ETV Bharat / bharat

ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ವಿಸ್ತಾರಗೊಳ್ಳಬೇಕು: ಬಾಂಬೆ ಹೈಕೋರ್ಟ್​

author img

By

Published : Jul 7, 2021, 8:12 PM IST

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ಮತ್ತಷ್ಟು ವಿಸ್ತಾರಗೊಳ್ಳಬೇಕೆಂದು ಬಾಂಬೆ ಹೈಕೋರ್ಟ್ ಹೇಳಿದೆ.

CBI should widen probe into FIR against Anil Deshmukh: HC
ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ವಿಸ್ತಾರಗೊಳ್ಳಬೇಕು: ಬಾಂಬೆ ಹೈಕೋರ್ಟ್​

ಮುಂಬೈ(ಮಹಾರಾಷ್ಟ್ರ): ಸಿಬಿಐ ಮಹಾರಾಷ್ಟ್ರದ ಮಾಜಿ ಗೃಹಮಂತ್ರಿ ವಿರುದ್ಧ ಸಲ್ಲಿಸಿರುವ ಎಫ್​ಐಆರ್ ಕುರಿತಂತೆ ತನ್ನ ತನಿಖೆಯನ್ನು ಇನ್ನಷ್ಟು ವಿಸ್ತಾರಗೊಳಿಸಬೇಕೆಂದು ಬಾಂಬೆ ಹೈಕೋರ್ಟ್​ ಸೂಚನೆ ನೀಡಿದೆ.

ಎಸ್​.ಎಸ್​.ಶಿಂಧೆ ಮತ್ತು ಎನ್​.ಜೆ. ಜಮಾದಾರ್ ಅವರಿದ್ದ ಪೀಠ ಈ ರೀತಿಯಾಗಿ ಅಭಿಪ್ರಾಯಪಟ್ಟಿದ್ದು, ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ದೇಶಮುಖ್ ಮಾತ್ರವಲ್ಲದೇ ಪ್ರತಿಯೊಬ್ಬರ ಪಾತ್ರವನ್ನೂ ಸಿಬಿಐ ಗಮನಿಸಬೇಕೆಂದು ಹೇಳಿದೆ.

ಭ್ರಷ್ಟಾಚಾರ ಮತ್ತು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಬಿಐ ದಾಖಲಿಸಿದ್ದ ಎಫ್​ಐಆರ್ ರದ್ದುಗೊಳಿಸುವಂತೆ ಕೋರಿ ಅನಿಲ್ ದೇಶಮುಖ್ ಹೈಕೋರ್ಟ್​ಗೆ ಅರ್ಜಿಯೊಂದನ್ನು ಸಲ್ಲಿಸಿದ್ದರು. ಏಪ್ರಿಲ್ 24ರಂದು ಸಿಬಿಐ ಎಫ್​ಐಆರ್ ದಾಖಲಿಸಿತ್ತು.

ಇದನ್ನೂ ಓದಿ: 35ನೇ ವಯಸ್ಸಿಗೆ ಕೇಂದ್ರ ಸಚಿವ ಸ್ಥಾನ! ಶಾಲಾ ಶಿಕ್ಷಕನಾಗಿ ಸಂಸದನಾದ ಯುವಕನಿಗೆ ಮೋದಿ ಮಣೆ

ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಸಿಬಿಐ ಆದಷ್ಟು ಬೇಗ ಅಪರಾಧಿಗಳನ್ನು ಕಂಡುಹಿಡಿಯುತ್ತದೆ ಹಾಗೂ ತನ್ನ ತನಿಖಾ ವಿಸ್ತರಿಸುತ್ತದೆ ಎಂಬ ಭರವಸೆಯಿದೆ. ಈ ವಿಚಾರದಲ್ಲಿ ತನಿಖಾಧಿಕಾರಿಗಳು ತಾವು ಮುಗ್ಧರು ಎಂದು ಹೇಳುವಂತಿಲ್ಲ ಎಂದಿದ್ದಾರೆ.

ಮುಂಬೈ(ಮಹಾರಾಷ್ಟ್ರ): ಸಿಬಿಐ ಮಹಾರಾಷ್ಟ್ರದ ಮಾಜಿ ಗೃಹಮಂತ್ರಿ ವಿರುದ್ಧ ಸಲ್ಲಿಸಿರುವ ಎಫ್​ಐಆರ್ ಕುರಿತಂತೆ ತನ್ನ ತನಿಖೆಯನ್ನು ಇನ್ನಷ್ಟು ವಿಸ್ತಾರಗೊಳಿಸಬೇಕೆಂದು ಬಾಂಬೆ ಹೈಕೋರ್ಟ್​ ಸೂಚನೆ ನೀಡಿದೆ.

ಎಸ್​.ಎಸ್​.ಶಿಂಧೆ ಮತ್ತು ಎನ್​.ಜೆ. ಜಮಾದಾರ್ ಅವರಿದ್ದ ಪೀಠ ಈ ರೀತಿಯಾಗಿ ಅಭಿಪ್ರಾಯಪಟ್ಟಿದ್ದು, ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ದೇಶಮುಖ್ ಮಾತ್ರವಲ್ಲದೇ ಪ್ರತಿಯೊಬ್ಬರ ಪಾತ್ರವನ್ನೂ ಸಿಬಿಐ ಗಮನಿಸಬೇಕೆಂದು ಹೇಳಿದೆ.

ಭ್ರಷ್ಟಾಚಾರ ಮತ್ತು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಿಬಿಐ ದಾಖಲಿಸಿದ್ದ ಎಫ್​ಐಆರ್ ರದ್ದುಗೊಳಿಸುವಂತೆ ಕೋರಿ ಅನಿಲ್ ದೇಶಮುಖ್ ಹೈಕೋರ್ಟ್​ಗೆ ಅರ್ಜಿಯೊಂದನ್ನು ಸಲ್ಲಿಸಿದ್ದರು. ಏಪ್ರಿಲ್ 24ರಂದು ಸಿಬಿಐ ಎಫ್​ಐಆರ್ ದಾಖಲಿಸಿತ್ತು.

ಇದನ್ನೂ ಓದಿ: 35ನೇ ವಯಸ್ಸಿಗೆ ಕೇಂದ್ರ ಸಚಿವ ಸ್ಥಾನ! ಶಾಲಾ ಶಿಕ್ಷಕನಾಗಿ ಸಂಸದನಾದ ಯುವಕನಿಗೆ ಮೋದಿ ಮಣೆ

ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಸಿಬಿಐ ಆದಷ್ಟು ಬೇಗ ಅಪರಾಧಿಗಳನ್ನು ಕಂಡುಹಿಡಿಯುತ್ತದೆ ಹಾಗೂ ತನ್ನ ತನಿಖಾ ವಿಸ್ತರಿಸುತ್ತದೆ ಎಂಬ ಭರವಸೆಯಿದೆ. ಈ ವಿಚಾರದಲ್ಲಿ ತನಿಖಾಧಿಕಾರಿಗಳು ತಾವು ಮುಗ್ಧರು ಎಂದು ಹೇಳುವಂತಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.