ETV Bharat / bharat

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಮತ್ತೊಂದು ಪ್ರಕರಣ ದಾಖಲಿಸಿದ ಸಿಬಿಐ

author img

By

Published : Nov 10, 2021, 10:44 AM IST

ಮೇ.2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿತ್ತು. ಹಿಂಸಾಚಾರದಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

CBI files one more case in connection with post-poll violence in West Bengal
ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತೊಂದು ಪ್ರಕರಣವನ್ನು ದಾಖಲಿಸಿದೆ. ಸಿಬಿಐ ಪ್ರಕಾರ, ಹೊಸ ಪ್ರಕರಣವು ಈ ವರ್ಷದ ಮೇನಲ್ಲಿ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ನಡೆದ ಬಿಸ್ವಜಿತ್ ಮಹೇಶ್ ಹತ್ಯೆಗೆ ಸಂಬಂಧಿಸಿದೆ ಎಂದು ತಿಳಿಸಿದೆ.

ಈ ವರ್ಷ ಆಗಸ್ಟ್ 19ರಂದು ನೀಡಲಾದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಾಲಿಸಿ ಸಿಬಿಐ ಪ್ರಕರಣವನ್ನು ದಾಖಲಿಸಿದೆ. ಸಂಸ್ಥೆಯು ಇದುವರೆಗೆ 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತನಿಖೆ ಮುಂದುವರಿದಿದೆ. ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿದ್ದವು. ನಂತರ ಗೃಹ ಸಚಿವಾಲಯದಿಂದ ನಿಯೋಜಿಸಲಾದ ನಾಲ್ವರು ಸದಸ್ಯರ ತಂಡವು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತ್ತು.

ಈ ವರ್ಷದ ಆಗಸ್ಟ್‌ನಲ್ಲಿ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರವನ್ನ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿತ್ತು. ಇದರ ಜೊತೆ ಕೆಲ ಸಣ್ಣ ಮಟ್ಟದ ಅಪರಾಧ ತನಿಖೆಗಾಗಿ ಎಸ್​ಐಟಿ ತಂಡ ರಚನೆಗೂ ಸೂಚನೆ ನೀಡಿತ್ತು. ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 7 ಮಂದಿ ಸಮಿತಿಯ ಶಿಫಾರಸಿನಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಹಣ ವಸೂಲಿ ಆರೋಪ: ಸತತ 11 ಗಂಟೆ ಪ್ರಭಾಕರ್ ಸೈಲ್​ ವಿಚಾರಣೆ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತೊಂದು ಪ್ರಕರಣವನ್ನು ದಾಖಲಿಸಿದೆ. ಸಿಬಿಐ ಪ್ರಕಾರ, ಹೊಸ ಪ್ರಕರಣವು ಈ ವರ್ಷದ ಮೇನಲ್ಲಿ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ನಡೆದ ಬಿಸ್ವಜಿತ್ ಮಹೇಶ್ ಹತ್ಯೆಗೆ ಸಂಬಂಧಿಸಿದೆ ಎಂದು ತಿಳಿಸಿದೆ.

ಈ ವರ್ಷ ಆಗಸ್ಟ್ 19ರಂದು ನೀಡಲಾದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಾಲಿಸಿ ಸಿಬಿಐ ಪ್ರಕರಣವನ್ನು ದಾಖಲಿಸಿದೆ. ಸಂಸ್ಥೆಯು ಇದುವರೆಗೆ 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತನಿಖೆ ಮುಂದುವರಿದಿದೆ. ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿದ್ದವು. ನಂತರ ಗೃಹ ಸಚಿವಾಲಯದಿಂದ ನಿಯೋಜಿಸಲಾದ ನಾಲ್ವರು ಸದಸ್ಯರ ತಂಡವು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತ್ತು.

ಈ ವರ್ಷದ ಆಗಸ್ಟ್‌ನಲ್ಲಿ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರವನ್ನ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿತ್ತು. ಇದರ ಜೊತೆ ಕೆಲ ಸಣ್ಣ ಮಟ್ಟದ ಅಪರಾಧ ತನಿಖೆಗಾಗಿ ಎಸ್​ಐಟಿ ತಂಡ ರಚನೆಗೂ ಸೂಚನೆ ನೀಡಿತ್ತು. ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 7 ಮಂದಿ ಸಮಿತಿಯ ಶಿಫಾರಸಿನಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಹಣ ವಸೂಲಿ ಆರೋಪ: ಸತತ 11 ಗಂಟೆ ಪ್ರಭಾಕರ್ ಸೈಲ್​ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.