ ಬಾಬು ಅವರು ಕೊರೊನಾ ಸೋಂಕಿಗೊಳಗಾಗಿದ್ದನ್ನು ದೃಢಪಡಿಸಲಾಯಿತು. ಪರಿಣಾಮವಾಗಿ ಅಭ್ಯರ್ಥಿಗಳು ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ..

Candidates getting infected with Covid-19 perils TN election campaigns
ತಮಿಳುನಾಡು ಕದನದ ಮೇಲೆ ಕೊರೊನಾ ಕೆಂಗಣ್ಣು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೇವಲ ಎರಡು ವಾರಗಳು ಬಾಕಿ ಇದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ರಾಜಕೀಯ ಪಕ್ಷಗಳನ್ನು ಆತಂಕಕ್ಕೀಡು ಮಾಡಿದೆ. ಪಕ್ಷದ ಪ್ರಮುಖರೀಗ ಕ್ವಾರಂಟೈನ್​ಗೊಳಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದೆ. ಪಕ್ಷಗಳ ಪ್ರಚಾರ ಎಲ್ಲೆಡೆ ಚುರುಕುಗೊಂಡಿದೆ. ಆದ್ರೆ, ಕೊರೊನಾ ಸೋಂಕು ಹರಡುತ್ತಿದ್ದು, ಅನೇಕರು ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ. ಇದು ಪ್ರಚಾರ ಕಾರ್ಯಕ್ಕೆ ಅಡ್ಡಿಯನ್ನುಂಟು ಮಾಡಿದೆ.

ಕೆಲ ದಿನಗಳ ಹಿಂದೆ ವೆಲಾಚೆರಿ ಕ್ಷೇತ್ರದ ಮಕ್ಕಳ್ ನೀಧಿ ಮೈಯಂ ಪಕ್ಷದ ಅಭ್ಯರ್ಥಿ ಸಂತೋಷ್ ಬಾಬು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಪರಿಣಾಮ ಕ್ವಾರಂಟೈನ್​ಗೊಳಗಾಗಿ ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ನಟ-ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷದ ಬೆಂಬಲಿಗರು ತಮ್ಮ ಅಭಿಯಾನವನ್ನು ಸ್ಥಗಿತಗೊಳಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತು.

ಇದನ್ನೂ ಓದಿ: ತಮಿಳುನಾಡು ವಿಧಾನಸಭೆ ಫೈಟ್​​: 80 ಕೋಟಿ ನಗದು ಸೇರಿ 217.35 ಕೋಟಿ ರೂ. ಮೌಲ್ಯದ ವಸ್ತುಗಳು ವಶ!

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕುರಿತು ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ್ದು, ಕೋವಿಡ್​ ನಿಯಮ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳು ಸೇರಿದಂತೆ ಎಲ್ಲರೂ ಇದನ್ನೂ ಪಾಲಿಸಲೇಬೇಕೆಂದು ತಿಳಿಸಿದರು.

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೇವಲ ಎರಡು ವಾರಗಳು ಬಾಕಿ ಇದೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ರಾಜಕೀಯ ಪಕ್ಷಗಳನ್ನು ಆತಂಕಕ್ಕೀಡು ಮಾಡಿದೆ. ಪಕ್ಷದ ಪ್ರಮುಖರೀಗ ಕ್ವಾರಂಟೈನ್​ಗೊಳಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದೆ. ಪಕ್ಷಗಳ ಪ್ರಚಾರ ಎಲ್ಲೆಡೆ ಚುರುಕುಗೊಂಡಿದೆ. ಆದ್ರೆ, ಕೊರೊನಾ ಸೋಂಕು ಹರಡುತ್ತಿದ್ದು, ಅನೇಕರು ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ. ಇದು ಪ್ರಚಾರ ಕಾರ್ಯಕ್ಕೆ ಅಡ್ಡಿಯನ್ನುಂಟು ಮಾಡಿದೆ.

ಕೆಲ ದಿನಗಳ ಹಿಂದೆ ವೆಲಾಚೆರಿ ಕ್ಷೇತ್ರದ ಮಕ್ಕಳ್ ನೀಧಿ ಮೈಯಂ ಪಕ್ಷದ ಅಭ್ಯರ್ಥಿ ಸಂತೋಷ್ ಬಾಬು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಪರಿಣಾಮ ಕ್ವಾರಂಟೈನ್​ಗೊಳಗಾಗಿ ಚುನಾವಣೆಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ನಟ-ರಾಜಕಾರಣಿ ಕಮಲ್ ಹಾಸನ್ ಅವರ ಪಕ್ಷದ ಬೆಂಬಲಿಗರು ತಮ್ಮ ಅಭಿಯಾನವನ್ನು ಸ್ಥಗಿತಗೊಳಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತು.

ಇದನ್ನೂ ಓದಿ: ತಮಿಳುನಾಡು ವಿಧಾನಸಭೆ ಫೈಟ್​​: 80 ಕೋಟಿ ನಗದು ಸೇರಿ 217.35 ಕೋಟಿ ರೂ. ಮೌಲ್ಯದ ವಸ್ತುಗಳು ವಶ!

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಕುರಿತು ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ್ದು, ಕೋವಿಡ್​ ನಿಯಮ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳು ಸೇರಿದಂತೆ ಎಲ್ಲರೂ ಇದನ್ನೂ ಪಾಲಿಸಲೇಬೇಕೆಂದು ತಿಳಿಸಿದರು.

Last Updated : Mar 24, 2021, 5:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.