ETV Bharat / bharat

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ

author img

By ETV Bharat Karnataka Team

Published : Oct 11, 2023, 12:28 PM IST

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸುತ್ತಿವೆ. ಈ ಬೆನ್ನಲ್ಲೇ ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ ನೀಡಲಾಗಿದೆ.

protest
ಬಂದ್

ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್​ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ಕಾವೇರಿ ಡೆಲ್ಟಾ ಸಂರಕ್ಷಣಾ ಆಂದೋಲನ ಮತ್ತು ರೈತ ಸಂಘಗಳು ಜಂಟಿಯಾಗಿ ಇಂದು ಡೆಲ್ಟಾ ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮಿಳುನಾಡಿನ ತಿರುಚ್ಚಿ0, ತಂಜೂರು, ನಾಗಪಟ್ಟಣಂ ಮತ್ತು ತಿರುವಾರೂರ್ ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯಿಂದ ಪ್ರತಿಭಟನೆ ಪ್ರಾರಂಭಿಸಲಾಗಿದ್ದು, ನಾಳೆಯ ವರೆಗೂ ಮುಂದುವರೆಯಲಿದೆ.

ಇನ್ನೊಂದೆಡೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕರ್ನಾಟಕವು ನೀರು ಬಿಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂಬ ನಿರ್ಣಯವನ್ನು ತಮಿಳುನಾಡಿನ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರ ನಡುವೆ ಬಿಳಿಗುಂಡ್ಲುವಿಗೆ 3,000 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ಆದರೆ, ರಾಜ್ಯದ ಕೆಲವು ಭಾಗಗಳಲ್ಲಿ ಭೀಕರ ಬರಗಾಲ ಇರುವುದನ್ನು ಉಲ್ಲೇಖಿಸಿ, ತಮಿಳುನಾಡಿಗೆ ನೀರು ಬಿಡುವ ಕಾವೇರಿ ಮಂಡಳಿಯ ಆದೇಶಗಳನ್ನು ಅನುಸರಿಸಲು ಕರ್ನಾಟಕ ಸರ್ಕಾರ ನಿರಾಕರಿಸಿದೆ.

ಇದನ್ನೂ ಓದಿ : ಎಎಪಿಯಿಂದ ' ಕಾವೇರಿ ನಮ್ಮದು ' ಧರಣಿ ಸತ್ಯಾಗ್ರಹ : ತಕ್ಷಣವೇ ಅಧಿವೇಶನ ಕರೆದು ಕಾವೇರಿ ವಿಚಾರ ಚರ್ಚಿಸುವಂತೆ ಮುಖ್ಯಮಂತ್ರಿ ಚಂದ್ರು ಒತ್ತಾಯ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಕ್ಟೋಬರ್ 5 ರಂದು ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಸಂಚಿತ ಒಳಹರಿವು ಕಡಿಮೆಯಾಗುತ್ತಿದೆ ಎಂದು ಹೇಳಿದ್ದರು. ಜೊತೆಗೆ, ಸಿಡಬ್ಲ್ಯೂಆರ್‌ಸಿ ಶಿಫಾರಸಿನ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ನಮ್ಮ ರಾಜ್ಯದ ರೈತರ ಹಾಲಿ ಬೆಳೆಗಳನ್ನು ರಕ್ಷಿಸಿದ್ದೇವೆ : ಡಿಸಿಎಂ ಡಿ. ಕೆ. ಶಿವಕುಮಾರ್

ಇನ್ನು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಪುದುಚೇರಿಗಳ ನಡುವಿನ ವೈಯಕ್ತಿಕ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಕೇಂದ್ರವು ಜೂನ್ 2, 1990 ರಂದು ಕಾವೇರಿ ಜಲ ವಿವಾದಗಳ ನ್ಯಾಯಾಧಿಕರಣವನ್ನು (CWDT) ರಚಿಸಿತ್ತು. ಆದರೂ ನೀರಿನ ವಿಚಾರವಾಗಿ ಎರಡೂ ರಾಜ್ಯಗಳಲ್ಲಿ ಮಾತಿನ ಚಕಮಕಿ ಹಾಗೂ ರಾಜಕೀಯ ಗುದ್ದಾಟ ನಡೆಯುತ್ತಿದ್ದು, ರೈತರು ಪ್ರತಿಭಟನೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಕಾವೇರಿ ಜಲ ವಿವಾದ : ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ - ಸಂಸದೆ ಸುಮಲತಾ

ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್​ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಿ ಕಾವೇರಿ ಡೆಲ್ಟಾ ಸಂರಕ್ಷಣಾ ಆಂದೋಲನ ಮತ್ತು ರೈತ ಸಂಘಗಳು ಜಂಟಿಯಾಗಿ ಇಂದು ಡೆಲ್ಟಾ ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ. ತಮಿಳುನಾಡಿನ ತಿರುಚ್ಚಿ0, ತಂಜೂರು, ನಾಗಪಟ್ಟಣಂ ಮತ್ತು ತಿರುವಾರೂರ್ ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯಿಂದ ಪ್ರತಿಭಟನೆ ಪ್ರಾರಂಭಿಸಲಾಗಿದ್ದು, ನಾಳೆಯ ವರೆಗೂ ಮುಂದುವರೆಯಲಿದೆ.

ಇನ್ನೊಂದೆಡೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕರ್ನಾಟಕವು ನೀರು ಬಿಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂಬ ನಿರ್ಣಯವನ್ನು ತಮಿಳುನಾಡಿನ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರ ನಡುವೆ ಬಿಳಿಗುಂಡ್ಲುವಿಗೆ 3,000 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ. ಆದರೆ, ರಾಜ್ಯದ ಕೆಲವು ಭಾಗಗಳಲ್ಲಿ ಭೀಕರ ಬರಗಾಲ ಇರುವುದನ್ನು ಉಲ್ಲೇಖಿಸಿ, ತಮಿಳುನಾಡಿಗೆ ನೀರು ಬಿಡುವ ಕಾವೇರಿ ಮಂಡಳಿಯ ಆದೇಶಗಳನ್ನು ಅನುಸರಿಸಲು ಕರ್ನಾಟಕ ಸರ್ಕಾರ ನಿರಾಕರಿಸಿದೆ.

ಇದನ್ನೂ ಓದಿ : ಎಎಪಿಯಿಂದ ' ಕಾವೇರಿ ನಮ್ಮದು ' ಧರಣಿ ಸತ್ಯಾಗ್ರಹ : ತಕ್ಷಣವೇ ಅಧಿವೇಶನ ಕರೆದು ಕಾವೇರಿ ವಿಚಾರ ಚರ್ಚಿಸುವಂತೆ ಮುಖ್ಯಮಂತ್ರಿ ಚಂದ್ರು ಒತ್ತಾಯ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಕ್ಟೋಬರ್ 5 ರಂದು ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಗೆ ಸಂಚಿತ ಒಳಹರಿವು ಕಡಿಮೆಯಾಗುತ್ತಿದೆ ಎಂದು ಹೇಳಿದ್ದರು. ಜೊತೆಗೆ, ಸಿಡಬ್ಲ್ಯೂಆರ್‌ಸಿ ಶಿಫಾರಸಿನ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ : ನಮ್ಮ ರಾಜ್ಯದ ರೈತರ ಹಾಲಿ ಬೆಳೆಗಳನ್ನು ರಕ್ಷಿಸಿದ್ದೇವೆ : ಡಿಸಿಎಂ ಡಿ. ಕೆ. ಶಿವಕುಮಾರ್

ಇನ್ನು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಪುದುಚೇರಿಗಳ ನಡುವಿನ ವೈಯಕ್ತಿಕ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ಕೇಂದ್ರವು ಜೂನ್ 2, 1990 ರಂದು ಕಾವೇರಿ ಜಲ ವಿವಾದಗಳ ನ್ಯಾಯಾಧಿಕರಣವನ್ನು (CWDT) ರಚಿಸಿತ್ತು. ಆದರೂ ನೀರಿನ ವಿಚಾರವಾಗಿ ಎರಡೂ ರಾಜ್ಯಗಳಲ್ಲಿ ಮಾತಿನ ಚಕಮಕಿ ಹಾಗೂ ರಾಜಕೀಯ ಗುದ್ದಾಟ ನಡೆಯುತ್ತಿದ್ದು, ರೈತರು ಪ್ರತಿಭಟನೆ ಆರಂಭಿಸಿದ್ದಾರೆ.

ಇದನ್ನೂ ಓದಿ : ಕಾವೇರಿ ಜಲ ವಿವಾದ : ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ - ಸಂಸದೆ ಸುಮಲತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.